<p class="title"><strong>ಅಹಮದಾಬಾದ್</strong>: ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಲಕ್ಷಾಂತರ ಬಡ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ–ಜಿಕೆಎವೈ) ನೆರವಿಗೆ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದರು.</p>.<p class="title">ಆಹಾರ ಭದ್ರತಾ ಯೋಜನೆಯ ಫಲಾನುಭವಿಗಳ ಜೊತೆಗೆ ವರ್ಚುವಲ್ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ, ಪಿಎಂ–ಜಿಕೆಎವೈ ಅಡಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಇದು ಸಾಂಕ್ರಾಮಿಕದ ಸಮಯದಲ್ಲಿ ಬಡವರ ಚಿಂತೆಗಳನ್ನು ಕಡಿಮೆ ಮಾಡಲು ನೆರವಾಗಿದೆ ಎಂದರು.</p>.<p class="title">ಸರ್ಕಾರವು ಕೋವಿಡ್ ಪಿಡುಗಿನ ಸಮಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಯತ್ನಿಸುತ್ತಿದೆ ಎಂದರು. ಸ್ವಾತಂತ್ರ್ಯ ನಂತರ ಪ್ರತಿ ಸರ್ಕಾರಗಳು ಬಡವರಿಗೆ ಕಡಿಮೆ ಬೆಲೆಗೆ ಆಹಾರ ಪದಾರ್ಥಗಳನ್ನು ಒದಗಿಸುವ ಬಗ್ಗೆ ಮಾತನಾಡಿವೆ ಎಂದು ಅವರು ಸ್ಮರಿಸಿದರು.</p>.<p class="title">‘ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಬೆಲೆಗೆ ಪಡಿತರ ವಿತರಿಸುವ ಯೋಜನೆಗಳು ಮತ್ತು ಬಜೆಟ್ ಹೆಚ್ಚಾಗಿದೆ. ಆದರೆ ಪರಿಣಾಮ ಸೀಮಿತವಾಗಿದೆ. ಒಂದೆಡೆ ಆಹಾರ ಸಂಗ್ರಹಣೆ ಹೆಚ್ಚುತ್ತಲೇ ಸಾಗಿದೆ. ಆದರೆ ಹಸಿವು ಮತ್ತು ಅಪೌಷ್ಟಿಕತೆಯ ಅನುಪಾತದಲ್ಲಿ ಕಡಿಮೆಯಾಗಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಅಹಮದಾಬಾದ್</strong>: ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಲಕ್ಷಾಂತರ ಬಡ ಜನರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂ–ಜಿಕೆಎವೈ) ನೆರವಿಗೆ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದರು.</p>.<p class="title">ಆಹಾರ ಭದ್ರತಾ ಯೋಜನೆಯ ಫಲಾನುಭವಿಗಳ ಜೊತೆಗೆ ವರ್ಚುವಲ್ ಸಂವಾದದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ, ಪಿಎಂ–ಜಿಕೆಎವೈ ಅಡಿಯಲ್ಲಿ ಲಕ್ಷಾಂತರ ಕುಟುಂಬಗಳಿಗೆ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ. ಇದು ಸಾಂಕ್ರಾಮಿಕದ ಸಮಯದಲ್ಲಿ ಬಡವರ ಚಿಂತೆಗಳನ್ನು ಕಡಿಮೆ ಮಾಡಲು ನೆರವಾಗಿದೆ ಎಂದರು.</p>.<p class="title">ಸರ್ಕಾರವು ಕೋವಿಡ್ ಪಿಡುಗಿನ ಸಮಯದಲ್ಲಿ ನಾಗರಿಕರಿಗೆ ಎಲ್ಲ ರೀತಿಯ ನೆರವನ್ನು ಒದಗಿಸಲು ಪ್ರಯತ್ನಿಸುತ್ತಿದೆ ಎಂದರು. ಸ್ವಾತಂತ್ರ್ಯ ನಂತರ ಪ್ರತಿ ಸರ್ಕಾರಗಳು ಬಡವರಿಗೆ ಕಡಿಮೆ ಬೆಲೆಗೆ ಆಹಾರ ಪದಾರ್ಥಗಳನ್ನು ಒದಗಿಸುವ ಬಗ್ಗೆ ಮಾತನಾಡಿವೆ ಎಂದು ಅವರು ಸ್ಮರಿಸಿದರು.</p>.<p class="title">‘ಇತ್ತೀಚಿನ ವರ್ಷಗಳಲ್ಲಿ ಕಡಿಮೆ ಬೆಲೆಗೆ ಪಡಿತರ ವಿತರಿಸುವ ಯೋಜನೆಗಳು ಮತ್ತು ಬಜೆಟ್ ಹೆಚ್ಚಾಗಿದೆ. ಆದರೆ ಪರಿಣಾಮ ಸೀಮಿತವಾಗಿದೆ. ಒಂದೆಡೆ ಆಹಾರ ಸಂಗ್ರಹಣೆ ಹೆಚ್ಚುತ್ತಲೇ ಸಾಗಿದೆ. ಆದರೆ ಹಸಿವು ಮತ್ತು ಅಪೌಷ್ಟಿಕತೆಯ ಅನುಪಾತದಲ್ಲಿ ಕಡಿಮೆಯಾಗಿಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>