<p><strong>ನವದೆಹಲಿ:</strong> ‘ರಹಸ್ಯ’ವಾಗಿ ಹಾಗೂ ‘ಕುತಂತ್ರ’ದಿಂದ ಆಮ್ ಆದ್ಮಿ ಪಕ್ಷದ ನಾಯಕರನ್ನು ಬಂಧಿಸಿದ ಕುರಿತು ನಿರ್ಮಿಸಿರುವ ‘ಅನ್ಬ್ರೇಕಬಲ್’ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ದೆಹಲಿ ಪೊಲೀಸರು ಅನುವು ಮಾಡಿಕೊಡುತ್ತಿಲ್ಲ’ ಎಂದು ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಆರೋಪಿಸಿದರು.</p>.<p>‘ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಕ್ಷ್ಯಚಿತ್ರ ಪ್ರದರ್ಶಕ್ಕೆ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ’ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕ್ರಿಯಿಸಿದರು.</p>.<p>ಇದನ್ನು ಪ್ರಶ್ನಿಸಿದ ಕೇಜ್ರಿವಾಲ್, ‘ಇದೊಂದು ಖಾಸಗಿ ಪ್ರದರ್ಶನ. ಇಲ್ಲಿನ ಮತಯಾಚನೆ ಮಾಡುವುದಿಲ್ಲ. ಯಾವುದೇ ಪಕ್ಷದ ವಿರುದ್ಧವೂ ಈ ಪ್ರದರ್ಶನ ಏರ್ಪಡಿಸಿಲ್ಲ. ಇದಕ್ಕೆ ಯಾಕೆ ಅನುಮತಿ ಪಡೆಯಬೇಕು’ ಎಂದರು.</p>.<p>‘ಕಳೆದ ಎರಡು ವರ್ಷಗಳಲ್ಲಿ ನಮ್ಮ ನಾಯಕರನ್ನು ರಹಸ್ಯವಾಗಿ ಕುತಂತ್ರದಿಂದ ಹೇಗೆಲ್ಲಾ ಬಂಧನ ಮಾಡಲಾಯಿತು ಎನ್ನುವ ಸತ್ಯವನ್ನು ಈ ಸಾಕ್ಷ್ಯಚಿತ್ರ ಬಿಚ್ಚಿಡಲಿದೆ. ಆದ್ದರಿಂದಲೇ ಬಿಜೆಪಿಯು ಸಂಪೂರ್ಣವಾಗಿ ಭಯಗ್ರಸ್ಥಗೊಂಡಿದೆ. ಜೊತೆಗೆ ಪೊಲೀಸರ ಮೇಲೆ ಒತ್ತಡ ಹೇರಿ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿದೆ’ ಎಂದರು.</p>.<p>‘ವಾಟ್ಸ್ಆ್ಯಪ್ನಲ್ಲಿ ಕಳುಹಿಸಬಹುದು. ನಮ್ಮ ಮನೆಗೆ ಕರೆದು ತೋರಿಸಬಹುದು. ಹೇಗಾದರೂ ಸರಿ, ಈ ಸಾಕ್ಷ್ಯಚಿತ್ರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ’ ಎಂದು ಪಕ್ಷದ ನಾಯಕ ಸೌರಭ್ ಭಾರಧ್ವಾಜ್ ಹೇಳಿದರು.</p>.<h2> ‘ಬಾಡಿಗೆದಾರರಿಗೂ ಉಚಿತ ವಿದ್ಯುತ್ ನೀರು ಯೋಜನೆ ವಿಸ್ತರಣೆ’ </h2>.<p>‘ಮೂರನೇ ಬಾರಿಗೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಾಡಿಗೆದಾರರಿಗೆ ಕೂಡ ಉಚಿತ ವಿದ್ಯುತ್ ಹಾಗೂ ನೀರು ಪೂರೈಸುವ ಯೋಜನೆಯನ್ನು ವಿಸ್ತರಿಸಲಾಗುವುದು’ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ನಮಗೆ ಉತ್ತಮ ಶಾಲೆ ಆಸ್ಪತ್ರೆಯ ಸೌಲಭ್ಯ ಸಿಕ್ಕಿದೆ. ಆದರೆ ಉಚಿತ ವಿದ್ಯುತ್ ಹಾಗೂ ನೀರಿನ ಯೋಜನೆಯಿಂದ ವಂಚಿತರಾಗಿದ್ದೇವೆ’ ಎನ್ನುವುದಾಗಿ ಬಾಡಿಗೆದಾರರು ಹೇಳುತ್ತಿದ್ದಾರೆ. ಇದಕ್ಕಾಗಿಯೇ ಯೋಜನೆಯನ್ನು ವಿಸ್ತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ರಹಸ್ಯ’ವಾಗಿ ಹಾಗೂ ‘ಕುತಂತ್ರ’ದಿಂದ ಆಮ್ ಆದ್ಮಿ ಪಕ್ಷದ ನಾಯಕರನ್ನು ಬಂಧಿಸಿದ ಕುರಿತು ನಿರ್ಮಿಸಿರುವ ‘ಅನ್ಬ್ರೇಕಬಲ್’ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ದೆಹಲಿ ಪೊಲೀಸರು ಅನುವು ಮಾಡಿಕೊಡುತ್ತಿಲ್ಲ’ ಎಂದು ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಆರೋಪಿಸಿದರು.</p>.<p>‘ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸಾಕ್ಷ್ಯಚಿತ್ರ ಪ್ರದರ್ಶಕ್ಕೆ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ’ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕ್ರಿಯಿಸಿದರು.</p>.<p>ಇದನ್ನು ಪ್ರಶ್ನಿಸಿದ ಕೇಜ್ರಿವಾಲ್, ‘ಇದೊಂದು ಖಾಸಗಿ ಪ್ರದರ್ಶನ. ಇಲ್ಲಿನ ಮತಯಾಚನೆ ಮಾಡುವುದಿಲ್ಲ. ಯಾವುದೇ ಪಕ್ಷದ ವಿರುದ್ಧವೂ ಈ ಪ್ರದರ್ಶನ ಏರ್ಪಡಿಸಿಲ್ಲ. ಇದಕ್ಕೆ ಯಾಕೆ ಅನುಮತಿ ಪಡೆಯಬೇಕು’ ಎಂದರು.</p>.<p>‘ಕಳೆದ ಎರಡು ವರ್ಷಗಳಲ್ಲಿ ನಮ್ಮ ನಾಯಕರನ್ನು ರಹಸ್ಯವಾಗಿ ಕುತಂತ್ರದಿಂದ ಹೇಗೆಲ್ಲಾ ಬಂಧನ ಮಾಡಲಾಯಿತು ಎನ್ನುವ ಸತ್ಯವನ್ನು ಈ ಸಾಕ್ಷ್ಯಚಿತ್ರ ಬಿಚ್ಚಿಡಲಿದೆ. ಆದ್ದರಿಂದಲೇ ಬಿಜೆಪಿಯು ಸಂಪೂರ್ಣವಾಗಿ ಭಯಗ್ರಸ್ಥಗೊಂಡಿದೆ. ಜೊತೆಗೆ ಪೊಲೀಸರ ಮೇಲೆ ಒತ್ತಡ ಹೇರಿ ಪ್ರದರ್ಶನಕ್ಕೆ ಅಡ್ಡಿ ಮಾಡುತ್ತಿದೆ’ ಎಂದರು.</p>.<p>‘ವಾಟ್ಸ್ಆ್ಯಪ್ನಲ್ಲಿ ಕಳುಹಿಸಬಹುದು. ನಮ್ಮ ಮನೆಗೆ ಕರೆದು ತೋರಿಸಬಹುದು. ಹೇಗಾದರೂ ಸರಿ, ಈ ಸಾಕ್ಷ್ಯಚಿತ್ರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ’ ಎಂದು ಪಕ್ಷದ ನಾಯಕ ಸೌರಭ್ ಭಾರಧ್ವಾಜ್ ಹೇಳಿದರು.</p>.<h2> ‘ಬಾಡಿಗೆದಾರರಿಗೂ ಉಚಿತ ವಿದ್ಯುತ್ ನೀರು ಯೋಜನೆ ವಿಸ್ತರಣೆ’ </h2>.<p>‘ಮೂರನೇ ಬಾರಿಗೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಾಡಿಗೆದಾರರಿಗೆ ಕೂಡ ಉಚಿತ ವಿದ್ಯುತ್ ಹಾಗೂ ನೀರು ಪೂರೈಸುವ ಯೋಜನೆಯನ್ನು ವಿಸ್ತರಿಸಲಾಗುವುದು’ ಎಂದು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಘೋಷಿಸಿದರು. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ‘ನಮಗೆ ಉತ್ತಮ ಶಾಲೆ ಆಸ್ಪತ್ರೆಯ ಸೌಲಭ್ಯ ಸಿಕ್ಕಿದೆ. ಆದರೆ ಉಚಿತ ವಿದ್ಯುತ್ ಹಾಗೂ ನೀರಿನ ಯೋಜನೆಯಿಂದ ವಂಚಿತರಾಗಿದ್ದೇವೆ’ ಎನ್ನುವುದಾಗಿ ಬಾಡಿಗೆದಾರರು ಹೇಳುತ್ತಿದ್ದಾರೆ. ಇದಕ್ಕಾಗಿಯೇ ಯೋಜನೆಯನ್ನು ವಿಸ್ತರಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>