<p><strong>ಭುವನೇಶ್ವರ</strong>: ಜಾರಿ ನಿರ್ದೇಶನಾಲಯದ ( ಇ.ಡಿ) ಅಧಿಕಾರಿಗಳಂತೆ ವರ್ತಿಸಿ ಸರ್ಕಾರಿ ಅಧಿಕಾರಿಗಳನ್ನು ವಂಚಿಸಿ, ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಬಂಧಿಸಿರುವ ಘಟನೆ ಒಡಿಶಾದ ಧೆಂಕೆನಲ್ ಜಿಲ್ಲೆಯಲ್ಲಿ ನಡೆದಿದೆ.</p><p>ಆರೋಪಿಗಳನ್ನು ತಾರಿಣಿಸೇನ್ ಮೊಹಾಪಾತ್ರ (30) ಮತ್ತು ಬ್ರಹ್ಮಶಂಕರ್ ಮಹಾಪಾತ್ರ (27) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಶನಿವಾರ ಧೆಂಕನಲ್ನಲ್ಲಿ ಆರೋಪಿಗಳನ್ನು ಬಂಧಿಸಿದೆ.</p><p>ಆರೋಪಿಗಳು ದೊಡ್ಡ ಮೊತ್ತದ ಸಾಲವನ್ನು ಪಡೆದಿದ್ದರು. ಆದರೆ ಸಾಲ ತೀರಿಸಲು ಸಾಧ್ಯವಾಗದಿದ್ದಾಗ ಸರ್ಕಾರಿ ನೌಕರರಿಗೆ ವಂಚಿಸಲು ಈ ರೀತಿ ಯೋಜನೆ ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಭುವನೇಶ್ವರದ ಹೆಚ್ಚುವರಿ ಜಾರಿ ನಿರ್ದೇಶನಾಲಯದ ನಿರ್ದೇಶಕರು ಎಂದು ಹೇಳಿಕೊಂಡಿದ್ದ ಆರೋಪಿಗಳು ವಿವಿಧ ಸರ್ಕಾರಿ ಇಲಾಖೆಗಳ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದರು. ಕೆಲ ಅಧಿಕಾರಿಗಳಿಂದ ₹16 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡುವಲ್ಲಿಯೂ ಯಶಸ್ವಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣವನ್ನು ಪಡೆಯುತ್ತಿದ್ದರು. ಹಾಗೂ ಅಧಿಕಾರಿಗಳಿಗೆ ನಕಲಿ ಚೀಟಿಗಳನ್ನು ನೀಡುತ್ತಿದ್ದರು.</p><p>ಛತ್ರಪುರ ಹೆಚ್ಚುವರಿ ಜಿಲ್ಲಾಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಒಂದು ಲ್ಯಾಪ್ಟಾಪ್, ಡೆಸ್ಕ್ಟಾಪ್, ಐದು ಮೊಬೈಲ್ಗಳು, ಬ್ಯಾಂಕ್ ಪಾಸ್ಬುಕ್, ಚೆಕ್ಬುಕ್ಗಳು, ನಕಲಿ ಗುರುತಿನ ಚೀಟಿಗಳು ಸೇರಿದಂತೆ 17 ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಟಿಎಫ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಜಾರಿ ನಿರ್ದೇಶನಾಲಯದ ( ಇ.ಡಿ) ಅಧಿಕಾರಿಗಳಂತೆ ವರ್ತಿಸಿ ಸರ್ಕಾರಿ ಅಧಿಕಾರಿಗಳನ್ನು ವಂಚಿಸಿ, ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಬಂಧಿಸಿರುವ ಘಟನೆ ಒಡಿಶಾದ ಧೆಂಕೆನಲ್ ಜಿಲ್ಲೆಯಲ್ಲಿ ನಡೆದಿದೆ.</p><p>ಆರೋಪಿಗಳನ್ನು ತಾರಿಣಿಸೇನ್ ಮೊಹಾಪಾತ್ರ (30) ಮತ್ತು ಬ್ರಹ್ಮಶಂಕರ್ ಮಹಾಪಾತ್ರ (27) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಶನಿವಾರ ಧೆಂಕನಲ್ನಲ್ಲಿ ಆರೋಪಿಗಳನ್ನು ಬಂಧಿಸಿದೆ.</p><p>ಆರೋಪಿಗಳು ದೊಡ್ಡ ಮೊತ್ತದ ಸಾಲವನ್ನು ಪಡೆದಿದ್ದರು. ಆದರೆ ಸಾಲ ತೀರಿಸಲು ಸಾಧ್ಯವಾಗದಿದ್ದಾಗ ಸರ್ಕಾರಿ ನೌಕರರಿಗೆ ವಂಚಿಸಲು ಈ ರೀತಿ ಯೋಜನೆ ರೂಪಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಭುವನೇಶ್ವರದ ಹೆಚ್ಚುವರಿ ಜಾರಿ ನಿರ್ದೇಶನಾಲಯದ ನಿರ್ದೇಶಕರು ಎಂದು ಹೇಳಿಕೊಂಡಿದ್ದ ಆರೋಪಿಗಳು ವಿವಿಧ ಸರ್ಕಾರಿ ಇಲಾಖೆಗಳ ಸುಮಾರು 300ಕ್ಕೂ ಹೆಚ್ಚು ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದ್ದರು. ಕೆಲ ಅಧಿಕಾರಿಗಳಿಂದ ₹16 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡುವಲ್ಲಿಯೂ ಯಶಸ್ವಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆರೋಪಿಗಳು ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣವನ್ನು ಪಡೆಯುತ್ತಿದ್ದರು. ಹಾಗೂ ಅಧಿಕಾರಿಗಳಿಗೆ ನಕಲಿ ಚೀಟಿಗಳನ್ನು ನೀಡುತ್ತಿದ್ದರು.</p><p>ಛತ್ರಪುರ ಹೆಚ್ಚುವರಿ ಜಿಲ್ಲಾಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಒಂದು ಲ್ಯಾಪ್ಟಾಪ್, ಡೆಸ್ಕ್ಟಾಪ್, ಐದು ಮೊಬೈಲ್ಗಳು, ಬ್ಯಾಂಕ್ ಪಾಸ್ಬುಕ್, ಚೆಕ್ಬುಕ್ಗಳು, ನಕಲಿ ಗುರುತಿನ ಚೀಟಿಗಳು ಸೇರಿದಂತೆ 17 ಎಟಿಎಂ ಕಾರ್ಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಟಿಎಫ್ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>