ಲಖನೌ: ಫೆ.27ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡಮತದಾನ ಮಾಡಿದ ಸಮಾಜವಾದಿ ಪಕ್ಷದ 4 ಶಾಸಕರಿಗೆ ‘ವೈ ಕೆಟಗರಿ’ ಭದ್ರತೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಅಭಯ್ ಸಿಂಗ್ (ಗೋಸಾಯ್ಗಂಜ್), ಮನೋಜ್ ಕುಮಾರ್ ಪಾಂಡೆ (ಉಂಚಹರ್), ರಾಕೇಶ್ ಪ್ರತಾಪ್ ಸಿಂಗ್ (ಗೌರಿಗಂಜ್) ಹಾಗೂ ವಿನೋದ್ ಚತುರ್ವೇದಿ (ಕಲ್ಪಿ) ಅವರಿಗೆ ವೈ ಕೆಟಗರಿ ಭದ್ರತೆ ಕಲ್ಪಿಸಲಾಗಿದೆ.