ದೇಸೀಯ ಕ್ಷಿಪಣಿಗಳ ವಿನ್ಯಾಸ, ಅಭಿವೃದ್ಧಿ ಹಾಗೂ ವೈಮಾನಿಕ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಹೆಸರು ಮಾಡಿರುವ ಸತೀಶರೆಡ್ಡಿ ಆಂಧ್ರಪ್ರದೇಶದವರು. ಅನಂತಪುರದ ಜವಹರಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದಿಂದ (ಜೆಎನ್ಟಿಯು) ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ. ಅಲ್ಲದೆ, ಹೈದರಾಬಾದ್ ಜೆಎನ್ಟಿಯುದಿಂದ ಎಂ.ಎಸ್ ಮತ್ತು ಪಿಎಚ್.ಡಿ ಪಡೆದಿದ್ದಾರೆ. ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರ ಕನಸಿನ ರಕ್ಷಣಾ ಸಂಶೋಧನಾ ಸಂಸ್ಥೆ ‘ರಿಸರ್ಚ್ ಸೆಂಟರ್ ಇಮಾನತ್’ನಲ್ಲಿ ವಿಜ್ಞಾನಿಯಾಗಿ ವೃತ್ತಿಜೀವನ ಆರಂಭಿಸಿದರು. 2015ರ ಮೇನಲ್ಲಿ ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ನೇಮಕಗೊಂಡರು.