<p><strong>ಇಂದೋರ್(ಮಧ್ಯಪ್ರದೇಶ):</strong> ಭಿಕ್ಷಾಟನೆ ಮುಕ್ತ ನಗರ’ ನಿರ್ಮಾಣಕ್ಕೆ ಪಣ ತೊಟ್ಟಿರುವ ಇಂದೋರ್ ಮಹಾನಗರ ಪಾಲಿಕೆಯು, ಭಿಕ್ಷೆ ನೀಡುವವರ ವಿರುದ್ಧವೇ ಎಫ್ಐಆರ್ ದಾಖಲಿಸಲು ನಿರ್ಧರಿಸಿದೆ.</p>.<p>‘ಭಿಕ್ಷುಕರಿಗೆ ಭಿಕ್ಷೆ ನೀಡಿ, ಭಿಕ್ಷಾಟನೆಯನ್ನು ಪ್ರೋತ್ಸಾಹಿಸದಂತೆ ಇಂದೋರ್ ನಗರದಾದ್ಯಂತ ಈ ತಿಂಗಳ ಅಂತ್ಯದವರೆಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ಜನವರಿ 1ರ ಬಳಿಕವೂ ಭಿಕ್ಷೆ ನೀಡುವುದು ಕಂಡುಬಂದಲ್ಲಿ, ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗುವುದು’ ಎಂದು ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಅವರು ತಿಳಿಸಿದ್ದಾರೆ.</p>.<p>’ಇಂದೋರ್ ನಗರದ ವ್ಯಾಪ್ತಿಯಲ್ಲಿ ಭಿಕ್ಷಾಟನೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಈ ಬಗ್ಗೆ ಈಗಾಗಲೇ ಆದೇಶವನ್ನು ಹೊರಡಿಸಲಾಗಿದೆ. ಅಲ್ಲದೇ, ಭಿಕ್ಷೆ ನೀಡುವ ಮೂಲಕ ಪಾಪ ಕೃತ್ಯದಲ್ಲಿ ತಾವೂ ಭಾಗಿಯಾಗದಂತೆ, ಇಂದೋರ್ನ ಎಲ್ಲ ನಿವಾಸಿಗಳಲ್ಲಿ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದ್ದಾರೆ.</p>.<p>‘ಅಮಾಯಕರನ್ನು ಬಳಸಿಕೊಂಡು ಭಿಕ್ಷಾಟನೆ ದಂಧೆ ನಡೆಸುತ್ತಿದ್ದ ಹಲವು ಪ್ರಕರಣಗಳನ್ನು ಜಿಲ್ಲಾಡಳಿತವು ಇತ್ತೀಚಿನ ದಿನಗಳಲ್ಲಿ ಪತ್ತೆಹಚ್ಚಿದೆ. ಭಿಕ್ಷಾಟನೆಯಲ್ಲಿ ತೊಡಗಿದ್ದ ಹಲವು ಮಂದಿಗೆ ಸರ್ಕಾರದ ವತಿಯಿಂದ ಪುನರ್ವಸತಿಯನ್ನೂ ಕಲ್ಪಿಸಲಾಗಿದೆ‘ ಎಂದು ಆಶಿಶ್ ಅವರು ಮಾಹಿತಿ ನೀಡಿದ್ದಾರೆ.</p>.<p>10 ನಗರಗಳಲ್ಲಿ ಪ್ರಾಯೋಗಿಕ ಜಾರಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು, ಭಿಕ್ಷಾಟನೆ ನಿರ್ಮೂಲನೆಗಾಗಿ ‘ಭಿಕ್ಷಾ ವೃತ್ತಿ ಮುಕ್ತ ಭಾರತ’ ಯೋಜನೆಯನ್ನು 10 ನಗರಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದೆ. ಈ ನಗರಗಳ ಪೈಕಿ ಇಂದೋರ್ ಕೂಡ ಒಂದು.</p>.ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದ ಸರ್ಕಾರ: ಬಿ.