<p><strong>ಸಂಭಲ್ (ಉತ್ತರ ಪ್ರದೇಶ):</strong> ‘ರಂಜಾನ್ ಸಂದರ್ಭದಲ್ಲಿ ರಸ್ತೆ, ಕಟ್ಟಡಗಳ ತಾರಸಿ ಮೇಲೆ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ’ ಎಂದು ಸಂಭಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ ಚಂದ್ರ ಗುರುವಾರ ತಿಳಿಸಿದ್ದಾರೆ. ಅವಘಡ ನಡೆಯದಂತೆ ತಡೆಯುವುದು ಇದರ ಉದ್ದೇಶ ಎಂದು ಹೇಳಿದ್ದಾರೆ.</p><p>‘ಅಲ್ವಿದಾ’ (ರಂಜಾನ್ ಮಾಸದ ಕೊನೆಯ ಶುಕ್ರವಾರ ನಡೆಯುವ ಪ್ರಾರ್ಥನೆ) ಸಿದ್ಧತೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದರು.</p><p>‘ತಾರಸಿಯಲ್ಲಿ ನಮಾಜ್ ಮಾಡಬಹುದೇ ಎಂದು ಶಾಂತಿ ಸಮಿತಿ ಸಭೆಯಲ್ಲಿ ಕೇಳಿಬಂದ ಪ್ರಶ್ನೆಗೆ, ಹೆಚ್ಚಿನ ಜನ ಸೇರಿದಲ್ಲಿ ಅವಘಡ ಸಂಭವಿಸಬಹುದು ಎಂದು ಮನವರಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p><p>ಸಾಂಪ್ರದಾಯಿಕವಾಗಿ ಮಸೀದಿಗಳು ಮತ್ತು ಈದ್ಗಾ ಆವರಣದಲ್ಲಿ ನಮಾಜ್ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. </p>.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್: ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ BJP ಶಾಸಕ.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಿದರೆ ಕ್ರಮ: ನೋಯ್ಡಾ ಪೊಲೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್ (ಉತ್ತರ ಪ್ರದೇಶ):</strong> ‘ರಂಜಾನ್ ಸಂದರ್ಭದಲ್ಲಿ ರಸ್ತೆ, ಕಟ್ಟಡಗಳ ತಾರಸಿ ಮೇಲೆ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ’ ಎಂದು ಸಂಭಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ ಚಂದ್ರ ಗುರುವಾರ ತಿಳಿಸಿದ್ದಾರೆ. ಅವಘಡ ನಡೆಯದಂತೆ ತಡೆಯುವುದು ಇದರ ಉದ್ದೇಶ ಎಂದು ಹೇಳಿದ್ದಾರೆ.</p><p>‘ಅಲ್ವಿದಾ’ (ರಂಜಾನ್ ಮಾಸದ ಕೊನೆಯ ಶುಕ್ರವಾರ ನಡೆಯುವ ಪ್ರಾರ್ಥನೆ) ಸಿದ್ಧತೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದರು.</p><p>‘ತಾರಸಿಯಲ್ಲಿ ನಮಾಜ್ ಮಾಡಬಹುದೇ ಎಂದು ಶಾಂತಿ ಸಮಿತಿ ಸಭೆಯಲ್ಲಿ ಕೇಳಿಬಂದ ಪ್ರಶ್ನೆಗೆ, ಹೆಚ್ಚಿನ ಜನ ಸೇರಿದಲ್ಲಿ ಅವಘಡ ಸಂಭವಿಸಬಹುದು ಎಂದು ಮನವರಿಕೆ ಮಾಡಲಾಗಿದೆ’ ಎಂದು ತಿಳಿಸಿದರು.</p><p>ಸಾಂಪ್ರದಾಯಿಕವಾಗಿ ಮಸೀದಿಗಳು ಮತ್ತು ಈದ್ಗಾ ಆವರಣದಲ್ಲಿ ನಮಾಜ್ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. </p>.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್: ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ BJP ಶಾಸಕ.ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡಿದರೆ ಕ್ರಮ: ನೋಯ್ಡಾ ಪೊಲೀಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>