ದೊಣ್ಣೆಗಳನ್ನು ಹಿಡಿದುಕೊಂಡಿದ್ದ ಗುಂಪು, ಸಂದೇಶ್ಖಾಲಿಯ ಬೆಳ್ಮಜೂರ್ ಪ್ರದೇಶದ ಮೀನುಗಾರಿಕಾ ಯಾರ್ಡ್ ಬಳಿ ಗುಡಿಸಲುಗಳನ್ನು ಸುಟ್ಟು ಹಾಕಿದ್ದಾರೆ. ತಲೆಮರೆಸಿಕೊಂಡಿರುವ ಟಿಎಂಸಿ ನಾಯಕ ಷಹಜಹಾನ್ ಶೇಖ್ ಮತ್ತು ಅವರ ಸಹೋದರ ಸಿರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಡಲಾದ ಗುಡಿಸಲುಗಳು ಸಿರಾಜ್ಗೆ ಸೇರಿದ್ದು ಎಂದು ತಿಳಿದುಬಂದಿದೆ.
‘ಇಲ್ಲಿ ಪೊಲೀಸರು ವರ್ಷಗಳಿಂದ ಏನೂ ಮಾಡುತ್ತಿಲ್ಲ. ಹೀಗಾಗಿ ನಾವು ನಮ್ಮ ಭೂಮಿ ಹಾಗೂ ಗೌರವವನ್ನು ಪಡೆಯಲು ಎಲ್ಲವನ್ನೂ ಮಾಡುತ್ತಿದ್ದೇವೆ’ ಎಂದು ಪ್ರತಿಭಟನಾಕಾರರೊಬ್ಬರು ಹೇಳಿದರು.