<p><strong>ಹೈದರಾಬಾದ್</strong>: ಹೈದರಾಬಾದ್ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಅಗ್ನಿ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಿಲುಕೊಕೊಂಡಿದ್ದ ಸುಮಾರು 20ಕ್ಕೂ ಜನರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.</p>.ನೇಪಾಳ | ಟೇಕ್ಆಫ್ ವೇಳೆ ವಿಮಾನ ಪತನ: 18 ಮಂದಿ ಸಾವು, ಪೈಲಟ್ಗೆ ಗಾಯ.ಬಜೆಟ್ನಲ್ಲಿ ಜಾರ್ಖಂಡ್ ಕಡೆಗಣನೆ: ಕೇಂದ್ರದ ವಿರುದ್ಧ CM ಹೇಮಂತ್ ಸೊರೇನ್ ಕಿಡಿ. <p>ಕುಲ್ಸುಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲೆಯು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ,</p>.ಮುಂದುವರಿದ ಷೇರು ಮಾರುಕಟ್ಟೆ ಕುಸಿತ: ಆರಂಭಿಕ ವಹಿವಾಟಿನಲ್ಲಿ ಹೂಡಿಕೆದಾರರಿಗೆ ನಷ್ಟ.ಎರಡನೇ ತಲೆಮಾರಿನ ಸುಧಾರಣೆಗಳಿಗೆ ಒತ್ತು ನೀಡುವ ಅಗತ್ಯವಿದೆ: ಖರ್ಗೆ ಪ್ರತಿಪಾದನೆ.<p>ಅಗ್ನಿ ಅವಘಡದಲ್ಲಿ ಒಂದೇ ಕುಟುಂಬ ನಾಲ್ವರಿಗೆ ಸುಟ್ಟಗಾಯಗಳಾಗಿದ್ದು, ಮೂವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನೆಲಮಹಡಿಯಲ್ಲಿ ಕಟ್ಟಡದ ಮಾಲೀಕರು ಪಿಠೋಪಕರಣ ತಯಾರಿಕಾ ಘಟಕವನ್ನು ಹೊಂದಿದ್ದರು. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹೈದರಾಬಾದ್ನ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p><p>ಅಗ್ನಿ ಅವಘಡ ಸಂಭವಿಸಿದಾಗ ಕಟ್ಟಡದಲ್ಲಿ ಸಿಲುಕೊಕೊಂಡಿದ್ದ ಸುಮಾರು 20ಕ್ಕೂ ಜನರನ್ನು ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸ್ ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.</p>.ನೇಪಾಳ | ಟೇಕ್ಆಫ್ ವೇಳೆ ವಿಮಾನ ಪತನ: 18 ಮಂದಿ ಸಾವು, ಪೈಲಟ್ಗೆ ಗಾಯ.ಬಜೆಟ್ನಲ್ಲಿ ಜಾರ್ಖಂಡ್ ಕಡೆಗಣನೆ: ಕೇಂದ್ರದ ವಿರುದ್ಧ CM ಹೇಮಂತ್ ಸೊರೇನ್ ಕಿಡಿ. <p>ಕುಲ್ಸುಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ಬಳಿಕ ಬೆಂಕಿಯ ಕೆನ್ನಾಲೆಯು ಮೊದಲ ಮತ್ತು ಎರಡನೇ ಮಹಡಿಗೆ ವ್ಯಾಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಿದರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ,</p>.ಮುಂದುವರಿದ ಷೇರು ಮಾರುಕಟ್ಟೆ ಕುಸಿತ: ಆರಂಭಿಕ ವಹಿವಾಟಿನಲ್ಲಿ ಹೂಡಿಕೆದಾರರಿಗೆ ನಷ್ಟ.ಎರಡನೇ ತಲೆಮಾರಿನ ಸುಧಾರಣೆಗಳಿಗೆ ಒತ್ತು ನೀಡುವ ಅಗತ್ಯವಿದೆ: ಖರ್ಗೆ ಪ್ರತಿಪಾದನೆ.<p>ಅಗ್ನಿ ಅವಘಡದಲ್ಲಿ ಒಂದೇ ಕುಟುಂಬ ನಾಲ್ವರಿಗೆ ಸುಟ್ಟಗಾಯಗಳಾಗಿದ್ದು, ಮೂವರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ನೆಲಮಹಡಿಯಲ್ಲಿ ಕಟ್ಟಡದ ಮಾಲೀಕರು ಪಿಠೋಪಕರಣ ತಯಾರಿಕಾ ಘಟಕವನ್ನು ಹೊಂದಿದ್ದರು. ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣ ಇನ್ನೂ ಲಭ್ಯವಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>