<p><strong>ಚೆನ್ನೈ</strong>: ಗ್ರೇಟರ್ ಚೆನ್ನೈ ಕಾರ್ಪೊರೇಷನ್ನ(ಜಿಸಿಸಿ) 31,000ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರಿಗೆ ಉಚಿತ ಊಟ ನೀಡುವ ಯೋಜನೆಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಚಾಲನೆ ನೀಡಿದ್ದಾರೆ.</p><p> ನಗರದಾದ್ಯಂತ ಜಿಸಿಸಿ ಒಡೆತನದ ಕಟ್ಟಡಗಳಲ್ಲಿ ಕೆಲಸ ಮಾಡುವ ನೈರ್ಮಲ್ಯ ಕಾರ್ಮಿಕರಿಗೆ ಅವರ ಪಾಳಿ ಸಮಯಕ್ಕೆ ಅನುಗುಣವಾಗಿ ಟಿಫಿನ್ ಬಾಕ್ಸ್ಗಳಲ್ಲಿ ಉಪಾಹಾರ, ಮಧ್ಯಾಹ್ನ ಅಥವಾ ರಾತ್ರಿ ಊಟವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. </p><p>ಡಿಸೆಂಬರ್ 6 ರಿಂದ ರಾಜ್ಯದ ಉಳಿದ 24 ಪಟ್ಟಣ ಪಂಚಾಯಿತಿ ಮತ್ತು 138 ಪುರಸಭೆಗಳಿಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ. </p><p>ಚೆನ್ನೈನಲ್ಲಿ 31,373 ನೈರ್ಮಲ್ಯ ಕಾರ್ಮಿಕರಿಗೆ ಪ್ರಯೋಜನವಾಗುವ ಈ ಯೋಜನೆಯನ್ನು ₹186 ಕೋಟಿ ವೆಚ್ಚದಲ್ಲಿ ಜಾರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನೈರ್ಮಲ್ಯ ಕಾರ್ಮಿಕರ ಅಚಲ ಬದ್ಧತೆ ಮತ್ತು ಸಮರ್ಪಣೆಗಾಗಿ ಅವರನ್ನು ಶ್ಲಾಘಿಸಿದ ಸ್ಟಾಲಿನ್, ಸರ್ಕಾರವು ಚೆನ್ನೈ ನಗರದ ಎಲ್ಲ 200 ವಾರ್ಡ್ಗಳಲ್ಲಿ ಶೌಚಾಲಯಗಳು ಮತ್ತು ಬಟ್ಟೆ ಬದಲಾಯಿಸಲು ಸ್ಥಳಾವಕಾಶದೊಂದಿಗೆ ವಿಶ್ರಾಂತಿ ಕೋಣೆಗಳನ್ನು ಸ್ಥಾಪಿಸಲಾಗುವುದು. ಇದು ನೈರ್ಮಲ್ಯ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.</p><p>‘ನಾನು ಮಾತ್ರವಲ್ಲ, ಇಡೀ ಚೆನ್ನೈ ಪಾಲಿಕೆ ನಿಮ್ಮ ಸಮರ್ಪಿತ ಸೇವೆಗೆ ಋಣಿಯಾಗಿದೆ. ಹೊಸ ಯೋಜನೆಯು ಕಾರ್ಮಿಕರಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತದೆ. ಆಹಾರ ಬಿಸಿಯಾಗಿರಲು ಸ್ಟೀಲ್ ಲಂಚ್ ಬಾಕ್ಸ್ಗಳನ್ನು ನೀಡಲಾಗುವುದು’ಎಂದು ಸ್ಟಾಲಿನ್ ಹೇಳಿದ್ದಾರೆ.</p><p>ಕಲೈವಾನರ್ ಅರಂಗಂನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಯೋಜನೆಯನ್ನು ಉದ್ಘಾಟಿಸಿದ ಸ್ಟಾಲಿನ್, ಚೆನ್ನೈ ಕಾರ್ಪೊರೇಷನ್ನ ಎಲ್ಲ 200 ವಾರ್ಡ್ಗಳಲ್ಲಿ ನೈರ್ಮಲ್ಯ ಕಾರ್ಮಿಕರಿಗಾಗಿ ವಿಶೇಷವಾದ 300 ಚದರ ಅಡಿಯ ವಿಶ್ರಾಂತಿ ಕೊಠಡಿಗಳು, ಬಟ್ಟೆ ಬದಲಾಯಿಸುವ ಕೊಠಡಿಗಳು ಮತ್ತು ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಗ್ರೇಟರ್ ಚೆನ್ನೈ ಕಾರ್ಪೊರೇಷನ್ನ(ಜಿಸಿಸಿ) 31,000ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರಿಗೆ ಉಚಿತ ಊಟ ನೀಡುವ ಯೋಜನೆಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಚಾಲನೆ ನೀಡಿದ್ದಾರೆ.