<p><strong>ಇಂದೋರ್:</strong> ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಮೊಟ್ಟೆ, ಚಿಕನ್ ಸೇರಿದಂತೆ ಮಾಂಸಾಹಾರ ಅಡುಗೆಯನ್ನು ಸೇರಿಸಬೇಕು ಎನ್ನುವ ಅಭಿಪ್ರಾಯವು ಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ, ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರ ಬಿಸಿಯೂಟದಲ್ಲಿ ಕಪ್ಪೆ ಸಾಂಬರ್ ಮಾಡಲಾಗಿದೆ.</p><p>ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಕೆಯ ವೇಳೆ ಅಡುಗೆಯವರ ಅಜಾಗರೂಕತೆಯಿಂದ ಸಾಂಬರ್ನಲ್ಲಿ ಕಪ್ಪೆ ಬಿದ್ದಿದೆ. ಸಾಂಬರ್ ಪಾತ್ರೆಯೊಳಗೆ ಸತ್ತ ಕಪ್ಪೆಯು ತೇಲುತ್ತಿರುವ ವಿಡಿಯೊ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಕಾಂಗ್ರೆಸ್ ಪಕ್ಷದ ಅಧಿಕೃತ ಜಾಲತಾಣ ಖಾತೆಯಲ್ಲಿ ಕೂಡ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.</p>.<p>ಬಿಜೆಪಿ ನಾಯಕರು ಮತ್ತು ಸಚಿವರು ತಮ್ಮ ಮಕ್ಕಳಿಗೆ ಕಪ್ಪೆ ಸಾಂಬರ್ ತಿನ್ನಿಸುತ್ತಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. </p><p>ತಮ್ಮ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವ ಬಿಜೆಪಿ ನಾಯಕರು, ಬಡವರ ಮಕ್ಕಳಿಗೆ ಮಾತ್ರ ಕಪ್ಪೆ ಸಾಂಬರ್ ನೀಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದೆ. </p><p>ಕಪ್ಪೆ ಸಾಂಬರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಮೊಟ್ಟೆ, ಚಿಕನ್ ಸೇರಿದಂತೆ ಮಾಂಸಾಹಾರ ಅಡುಗೆಯನ್ನು ಸೇರಿಸಬೇಕು ಎನ್ನುವ ಅಭಿಪ್ರಾಯವು ಸಾಮಾನ್ಯವಾಗಿ ಕೇಳಿಬರುತ್ತದೆ. ಆದರೆ, ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರ ಬಿಸಿಯೂಟದಲ್ಲಿ ಕಪ್ಪೆ ಸಾಂಬರ್ ಮಾಡಲಾಗಿದೆ.</p><p>ಮಧ್ಯಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಿಕೆಯ ವೇಳೆ ಅಡುಗೆಯವರ ಅಜಾಗರೂಕತೆಯಿಂದ ಸಾಂಬರ್ನಲ್ಲಿ ಕಪ್ಪೆ ಬಿದ್ದಿದೆ. ಸಾಂಬರ್ ಪಾತ್ರೆಯೊಳಗೆ ಸತ್ತ ಕಪ್ಪೆಯು ತೇಲುತ್ತಿರುವ ವಿಡಿಯೊ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>ಕಾಂಗ್ರೆಸ್ ಪಕ್ಷದ ಅಧಿಕೃತ ಜಾಲತಾಣ ಖಾತೆಯಲ್ಲಿ ಕೂಡ ಈ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.</p>.<p>ಬಿಜೆಪಿ ನಾಯಕರು ಮತ್ತು ಸಚಿವರು ತಮ್ಮ ಮಕ್ಕಳಿಗೆ ಕಪ್ಪೆ ಸಾಂಬರ್ ತಿನ್ನಿಸುತ್ತಾರೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. </p><p>ತಮ್ಮ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವ ಬಿಜೆಪಿ ನಾಯಕರು, ಬಡವರ ಮಕ್ಕಳಿಗೆ ಮಾತ್ರ ಕಪ್ಪೆ ಸಾಂಬರ್ ನೀಡುತ್ತಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದೆ. </p><p>ಕಪ್ಪೆ ಸಾಂಬರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>