<p><strong>ಮುಂಬೈ</strong>: ‘ಧ್ವನಿ ವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ನೀತಿ ರೂಪಿಸಬೇಕು ಹಾಗೂ ಇದನ್ನು ಮೊದಲು ಬಿಹಾರ, ದೆಹಲಿ, ಗುಜರಾತ್ನಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾರಿಗೊಳಿಸಬೇಕು’ ಎಂದು ಶಿವಸೇನಾ ಪಕ್ಷದ ಮುಖಂಡ, ಸಂಸದ ಸಂಜಯ್ ರಾವುತ್ ಆಗ್ರಹಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧ್ವನಿ ವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ. ಅಲ್ಲದೆ ಈ ನೆಲದ ಕಾನೂನಿಗೆ ಮಹಾರಾಷ್ಟ್ರಬದ್ಧವಾಗಿರುವುದರಿಂದ ಸಹಜವಾಗಿಯೇ ಆ ನೀತಿಯನ್ನು ನಾವು ಪಾಲಿಸುತ್ತೇವೆ’ ಎಂದು ಹೇಳಿದರು.</p>.<p>‘ಧ್ವನಿವರ್ಧಕಗಳ ಬಳಕೆ ವಿಷಯದಲ್ಲಿ ನಿಮ್ಮವರೇ (ಬಿಜೆಪಿ) ವಿವಾದವನ್ನುಂಟು ಮಾಡಿದ್ದರಿಂದ ರಾಷ್ಟ್ರೀಯ ನೀತಿಯ ಅವಶ್ಯಕತೆ ಇದೆ. ಉತ್ತರ ಪ್ರದೇಶ, ಗುಜರಾತ್ನಲ್ಲಿ ಇದುವರೆಗೂ ಧ್ವನಿವರ್ಧಕಗಳನ್ನು ತೆರವು ಮಾಡಿಲ್ಲ’ ಎಂದು ಹೇಳಿದರು.</p>.<p>‘ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಯ ನೀತಿಯನ್ನು ರೂಪಿಸಿದೆ. ಆದರೆ, ಈಶಾನ್ಯ ರಾಜ್ಯಗಳ ಹಾಗೂ ಗೋವಾ ಮುಖ್ಯಮಂತ್ರಿ ಇದನ್ನು ವಿರೋಧಿಸಿದ್ದರಿಂದ ಆ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಲ್ಲ. ಈ ವಿಷಯದಲ್ಲಿ ರಾಷ್ಟ್ರೀಯ ನೀತಿ ಎಲ್ಲಿದೆ?’ ಎಂದು ರಾವುತ್ ಅವರು ಬಿಜೆಪಿಯನ್ನು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಧ್ವನಿ ವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ನೀತಿ ರೂಪಿಸಬೇಕು ಹಾಗೂ ಇದನ್ನು ಮೊದಲು ಬಿಹಾರ, ದೆಹಲಿ, ಗುಜರಾತ್ನಂತಹ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಜಾರಿಗೊಳಿಸಬೇಕು’ ಎಂದು ಶಿವಸೇನಾ ಪಕ್ಷದ ಮುಖಂಡ, ಸಂಸದ ಸಂಜಯ್ ರಾವುತ್ ಆಗ್ರಹಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧ್ವನಿ ವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ. ಅಲ್ಲದೆ ಈ ನೆಲದ ಕಾನೂನಿಗೆ ಮಹಾರಾಷ್ಟ್ರಬದ್ಧವಾಗಿರುವುದರಿಂದ ಸಹಜವಾಗಿಯೇ ಆ ನೀತಿಯನ್ನು ನಾವು ಪಾಲಿಸುತ್ತೇವೆ’ ಎಂದು ಹೇಳಿದರು.</p>.<p>‘ಧ್ವನಿವರ್ಧಕಗಳ ಬಳಕೆ ವಿಷಯದಲ್ಲಿ ನಿಮ್ಮವರೇ (ಬಿಜೆಪಿ) ವಿವಾದವನ್ನುಂಟು ಮಾಡಿದ್ದರಿಂದ ರಾಷ್ಟ್ರೀಯ ನೀತಿಯ ಅವಶ್ಯಕತೆ ಇದೆ. ಉತ್ತರ ಪ್ರದೇಶ, ಗುಜರಾತ್ನಲ್ಲಿ ಇದುವರೆಗೂ ಧ್ವನಿವರ್ಧಕಗಳನ್ನು ತೆರವು ಮಾಡಿಲ್ಲ’ ಎಂದು ಹೇಳಿದರು.</p>.<p>‘ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಯ ನೀತಿಯನ್ನು ರೂಪಿಸಿದೆ. ಆದರೆ, ಈಶಾನ್ಯ ರಾಜ್ಯಗಳ ಹಾಗೂ ಗೋವಾ ಮುಖ್ಯಮಂತ್ರಿ ಇದನ್ನು ವಿರೋಧಿಸಿದ್ದರಿಂದ ಆ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿಲ್ಲ. ಈ ವಿಷಯದಲ್ಲಿ ರಾಷ್ಟ್ರೀಯ ನೀತಿ ಎಲ್ಲಿದೆ?’ ಎಂದು ರಾವುತ್ ಅವರು ಬಿಜೆಪಿಯನ್ನು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>