<p><strong>ಹೋಶಿಯಾರ್ಪುರ (ಪಂಜಾಬ್):</strong> ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ.</p><p>ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಚಕ್ ಸಮಾನಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ತಮ್ಮ ಮನೆಯ ಬಳಿ ಆಟವಾಡುತ್ತಿದ್ದ ಬಾಲಕ ಗುರ್ಕರನ್ ಸಿಂಗ್ ಅಲ್ಲೇ ಸಮೀಪ ಹೊಸದಾಗಿ ಕೊರೆಯಲಾಗಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ.</p><p>ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಮಿಸಿದ ರಕ್ಷಣಾ ತಂಡಗಳು, 9 ಗಂಟೆಗಳ ಕಾರ್ಯಾಚರಣೆ ನಂತರ ತಡರಾತ್ರಿ 12.40 ರ ಸುಮಾರಿಗೆ ಬಾಲಕನನ್ನು ಹೊರಗೆ ತಂದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.</p><p>ಎನ್ಡಿಆರ್ಎಫ್ ಡೆಪ್ಯುಟಿ ಕಮಾಂಡೆಂಟ್ ಪಂಕಜ್ ಶರ್ಮಾ ಮಾತನಾಡಿ, ಮಣ್ಣು ನಿರಂತರವಾಗಿ ಕುಸಿಯುತ್ತಿದ್ದರಿಂದ ರಕ್ಷಣಾ ಕಾರ್ಯಾಚರಣೆಯು ಸವಾಲಿನಿಂದ ಕೂಡಿತ್ತು. ಆದರೂ ನಮ್ಮ ತಂಡ ಮಗುವನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇದು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪಂಜಾಬ್ ಪೊಲೀಸ್, ಜಿಲ್ಲಾ ಆಡಳಿತದ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಸ್ವಯಂಸೇವಕರ ತಂಡಗಳ ಜಂಟಿ ಪ್ರಯತ್ನವಾಗಿದೆ’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p><p>‘ಕಾರ್ಯಾಚರಣೆಯ ಆರಂಭದಲ್ಲಿ, ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ ಆತನೊಂದಿಗೆ ಮಾತನಾಡುವಂತೆ ಹೇಳಲಾಗಿತ್ತು. ಆ ಮೂಲಕ ಬಾಲಕನಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು. ಪೈಪ್ ಮೂಲಕ ಆಮ್ಲಜನಕವನ್ನು ಪೂರೈಸಲಾಗಿದೆ’ ಎಂದು ಹೇಳಿದ್ದಾರೆ.</p><p>ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದ ರಕ್ಷಣಾ ತಂಡದವರಿಗೆ ಕುಟುಂಬಸ್ಥರು, ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋಶಿಯಾರ್ಪುರ (ಪಂಜಾಬ್):</strong> ಸತತ ಒಂಬತ್ತು ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನನ್ನು ರಕ್ಷಿಸುವಲ್ಲಿ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ.</p><p>ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ಚಕ್ ಸಮಾನಾ ಗ್ರಾಮದಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ತಮ್ಮ ಮನೆಯ ಬಳಿ ಆಟವಾಡುತ್ತಿದ್ದ ಬಾಲಕ ಗುರ್ಕರನ್ ಸಿಂಗ್ ಅಲ್ಲೇ ಸಮೀಪ ಹೊಸದಾಗಿ ಕೊರೆಯಲಾಗಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ.</p><p>ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಮಿಸಿದ ರಕ್ಷಣಾ ತಂಡಗಳು, 9 ಗಂಟೆಗಳ ಕಾರ್ಯಾಚರಣೆ ನಂತರ ತಡರಾತ್ರಿ 12.40 ರ ಸುಮಾರಿಗೆ ಬಾಲಕನನ್ನು ಹೊರಗೆ ತಂದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.</p><p>ಎನ್ಡಿಆರ್ಎಫ್ ಡೆಪ್ಯುಟಿ ಕಮಾಂಡೆಂಟ್ ಪಂಕಜ್ ಶರ್ಮಾ ಮಾತನಾಡಿ, ಮಣ್ಣು ನಿರಂತರವಾಗಿ ಕುಸಿಯುತ್ತಿದ್ದರಿಂದ ರಕ್ಷಣಾ ಕಾರ್ಯಾಚರಣೆಯು ಸವಾಲಿನಿಂದ ಕೂಡಿತ್ತು. ಆದರೂ ನಮ್ಮ ತಂಡ ಮಗುವನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇದು ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪಂಜಾಬ್ ಪೊಲೀಸ್, ಜಿಲ್ಲಾ ಆಡಳಿತದ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯ ಸ್ವಯಂಸೇವಕರ ತಂಡಗಳ ಜಂಟಿ ಪ್ರಯತ್ನವಾಗಿದೆ’ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.</p><p>‘ಕಾರ್ಯಾಚರಣೆಯ ಆರಂಭದಲ್ಲಿ, ಬಾಲಕನ ತಾಯಿಯನ್ನು ಸ್ಥಳಕ್ಕೆ ಕರೆಸಿ ಆತನೊಂದಿಗೆ ಮಾತನಾಡುವಂತೆ ಹೇಳಲಾಗಿತ್ತು. ಆ ಮೂಲಕ ಬಾಲಕನಿಗೆ ಧೈರ್ಯ ತುಂಬುವ ಕೆಲಸ ಮಾಡಲಾಯಿತು. ಪೈಪ್ ಮೂಲಕ ಆಮ್ಲಜನಕವನ್ನು ಪೂರೈಸಲಾಗಿದೆ’ ಎಂದು ಹೇಳಿದ್ದಾರೆ.</p><p>ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದ ರಕ್ಷಣಾ ತಂಡದವರಿಗೆ ಕುಟುಂಬಸ್ಥರು, ಗ್ರಾಮಸ್ಥರು ಧನ್ಯವಾದ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>