<p><strong>ನವದೆಹಲಿ (ಪಿಟಿಐ):</strong> ಸೆಪ್ಟೆಂಬರ್ 9 ಮತ್ತು 10ರಂದು ಜಿ 20 ಶೃಂಗಸಭೆ ಹಿನ್ನೆಲೆಯಲ್ಲಿ ದೆಹಲಿಯ 61 ರಸ್ತೆಗಳು ಮತ್ತು ಸ್ಥಳಗಳನ್ನು 6.75 ಲಕ್ಷ ಹೂ, ಎಲೆಗಳ ಸಸ್ಯಗಳ ಕುಂಡಗಳಿಂದ ಅಲಂಕರಿಸಲಾಗುತ್ತದೆ ಎಂದು ರಾಜ್ ನಿವಾಸ್ (ರಾಜಭವನದ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಸರ್ದಾರ್ ಪಟೇಲ್ ಮಾರ್ಗ, ಮದರ್ ತೆರೇಸಾ ಕ್ರೆಸೆಂಟ್, ತೀನ್ ಮೂರ್ತಿ ಮಾರ್ಗ, ಧೌಲಾ ಕುವಾನ್-ಐಜಿಐ ವಿಮಾನ ನಿಲ್ದಾಣ ರಸ್ತೆ, ಪಾಲಂ ಟೆಕ್ನಿಕಲ್ ಏರಿಯಾ, ಇಂಡಿಯಾ ಗೇಟ್ ಸಿ-ಹೆಕ್ಸಗಾನ್, ಮಂಡಿ ಹೌಸ್, ಅಕ್ಬರ್ ರಸ್ತೆ ವೃತ್ತ, ದೆಹಲಿ ಗೇಟ್, ರಾಜ್ಘಾಟ್ ಮತ್ತು ಇತರ ರಸ್ತೆ, ಪ್ರದೇಶಗಳನ್ನು ಗಿಡಗಳಿಂದ ಅಲಂಕರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಅಲಂಕಾರದ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಬಲ್ಲ ಇಲಾಖೆಗಳನ್ನು ಗುರುತಿಸುವಂತೆ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ನೇತೃತ್ವದ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು. </p>.<p>ಅರಣ್ಯ ಇಲಾಖೆ ಮತ್ತು ದೆಹಲಿ ಉದ್ಯಾನ ಇಲಾಖೆಯು 3.75 ಲಕ್ಷ ಗಿಡಗಳನ್ನು, ಲೋಕೋಪಯೋಗಿ ಇಲಾಖೆಯು 50,000 ಗಿಡಗಳನ್ನು ಇರಿಸಲಿದೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರ 1 ಲಕ್ಷ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ 1 ಲಕ್ಷ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 50,000 ಕುಂಡಗಳನ್ನು ಹೊಂದಿಸಲಿದೆ.</p>.<p>ಈಗಾಗಲೇ 61 ರಸ್ತೆಗಳಲ್ಲಿ 4.05 ಲಕ್ಷ ಕುಂಡಗಳನ್ನು ಇರಿಸಲಾಗಿದೆ. ಹೂವಿನ ಗಿಡಗಳನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸೆಪ್ಟೆಂಬರ್ 9 ಮತ್ತು 10ರಂದು ಜಿ 20 ಶೃಂಗಸಭೆ ಹಿನ್ನೆಲೆಯಲ್ಲಿ ದೆಹಲಿಯ 61 ರಸ್ತೆಗಳು ಮತ್ತು ಸ್ಥಳಗಳನ್ನು 6.75 ಲಕ್ಷ ಹೂ, ಎಲೆಗಳ ಸಸ್ಯಗಳ ಕುಂಡಗಳಿಂದ ಅಲಂಕರಿಸಲಾಗುತ್ತದೆ ಎಂದು ರಾಜ್ ನಿವಾಸ್ (ರಾಜಭವನದ) ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಸರ್ದಾರ್ ಪಟೇಲ್ ಮಾರ್ಗ, ಮದರ್ ತೆರೇಸಾ ಕ್ರೆಸೆಂಟ್, ತೀನ್ ಮೂರ್ತಿ ಮಾರ್ಗ, ಧೌಲಾ ಕುವಾನ್-ಐಜಿಐ ವಿಮಾನ ನಿಲ್ದಾಣ ರಸ್ತೆ, ಪಾಲಂ ಟೆಕ್ನಿಕಲ್ ಏರಿಯಾ, ಇಂಡಿಯಾ ಗೇಟ್ ಸಿ-ಹೆಕ್ಸಗಾನ್, ಮಂಡಿ ಹೌಸ್, ಅಕ್ಬರ್ ರಸ್ತೆ ವೃತ್ತ, ದೆಹಲಿ ಗೇಟ್, ರಾಜ್ಘಾಟ್ ಮತ್ತು ಇತರ ರಸ್ತೆ, ಪ್ರದೇಶಗಳನ್ನು ಗಿಡಗಳಿಂದ ಅಲಂಕರಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p>.<p>ಅಲಂಕಾರದ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಬಲ್ಲ ಇಲಾಖೆಗಳನ್ನು ಗುರುತಿಸುವಂತೆ ಲೆಫ್ಟಿನೆಂಟ್ ಗವರ್ನರ್ ವಿ. ಕೆ. ಸಕ್ಸೇನಾ ನೇತೃತ್ವದ ಪೂರ್ವಸಿದ್ಧತಾ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಲಾಯಿತು. </p>.<p>ಅರಣ್ಯ ಇಲಾಖೆ ಮತ್ತು ದೆಹಲಿ ಉದ್ಯಾನ ಇಲಾಖೆಯು 3.75 ಲಕ್ಷ ಗಿಡಗಳನ್ನು, ಲೋಕೋಪಯೋಗಿ ಇಲಾಖೆಯು 50,000 ಗಿಡಗಳನ್ನು ಇರಿಸಲಿದೆ, ದೆಹಲಿ ಅಭಿವೃದ್ಧಿ ಪ್ರಾಧಿಕಾರ 1 ಲಕ್ಷ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ 1 ಲಕ್ಷ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 50,000 ಕುಂಡಗಳನ್ನು ಹೊಂದಿಸಲಿದೆ.</p>.<p>ಈಗಾಗಲೇ 61 ರಸ್ತೆಗಳಲ್ಲಿ 4.05 ಲಕ್ಷ ಕುಂಡಗಳನ್ನು ಇರಿಸಲಾಗಿದೆ. ಹೂವಿನ ಗಿಡಗಳನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>