<p><strong>ಪಟ್ನಾ:</strong> ಕಾಂಗ್ರೆಸ್ ಯುವನಾಯಕ ಕನ್ಹಯ್ಯ ಕುಮಾರ್ ಅವರು ಬಿಹಾರದ ಪಶ್ಚಿಮ ಚಂಪಾರಣ್ಯ ಜಿಲ್ಲೆಯಿಂದ ಭಾನುವಾರ ಪಾದಯಾತ್ರೆ ಆರಂಭಿಸಿದ್ದಾರೆ. ‘ಪಲಾಯನ್ ರೋಕೊ, ನೌಕರಿ ಡೋ’(ವಲಸೆ ತಡೆಯಿರಿ, ಉದ್ಯೋಗ ನೀಡಿ) ಎಂಬ ಹೆಸರಿನಲ್ಲಿ, ಚಂಪಾರಣ್ಯ ಭಿತಿಹರ್ವ ಆಶ್ರಮದಿಂದ ಆರಂಭಗೊಂಡಿರುವ ಪಾದಯಾತ್ರೆ ಏಪ್ರಿಲ್ 15ರಂದು ಪಟ್ನಾದಲ್ಲಿ ಮುಕ್ತಾಯಗೊಳ್ಳಲಿದೆ. </p><p>1917ರಲ್ಲಿ ಮಹಾತ್ಮ ಗಾಂಧೀಜಿ ಅವರು ಚಂಪಾರಣ್ಯ ಸತ್ಯಾಗ್ರಹ ಆರಂಭಿಸಿದ ಸ್ಥಳದಿಂದಲೇ ಕನ್ಹಯ್ಯ ಕುಮಾರ್ ಪಾದಯಾತ್ರೆ ಆರಂಭಿಸಿದ್ದಾರೆ.</p><p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.</p><p>‘ನಿಮ್ಮ ಪ್ರೀತಿ ಪಾತ್ರರಿಗೆ ನೀವು ಬರೆಯುವ ಪ್ರೇಮ ಪತ್ರಗಳು ಸೋರಿಕೆಯಾಗುವುದಿಲ್ಲ. ಆದರೆ ನಿತೀಶ್ ಆಡಳಿತದಲ್ಲಿ ಎಲ್ಲ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ. ಇದರಿಂದ ನೇಮಕಾತಿ ವಿಳಂಬವಾಗುತ್ತಿದೆ ಮತ್ತು ಯುವಕರು ಖಿನ್ನತೆಗೆ ಒಳಗಾಗಿ ವಲಸೆ ಹೋಗುವುದು ಹೆಚ್ಚಾಗುತ್ತಿದೆ’ ಎಂದು ಕನ್ಹಯ್ಯ ಕುಮಾರ್ ಆರೋಪಿಸಿದರು.</p><p>ಬಿಹಾರದಲ್ಲಿ ಈ ವರ್ಷದ ಅಕ್ಟೋಬರ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆರ್ಜೆಡಿಯೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಕಾಂಗ್ರೆಸ್ ಯುವನಾಯಕ ಕನ್ಹಯ್ಯ ಕುಮಾರ್ ಅವರು ಬಿಹಾರದ ಪಶ್ಚಿಮ ಚಂಪಾರಣ್ಯ ಜಿಲ್ಲೆಯಿಂದ ಭಾನುವಾರ ಪಾದಯಾತ್ರೆ ಆರಂಭಿಸಿದ್ದಾರೆ. ‘ಪಲಾಯನ್ ರೋಕೊ, ನೌಕರಿ ಡೋ’(ವಲಸೆ ತಡೆಯಿರಿ, ಉದ್ಯೋಗ ನೀಡಿ) ಎಂಬ ಹೆಸರಿನಲ್ಲಿ, ಚಂಪಾರಣ್ಯ ಭಿತಿಹರ್ವ ಆಶ್ರಮದಿಂದ ಆರಂಭಗೊಂಡಿರುವ ಪಾದಯಾತ್ರೆ ಏಪ್ರಿಲ್ 15ರಂದು ಪಟ್ನಾದಲ್ಲಿ ಮುಕ್ತಾಯಗೊಳ್ಳಲಿದೆ. </p><p>1917ರಲ್ಲಿ ಮಹಾತ್ಮ ಗಾಂಧೀಜಿ ಅವರು ಚಂಪಾರಣ್ಯ ಸತ್ಯಾಗ್ರಹ ಆರಂಭಿಸಿದ ಸ್ಥಳದಿಂದಲೇ ಕನ್ಹಯ್ಯ ಕುಮಾರ್ ಪಾದಯಾತ್ರೆ ಆರಂಭಿಸಿದ್ದಾರೆ.</p><p>ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.</p><p>‘ನಿಮ್ಮ ಪ್ರೀತಿ ಪಾತ್ರರಿಗೆ ನೀವು ಬರೆಯುವ ಪ್ರೇಮ ಪತ್ರಗಳು ಸೋರಿಕೆಯಾಗುವುದಿಲ್ಲ. ಆದರೆ ನಿತೀಶ್ ಆಡಳಿತದಲ್ಲಿ ಎಲ್ಲ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ. ಇದರಿಂದ ನೇಮಕಾತಿ ವಿಳಂಬವಾಗುತ್ತಿದೆ ಮತ್ತು ಯುವಕರು ಖಿನ್ನತೆಗೆ ಒಳಗಾಗಿ ವಲಸೆ ಹೋಗುವುದು ಹೆಚ್ಚಾಗುತ್ತಿದೆ’ ಎಂದು ಕನ್ಹಯ್ಯ ಕುಮಾರ್ ಆರೋಪಿಸಿದರು.</p><p>ಬಿಹಾರದಲ್ಲಿ ಈ ವರ್ಷದ ಅಕ್ಟೋಬರ್ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆರ್ಜೆಡಿಯೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>