<p><strong>ಹೈದರಾಬಾದ್</strong>: ಆಂಧ್ರ ಪ್ರದೇಶದ ಸರ್ಕಾರಿ ಬಸ್ಗಳಲ್ಲಿ ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸುವ ಸುಳಿವನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೀಡಿದ್ದಾರೆ.</p>.<p>ಮುಖ್ಯಮಂತ್ರಿಯು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದೆ.</p>.<p>ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಪೂರ್ವದಲ್ಲಿ ತೆಲುಗು ದೇಶಂ– ಜನ ಸೇನಾದ ಜಂಟಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ‘ಸೂಪರ್ ಸಿಕ್ಸ್’ ಭರವಸೆಗಳಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯೂ ಒಂದಾಗಿತ್ತು.</p>.<p>ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಯೋಜನೆ ಇನ್ನೂ ಜಾರಿಗೊಂಡಿಲ್ಲ. ಸಂಕ್ರಾಂತಿ ಹಬ್ಬದಿಂದ ಜಾರಿಗೊಳ್ಳಲಿದೆ ಎಂದು ನಿರೀಕ್ಷಿಸಿದ್ದ ಈ ಯೋಜನೆಯನ್ನು ಮತ್ತೆ ಮುಂದೂಡಲಾಗಿದೆ. </p>.<p>ಯೋಜನೆ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಲಿಕ್ಕಾಗಿ ಎಪಿಆರ್ಟಿಸಿ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿದ್ದಾರೆ. ಕ್ಯಾಬಿನೆಟ್ ಉಪಸಮಿತಿಯು ಸಹ ಜ. 2ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆಂಧ್ರ ಪ್ರದೇಶದ ಸರ್ಕಾರಿ ಬಸ್ಗಳಲ್ಲಿ ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಯೋಜನೆಯನ್ನು ಜಾರಿಗೊಳಿಸುವ ಸುಳಿವನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೀಡಿದ್ದಾರೆ.</p>.<p>ಮುಖ್ಯಮಂತ್ರಿಯು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದೆ.</p>.<p>ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗೂ ಪೂರ್ವದಲ್ಲಿ ತೆಲುಗು ದೇಶಂ– ಜನ ಸೇನಾದ ಜಂಟಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ‘ಸೂಪರ್ ಸಿಕ್ಸ್’ ಭರವಸೆಗಳಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯೂ ಒಂದಾಗಿತ್ತು.</p>.<p>ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಯೋಜನೆ ಇನ್ನೂ ಜಾರಿಗೊಂಡಿಲ್ಲ. ಸಂಕ್ರಾಂತಿ ಹಬ್ಬದಿಂದ ಜಾರಿಗೊಳ್ಳಲಿದೆ ಎಂದು ನಿರೀಕ್ಷಿಸಿದ್ದ ಈ ಯೋಜನೆಯನ್ನು ಮತ್ತೆ ಮುಂದೂಡಲಾಗಿದೆ. </p>.<p>ಯೋಜನೆ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಲಿಕ್ಕಾಗಿ ಎಪಿಆರ್ಟಿಸಿ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿದ್ದಾರೆ. ಕ್ಯಾಬಿನೆಟ್ ಉಪಸಮಿತಿಯು ಸಹ ಜ. 2ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>