<p><strong>ನವದೆಹಲಿ:</strong> ಅಮೆರಿಕದ ಹೊಸ ಸರ್ಕಾರ ‘ದೇಶಿಯ ಕಂಪನಿಯ ಉತ್ಪನ್ನಗಳು ಮತ್ತು ಸೇವೆಗಳಿಗೆ‘ ಆದ್ಯತೆ ನೀಡುತ್ತಿ ರುವ ಮಾದರಿಯಲ್ಲೇ ಭಾರತದಲ್ಲೂ ‘ಎಲ್ಲ ಒಪ್ಪಂದ, ವ್ಯವಹಾರಗಳಲ್ಲೂ ದೇಶಿಯ ಕಂಪನಿಗಳ ಉತ್ಪನ್ನಗಳು ಮತ್ತು ಸೇವೆಗಳಿಗೆ‘ ಆದ್ಯತೆ ನೀಡುವಂತೆ ನಿಯಮ ರೂಪಿಸಬೇಕು ಎಂದು ಸಂಸದರು ಬುಧವಾರ ರಾಜ್ಯಸಭೆಯಲ್ಲಿ ಒತ್ತಾಯಿಸಿದರು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವಿನಯ್ ಪಿ ಸಹಸ್ರಬುದ್ಧೆ, ‘ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರು, ‘ಅಮೆರಿಕದ ಕಂಪನಿಗಳು ತಯಾರಿಸುವ ಉತ್ಪನ್ನಗಳು ಮತ್ತು ಸೇವೆಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ನಮ್ಮ ದೇಶದಲ್ಲೂ ಇದೇ ಮಾದರಿ ಅನುಸರಿಸಬೇಕು‘ ಎಂದರು.</p>.<p>‘ಅನುಭವ ಹಾಗೂ ಇನ್ನಿತರ ಅರ್ಹತಾ ಮಾನದಂಡಗಳಿಂದಾಗಿ ಸ್ಥಳೀಯ ಸಲಹಾ ಸಂಸ್ಥೆಗಳಿಗೆ ಸಿಗಬೇಕಾದ ಆದ್ಯತೆ ವಿದೇಶಿ ಸಂಸ್ಥೆಗಳ ಪಾಲಾಗುತ್ತಿದೆ. ಇದರಿಂದ ಸ್ಥಳೀಯ ಕಂಪನಿಗಳು ನಷ್ಟ ಅನುಭವಿಸುತ್ತಿವೆ‘ ಎಂದು ಅವರು ತಿಳಿಸಿದರು.</p>.<p>‘ಬೃಹದಾಕಾರವಾಗಿ ಬೆಳೆದಿರುವ ಕನ್ಸಲ್ಟೆನ್ಸಿ ಕ್ಷೇತ್ರದಲ್ಲಿ ವಿದೇಶಿ ಕಂಪನಿಗಳ ಪ್ರಾಬಲ್ಯ ಹೆಚ್ಚಾಗಿದೆ. ಕೈಗಾರಿಕಾ ಸಂಘಟನೆಯ ಅಸೋಚಾಮ್ ಪ್ರಕಾರ, ಈ ಕನ್ಸಲ್ಟೆನ್ಸಿ ಕಂಪನಿಗಳು 2020ರ ವಾರ್ಷಿಕ ವಹಿವಾಟು ₹27 ಸಾವಿರ ಕೋಟಿ. ಈ ಹಿನ್ನೆಲೆಯಲ್ಲಿ ದೇಶಿಯ ಕಂಪನಿಗಳಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ‘ ಎಂದು ಸಹಸ್ರಬುದ್ದೆ ಹೇಳಿದ್ದಾರೆ.</p>.<p>‘ಸಾರ್ವಜನಿಕ ನೀತಿ ಎಂಬುದು ಒಂದು ಆಕರ್ಷಕ ಕ್ಷೇತ್ರವಾಗಿದ್ದು, ಆ ಕ್ಷೇತ್ರದ ವ್ಯಾಪ್ತಿಗೆ ಬರುವ ಕನ್ಸಲ್ಟೆನ್ಸಿ ಕಂಪನಿಗಳಲ್ಲಿ ಶೇ 80ರಷ್ಟು ಪದವೀಧರರನ್ನು ಉದ್ಯೋಗಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಹೀಗಾಗಿ, ದೇಶಿಯ ಕನ್ಸಲ್ಟೆನ್ಸಿ ಕಂಪನಿಗೆ ಆದ್ಯತೆ ನೀಡಬೇಕು ಎಂಬ ನಿಯಮವನ್ನು ರೂಪಿಸುವುದು ಅಗತ್ಯವಾಗಿದೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಮೆರಿಕದ ಹೊಸ ಸರ್ಕಾರ ‘ದೇಶಿಯ ಕಂಪನಿಯ ಉತ್ಪನ್ನಗಳು ಮತ್ತು ಸೇವೆಗಳಿಗೆ‘ ಆದ್ಯತೆ ನೀಡುತ್ತಿ ರುವ ಮಾದರಿಯಲ್ಲೇ ಭಾರತದಲ್ಲೂ ‘ಎಲ್ಲ ಒಪ್ಪಂದ, ವ್ಯವಹಾರಗಳಲ್ಲೂ ದೇಶಿಯ ಕಂಪನಿಗಳ ಉತ್ಪನ್ನಗಳು ಮತ್ತು ಸೇವೆಗಳಿಗೆ‘ ಆದ್ಯತೆ ನೀಡುವಂತೆ ನಿಯಮ ರೂಪಿಸಬೇಕು ಎಂದು ಸಂಸದರು ಬುಧವಾರ ರಾಜ್ಯಸಭೆಯಲ್ಲಿ ಒತ್ತಾಯಿಸಿದರು.</p>.<p>ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವಿನಯ್ ಪಿ ಸಹಸ್ರಬುದ್ಧೆ, ‘ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರು, ‘ಅಮೆರಿಕದ ಕಂಪನಿಗಳು ತಯಾರಿಸುವ ಉತ್ಪನ್ನಗಳು ಮತ್ತು ಸೇವೆಗಳಿಗೆ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ನಮ್ಮ ದೇಶದಲ್ಲೂ ಇದೇ ಮಾದರಿ ಅನುಸರಿಸಬೇಕು‘ ಎಂದರು.</p>.<p>‘ಅನುಭವ ಹಾಗೂ ಇನ್ನಿತರ ಅರ್ಹತಾ ಮಾನದಂಡಗಳಿಂದಾಗಿ ಸ್ಥಳೀಯ ಸಲಹಾ ಸಂಸ್ಥೆಗಳಿಗೆ ಸಿಗಬೇಕಾದ ಆದ್ಯತೆ ವಿದೇಶಿ ಸಂಸ್ಥೆಗಳ ಪಾಲಾಗುತ್ತಿದೆ. ಇದರಿಂದ ಸ್ಥಳೀಯ ಕಂಪನಿಗಳು ನಷ್ಟ ಅನುಭವಿಸುತ್ತಿವೆ‘ ಎಂದು ಅವರು ತಿಳಿಸಿದರು.</p>.<p>‘ಬೃಹದಾಕಾರವಾಗಿ ಬೆಳೆದಿರುವ ಕನ್ಸಲ್ಟೆನ್ಸಿ ಕ್ಷೇತ್ರದಲ್ಲಿ ವಿದೇಶಿ ಕಂಪನಿಗಳ ಪ್ರಾಬಲ್ಯ ಹೆಚ್ಚಾಗಿದೆ. ಕೈಗಾರಿಕಾ ಸಂಘಟನೆಯ ಅಸೋಚಾಮ್ ಪ್ರಕಾರ, ಈ ಕನ್ಸಲ್ಟೆನ್ಸಿ ಕಂಪನಿಗಳು 2020ರ ವಾರ್ಷಿಕ ವಹಿವಾಟು ₹27 ಸಾವಿರ ಕೋಟಿ. ಈ ಹಿನ್ನೆಲೆಯಲ್ಲಿ ದೇಶಿಯ ಕಂಪನಿಗಳಿಗೆ ಆದ್ಯತೆ ನೀಡುವುದು ಅಗತ್ಯವಾಗಿದೆ‘ ಎಂದು ಸಹಸ್ರಬುದ್ದೆ ಹೇಳಿದ್ದಾರೆ.</p>.<p>‘ಸಾರ್ವಜನಿಕ ನೀತಿ ಎಂಬುದು ಒಂದು ಆಕರ್ಷಕ ಕ್ಷೇತ್ರವಾಗಿದ್ದು, ಆ ಕ್ಷೇತ್ರದ ವ್ಯಾಪ್ತಿಗೆ ಬರುವ ಕನ್ಸಲ್ಟೆನ್ಸಿ ಕಂಪನಿಗಳಲ್ಲಿ ಶೇ 80ರಷ್ಟು ಪದವೀಧರರನ್ನು ಉದ್ಯೋಗಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಹೀಗಾಗಿ, ದೇಶಿಯ ಕನ್ಸಲ್ಟೆನ್ಸಿ ಕಂಪನಿಗೆ ಆದ್ಯತೆ ನೀಡಬೇಕು ಎಂಬ ನಿಯಮವನ್ನು ರೂಪಿಸುವುದು ಅಗತ್ಯವಾಗಿದೆ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>