ವೈ. ವಿಜಯೇಂದ್ರ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್(ಮಧ್ಯಪ್ರದೇಶ):</strong> ಭಿಕ್ಷಾಟನೆ ಮುಕ್ತ ನಗರ’ ನಿರ್ಮಾಣಕ್ಕೆ ಪಣ ತೊಟ್ಟಿರುವ ಇಂದೋರ್ ಮಹಾನಗರ ಪಾಲಿಕೆಯು, ಭಿಕ್ಷೆ ನೀಡುವವರ ವಿರುದ್ಧವೇ ಎಫ್ಐಆರ್ ದಾಖಲಿಸಲು ನಿರ್ಧರಿಸಿದೆ.</p>.<p>‘ಭಿಕ್ಷುಕರಿಗೆ ಭಿಕ್ಷೆ ನೀಡಿ, ಭಿಕ್ಷಾಟನೆಯನ್ನು ಪ್ರೋತ್ಸಾಹಿಸದಂತೆ ಇಂದೋರ್ ನಗರದಾದ್ಯಂತ ಈ ತಿಂಗಳ ಅಂತ್ಯದವರೆಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯಾವುದೇ ವ್ಯಕ್ತಿಯು ಜನವರಿ 1ರ ಬಳಿಕವೂ ಭಿಕ್ಷೆ ನೀಡುವುದು ಕಂಡುಬಂದಲ್ಲಿ, ಆತನ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗುವುದು’ ಎಂದು ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಅವರು ತಿಳಿಸಿದ್ದಾರೆ.</p>.<p>’ಇಂದೋರ್ ನಗರದ ವ್ಯಾಪ್ತಿಯಲ್ಲಿ ಭಿಕ್ಷಾಟನೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಈ ಬಗ್ಗೆ ಈಗಾಗಲೇ ಆದೇಶವನ್ನು ಹೊರಡಿಸಲಾಗಿದೆ. ಅಲ್ಲದೇ, ಭಿಕ್ಷೆ ನೀಡುವ ಮೂಲಕ ಪಾಪ ಕೃತ್ಯದಲ್ಲಿ ತಾವೂ ಭಾಗಿಯಾಗದಂತೆ, ಇಂದೋರ್ನ ಎಲ್ಲ ನಿವಾಸಿಗಳಲ್ಲಿ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದ್ದಾರೆ.</p>.<p>‘ಅಮಾಯಕರನ್ನು ಬಳಸಿಕೊಂಡು ಭಿಕ್ಷಾಟನೆ ದಂಧೆ ನಡೆಸುತ್ತಿದ್ದ ಹಲವು ಪ್ರಕರಣಗಳನ್ನು ಜಿಲ್ಲಾಡಳಿತವು ಇತ್ತೀಚಿನ ದಿನಗಳಲ್ಲಿ ಪತ್ತೆಹಚ್ಚಿದೆ. ಭಿಕ್ಷಾಟನೆಯಲ್ಲಿ ತೊಡಗಿದ್ದ ಹಲವು ಮಂದಿಗೆ ಸರ್ಕಾರದ ವತಿಯಿಂದ ಪುನರ್ವಸತಿಯನ್ನೂ ಕಲ್ಪಿಸಲಾಗಿದೆ‘ ಎಂದು ಆಶಿಶ್ ಅವರು ಮಾಹಿತಿ ನೀಡಿದ್ದಾರೆ.</p>.<p>10 ನಗರಗಳಲ್ಲಿ ಪ್ರಾಯೋಗಿಕ ಜಾರಿ: ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು, ಭಿಕ್ಷಾಟನೆ ನಿರ್ಮೂಲನೆಗಾಗಿ ‘ಭಿಕ್ಷಾ ವೃತ್ತಿ ಮುಕ್ತ ಭಾರತ’ ಯೋಜನೆಯನ್ನು 10 ನಗರಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಿದೆ. ಈ ನಗರಗಳ ಪೈಕಿ ಇಂದೋರ್ ಕೂಡ ಒಂದು.</p>.ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದ ಸರ್ಕಾರ: ಬಿ.ವೈ. ವಿಜಯೇಂದ್ರ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>