<p><strong>ಅಮರಾವತಿ:</strong> ರಾಜ್ಯಾದ್ಯಂತ 15,000 ಗಣೇಶ ಪ್ರತಿಷ್ಠಾಪನ ಮಂಡಲಿಗಳಿಗೆ ಉಚಿತ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ₹25 ಕೋಟಿಗಳನ್ನು ಹಂಚಿಕೆ ಮಾಡಿದೆ ಎಂದು ಆಂಧ್ರಪ್ರದೇಶದ ಇಂಧನ ಸಚಿವ ಜಿ. ರವಿ ಕುಮಾರ್ ಹೇಳಿದ್ದಾರೆ. </p><p>ರಾಜ್ಯದಲ್ಲಿ ನಡೆಯುವ ಗಣೇಶ ಉತ್ಸವ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನಡೆಯಲಿ ಎಂಬ ಉದ್ದೇಶದಿಂದ ಎನ್ಡಿಎ ಸಮ್ಮಿಶ್ರ ಸರ್ಕಾರವು ₹25 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರವಿ ಕುಮಾರ್ ಹೇಳಿದರು. </p><p>ಹಿಂದಿನ ಸರ್ಕಾರವು ಆಂಧ್ರಪ್ರದೇಶವನ್ನು ಭಾರೀ ಸಾಲಕ್ಕೆ ತಳ್ಳಿದೆ. ಅಪೂರ್ಣ ಯೋಜನೆಗಳಿಂದ ನಾಗರಿಕರನ್ನು ದಾರಿ ತಪ್ಪಿಸಿದೆ ಎಂದು ಅವರು ಆರೋಪಿಸಿದರು. ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದ ವೈಎಸ್ಆರ್ಸಿಪಿ ಶೂನ್ಯ ಅಭಿವೃದ್ದಿಯನ್ನು ಸಾಧಿಸಿದೆ ಕುಮಾರ್ ಟೀಕಿಸಿದರು. </p><p>ನಮ್ಮ ಎನ್ಡಿಎ ಸರ್ಕಾರವು ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಚುನಾವಣಾ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಕಲ್ಯಾಣ ರಾಜ್ಯದ ಕಲ್ಪನೆಯಡಿ ಹಲವು ಜನಮುಖಿ ಯೋಜನೆಗಳನ್ನು ರೂಪಿಸಲಾಗಿದೆ. ರೆಡ್ಡಿಯವರ ಸರ್ಕಾರದ ಸುಳ್ಳು ಭರವಸೆ ಹಾಗೂ ಅಪ್ರಯೋಜಕತೆಗಿಂತ ನಮ್ಮ ಸರ್ಕಾರ ಭಿನ್ನವಾಗಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ರಾಜ್ಯಾದ್ಯಂತ 15,000 ಗಣೇಶ ಪ್ರತಿಷ್ಠಾಪನ ಮಂಡಲಿಗಳಿಗೆ ಉಚಿತ ವಿದ್ಯುತ್ ಒದಗಿಸಲು ರಾಜ್ಯ ಸರ್ಕಾರ ₹25 ಕೋಟಿಗಳನ್ನು ಹಂಚಿಕೆ ಮಾಡಿದೆ ಎಂದು ಆಂಧ್ರಪ್ರದೇಶದ ಇಂಧನ ಸಚಿವ ಜಿ. ರವಿ ಕುಮಾರ್ ಹೇಳಿದ್ದಾರೆ. </p><p>ರಾಜ್ಯದಲ್ಲಿ ನಡೆಯುವ ಗಣೇಶ ಉತ್ಸವ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನಡೆಯಲಿ ಎಂಬ ಉದ್ದೇಶದಿಂದ ಎನ್ಡಿಎ ಸಮ್ಮಿಶ್ರ ಸರ್ಕಾರವು ₹25 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರವಿ ಕುಮಾರ್ ಹೇಳಿದರು. </p><p>ಹಿಂದಿನ ಸರ್ಕಾರವು ಆಂಧ್ರಪ್ರದೇಶವನ್ನು ಭಾರೀ ಸಾಲಕ್ಕೆ ತಳ್ಳಿದೆ. ಅಪೂರ್ಣ ಯೋಜನೆಗಳಿಂದ ನಾಗರಿಕರನ್ನು ದಾರಿ ತಪ್ಪಿಸಿದೆ ಎಂದು ಅವರು ಆರೋಪಿಸಿದರು. ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ನೇತೃತ್ವದ ವೈಎಸ್ಆರ್ಸಿಪಿ ಶೂನ್ಯ ಅಭಿವೃದ್ದಿಯನ್ನು ಸಾಧಿಸಿದೆ ಕುಮಾರ್ ಟೀಕಿಸಿದರು. </p><p>ನಮ್ಮ ಎನ್ಡಿಎ ಸರ್ಕಾರವು ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಚುನಾವಣಾ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಕಲ್ಯಾಣ ರಾಜ್ಯದ ಕಲ್ಪನೆಯಡಿ ಹಲವು ಜನಮುಖಿ ಯೋಜನೆಗಳನ್ನು ರೂಪಿಸಲಾಗಿದೆ. ರೆಡ್ಡಿಯವರ ಸರ್ಕಾರದ ಸುಳ್ಳು ಭರವಸೆ ಹಾಗೂ ಅಪ್ರಯೋಜಕತೆಗಿಂತ ನಮ್ಮ ಸರ್ಕಾರ ಭಿನ್ನವಾಗಿದೆ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>