ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ‘ದೆಹಲಿಯಿಂದ ತರಿಸಿಕೊಳ್ಳಲಾದ ಹೊಸ ಯಂತ್ರದ ಮೂಲಕ ಈಗ ಕುಸಿತವಾಗಿರುವ ಸ್ಥಳದ ಮೂಲಕ 5–7 ಮೀಟರ್ವರೆಗೆ ಕೊರೆಯಲಾಗಿದೆ. ಪ್ರತಿ ಗಂಟೆಗೆ 5–10 ಮೀಟರ್ನಷ್ಟು ಕೊರೆಯುತ್ತಿರುವ ಈ ಯಂತ್ರವು ಶೀಘ್ರವೇ ಒಳಗೆ ಸಿಲುಕಿದ ಕಾರ್ಮಿಕರು ಇರುವ ಸ್ಥಳಕ್ಕೆ ತಲುಪಲಿದೆ ಎಂಬ ಭರವಸೆಯಿದೆ’ ಎಂದು ತಿಳಿಸಿದರು.