<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಗದೊಂದು ಸರ್ಕಾರಿ ನಿರ್ದೇಶನವನ್ನು ಹೊರಡಿಸಿದ್ದಾರೆ. </p><p>ಈ ಕುರಿತು ಮಾಹಿತಿ ನೀಡಿರುವ ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, 'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ತಿಳಿಸಿದ್ದಾರೆ. </p><p>'ಕೇಜ್ರಿವಾಲ್ ಅವರು ಮೊಹಲ್ಲಾ ಕ್ಲಿನಿಕ್ಗಳಲ್ಲಿ ಲಭ್ಯವಿರುವ ಲ್ಯಾಬೋರೇಟರಿ ಪರೀಕ್ಷೆಗಳಲ್ಲಿನ ತೊಂದರೆ ಬಗ್ಗೆ ಮಾಹಿತಿ ಪಡೆದು ನಿರ್ದೇಶನ ನೀಡಿದ್ದಾರೆ. ಮೊಹಲ್ಲಾ ಕ್ಲಿನಿಕ್ಗಳಲ್ಲಿ ಉಚಿತ ಔಷಧಿಗಳ ಕೊರತೆ ಇರಬಾರದು. ಈ ಸಂಬಂಧ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಅವರು ತಿಳಿಸಿದ್ದಾರೆ. </p><p>ಇ.ಡಿ ವಶದಲ್ಲಿರುವ ಕೇಜ್ರಿವಾಲ್, ಕಷ್ಟದ ಸಮಯದಲ್ಲೂ ದೆಹಲಿ ಜನರ ಯೋಗಕ್ಷೇಮದ ಬಗ್ಗೆ ಮಾತ್ರ ಚಿಂತಿಸುತ್ತಾರೆ ಎಂದು ಅವರು ಹೇಳಿದ್ದಾರೆ. </p><p>ಈ ಮೊದಲು ಇ.ಡಿ ಕಸ್ಟಡಿಯಿಂದಲೇ ಕೇಜ್ರಿವಾಲ್ ಅವರು ಜಲ ಇಲಾಖೆಗೆ ಸಂಬಂಧಪಟ್ಟಂತೆ ಮೊದಲ ನಿರ್ದೇಶನ ಹೊರಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಗದೊಂದು ಸರ್ಕಾರಿ ನಿರ್ದೇಶನವನ್ನು ಹೊರಡಿಸಿದ್ದಾರೆ. </p><p>ಈ ಕುರಿತು ಮಾಹಿತಿ ನೀಡಿರುವ ದೆಹಲಿಯ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, 'ಎಲ್ಲ ಸರ್ಕಾರಿ ಆಸ್ಪತ್ರೆಗಳು ಮತ್ತು 'ಮೊಹಲ್ಲಾ' ಕ್ಲಿನಿಕ್ಗಳಲ್ಲಿ ಜನರಿಗೆ ಔಷಧಿ ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೇಜ್ರಿವಾಲ್ ನಿರ್ದೇಶನ ನೀಡಿದ್ದಾರೆ' ಎಂದು ತಿಳಿಸಿದ್ದಾರೆ. </p><p>'ಕೇಜ್ರಿವಾಲ್ ಅವರು ಮೊಹಲ್ಲಾ ಕ್ಲಿನಿಕ್ಗಳಲ್ಲಿ ಲಭ್ಯವಿರುವ ಲ್ಯಾಬೋರೇಟರಿ ಪರೀಕ್ಷೆಗಳಲ್ಲಿನ ತೊಂದರೆ ಬಗ್ಗೆ ಮಾಹಿತಿ ಪಡೆದು ನಿರ್ದೇಶನ ನೀಡಿದ್ದಾರೆ. ಮೊಹಲ್ಲಾ ಕ್ಲಿನಿಕ್ಗಳಲ್ಲಿ ಉಚಿತ ಔಷಧಿಗಳ ಕೊರತೆ ಇರಬಾರದು. ಈ ಸಂಬಂಧ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಅವರು ತಿಳಿಸಿದ್ದಾರೆ. </p><p>ಇ.ಡಿ ವಶದಲ್ಲಿರುವ ಕೇಜ್ರಿವಾಲ್, ಕಷ್ಟದ ಸಮಯದಲ್ಲೂ ದೆಹಲಿ ಜನರ ಯೋಗಕ್ಷೇಮದ ಬಗ್ಗೆ ಮಾತ್ರ ಚಿಂತಿಸುತ್ತಾರೆ ಎಂದು ಅವರು ಹೇಳಿದ್ದಾರೆ. </p><p>ಈ ಮೊದಲು ಇ.ಡಿ ಕಸ್ಟಡಿಯಿಂದಲೇ ಕೇಜ್ರಿವಾಲ್ ಅವರು ಜಲ ಇಲಾಖೆಗೆ ಸಂಬಂಧಪಟ್ಟಂತೆ ಮೊದಲ ನಿರ್ದೇಶನ ಹೊರಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>