<p><strong>ನವದೆಹಲಿ: </strong>‘ಧಾರ್ಮಿಕ ಸ್ವಾತಂತ್ರ್ಯವು ಜನರನ್ನು ಮತಾಂತರಗೊಳಿಸುವ ಹಕ್ಕನ್ನು ಒಳಗೊಂಡಿಲ್ಲ’ ಎಂದುಗುಜರಾತ್ ಸರ್ಕಾರವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ವಿವಾಹ ಮೂಲಕ ಮತಾಂತರಗೊಳಿಸುವುದಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅನುಮತಿ ಪಡೆಯುವುದು ಕಡ್ಡಾಯ. ಕಾಯ್ದೆಯ ಈ ನಿಯಮಕ್ಕೆ ಗುಜರಾತ್ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.</p>.<p>ಗುಜರಾತ್ ಹೈಕೋರ್ಟ್ ಕಳೆದ ವರ್ಷ ಆಗಸ್ಟ್ 19 ಹಾಗೂ 26ರಂದು ಆದೇಶ ಹೊರಡಿಸಿ, ಗುಜರಾತ್ ಸರ್ಕಾರ ಜಾರಿಗೆ ತಂದಿದ್ದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ, 2003ರ ಸೆಕ್ಷನ್ 5ಕ್ಕೆ ತಡೆ ನೀಡಿತ್ತು.</p>.<p>ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಪಿಐಎಲ್ಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿರುವ ಅಫಿಡವಿಟ್ನಲ್ಲಿ ಗುಜರಾತ್ ಸರ್ಕಾರ ಈ ವಿಷಯ ತಿಳಿಸಿದೆ.</p>.<p>‘ತಡೆಯನ್ನು ಕೂಡಲೇ ತೆರವುಗೊಳಿಸಬೇಕು. ಬಲವಂತದಿಂದ, ಆಮಿಷವೊಡ್ಡಿ ಅಥವಾ ವಂಚನೆ ಮೂಲಕ ಮತಾಂತರಗೊಳಿಸುವುದನ್ನು ನಿಷೇಧಿಸುವ ಸಂಬಂಧ ರೂಪಿಸಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಇದರಿಂದ ಸಾಧ್ಯವಾಗಲಿದೆ’ ಎಂದು ಸರ್ಕಾರ ಅಫಿಡವಿಟ್ನಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಧಾರ್ಮಿಕ ಸ್ವಾತಂತ್ರ್ಯವು ಜನರನ್ನು ಮತಾಂತರಗೊಳಿಸುವ ಹಕ್ಕನ್ನು ಒಳಗೊಂಡಿಲ್ಲ’ ಎಂದುಗುಜರಾತ್ ಸರ್ಕಾರವು ಸುಪ್ರೀಂಕೋರ್ಟ್ಗೆ ತಿಳಿಸಿದೆ.</p>.<p>ವಿವಾಹ ಮೂಲಕ ಮತಾಂತರಗೊಳಿಸುವುದಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅನುಮತಿ ಪಡೆಯುವುದು ಕಡ್ಡಾಯ. ಕಾಯ್ದೆಯ ಈ ನಿಯಮಕ್ಕೆ ಗುಜರಾತ್ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.</p>.<p>ಗುಜರಾತ್ ಹೈಕೋರ್ಟ್ ಕಳೆದ ವರ್ಷ ಆಗಸ್ಟ್ 19 ಹಾಗೂ 26ರಂದು ಆದೇಶ ಹೊರಡಿಸಿ, ಗುಜರಾತ್ ಸರ್ಕಾರ ಜಾರಿಗೆ ತಂದಿದ್ದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ, 2003ರ ಸೆಕ್ಷನ್ 5ಕ್ಕೆ ತಡೆ ನೀಡಿತ್ತು.</p>.<p>ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಪಿಐಎಲ್ಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿರುವ ಅಫಿಡವಿಟ್ನಲ್ಲಿ ಗುಜರಾತ್ ಸರ್ಕಾರ ಈ ವಿಷಯ ತಿಳಿಸಿದೆ.</p>.<p>‘ತಡೆಯನ್ನು ಕೂಡಲೇ ತೆರವುಗೊಳಿಸಬೇಕು. ಬಲವಂತದಿಂದ, ಆಮಿಷವೊಡ್ಡಿ ಅಥವಾ ವಂಚನೆ ಮೂಲಕ ಮತಾಂತರಗೊಳಿಸುವುದನ್ನು ನಿಷೇಧಿಸುವ ಸಂಬಂಧ ರೂಪಿಸಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಇದರಿಂದ ಸಾಧ್ಯವಾಗಲಿದೆ’ ಎಂದು ಸರ್ಕಾರ ಅಫಿಡವಿಟ್ನಲ್ಲಿ ವಿವರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>