</p><p> ನಗರದಾದ್ಯಂತ ಜಿಸಿಸಿ ಒಡೆತನದ ಕಟ್ಟಡಗಳಲ್ಲಿ ಕೆಲಸ ಮಾಡುವ ನೈರ್ಮಲ್ಯ ಕಾರ್ಮಿಕರಿಗೆ ಅವರ ಪಾಳಿ ಸಮಯಕ್ಕೆ ಅನುಗುಣವಾಗಿ ಟಿಫಿನ್ ಬಾಕ್ಸ್ಗಳಲ್ಲಿ ಉಪಾಹಾರ, ಮಧ್ಯಾಹ್ನ ಅಥವಾ ರಾತ್ರಿ ಊಟವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ. </p><p>ಡಿಸೆಂಬರ್ 6 ರಿಂದ ರಾಜ್ಯದ ಉಳಿದ 24 ಪಟ್ಟಣ ಪಂಚಾಯಿತಿ ಮತ್ತು 138 ಪುರಸಭೆಗಳಿಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ. </p><p>ಚೆನ್ನೈನಲ್ಲಿ 31,373 ನೈರ್ಮಲ್ಯ ಕಾರ್ಮಿಕರಿಗೆ ಪ್ರಯೋಜನವಾಗುವ ಈ ಯೋಜನೆಯನ್ನು ₹186 ಕೋಟಿ ವೆಚ್ಚದಲ್ಲಿ ಜಾರಿಗೆ ತರಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ನೈರ್ಮಲ್ಯ ಕಾರ್ಮಿಕರ ಅಚಲ ಬದ್ಧತೆ ಮತ್ತು ಸಮರ್ಪಣೆಗಾಗಿ ಅವರನ್ನು ಶ್ಲಾಘಿಸಿದ ಸ್ಟಾಲಿನ್, ಸರ್ಕಾರವು ಚೆನ್ನೈ ನಗರದ ಎಲ್ಲ 200 ವಾರ್ಡ್ಗಳಲ್ಲಿ ಶೌಚಾಲಯಗಳು ಮತ್ತು ಬಟ್ಟೆ ಬದಲಾಯಿಸಲು ಸ್ಥಳಾವಕಾಶದೊಂದಿಗೆ ವಿಶ್ರಾಂತಿ ಕೋಣೆಗಳನ್ನು ಸ್ಥಾಪಿಸಲಾಗುವುದು. ಇದು ನೈರ್ಮಲ್ಯ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ.</p><p>‘ನಾನು ಮಾತ್ರವಲ್ಲ, ಇಡೀ ಚೆನ್ನೈ ಪಾಲಿಕೆ ನಿಮ್ಮ ಸಮರ್ಪಿತ ಸೇವೆಗೆ ಋಣಿಯಾಗಿದೆ. ಹೊಸ ಯೋಜನೆಯು ಕಾರ್ಮಿಕರಿಗೆ ಪೌಷ್ಟಿಕ ಆಹಾರವನ್ನು ಒದಗಿಸುತ್ತದೆ. ಆಹಾರ ಬಿಸಿಯಾಗಿರಲು ಸ್ಟೀಲ್ ಲಂಚ್ ಬಾಕ್ಸ್ಗಳನ್ನು ನೀಡಲಾಗುವುದು’ಎಂದು ಸ್ಟಾಲಿನ್ ಹೇಳಿದ್ದಾರೆ.</p><p>ಕಲೈವಾನರ್ ಅರಂಗಂನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಈ ಯೋಜನೆಯನ್ನು ಉದ್ಘಾಟಿಸಿದ ಸ್ಟಾಲಿನ್, ಚೆನ್ನೈ ಕಾರ್ಪೊರೇಷನ್ನ ಎಲ್ಲ 200 ವಾರ್ಡ್ಗಳಲ್ಲಿ ನೈರ್ಮಲ್ಯ ಕಾರ್ಮಿಕರಿಗಾಗಿ ವಿಶೇಷವಾದ 300 ಚದರ ಅಡಿಯ ವಿಶ್ರಾಂತಿ ಕೊಠಡಿಗಳು, ಬಟ್ಟೆ ಬದಲಾಯಿಸುವ ಕೊಠಡಿಗಳು ಮತ್ತು ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>