<p><strong>ನವದೆಹಲಿ</strong>: 2019ರಲ್ಲಿ ಗಡಿಚಿರೋಲಿಯಲ್ಲಿ ಪೊಲೀಸ್ ವಾಹನವನ್ನು ಕಚ್ಚಾಬಾಂಬ್ನಿಂದ ಸ್ಫೋಟಿಸಿ 15 ಮಂದಿ ಪೊಲೀಸರ ಸಾವಿಗೆ ಕಾರಣರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲರ ಕುರಿತು ಸಹಾನೂಭುತಿ ಹೊಂದಿದ ಕೈಲಾಶ್ ರಾಮ್ಚಂದಾನಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.</p>.<p>‘ಆರೋಪಿಯ ಕೈಗಳು ಪೊಲೀಸರ ರಕ್ತದ ಕಲೆಗಳನ್ನು ಹೊಂದಿವೆ’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಸಿದರೂ ಕೂಡ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ವಿವಿಧ ಕಠಿಣ ಷರತ್ತುಗಳನ್ನು ವಿಧಿಸಿ, ಆರೋಪಿಗೆ ಮಧ್ಯಂತರ ಜಾಮೀನು ನೀಡಿದೆ. </p>.<p>2019ರ ಜೂನ್ 29ರಂದು ಕೈಲಾಶ್ ಅವರನ್ನು ಬಂಧಿಸಲಾಗಿತ್ತು. ಆಗಿನಿಂದಲೂ ಆರೋಪಿಯು ಜೈಲಿನಲ್ಲಿರುವ ಕುರಿತು ಉಲ್ಲೇಖಿಸಿದ ನ್ಯಾಯಪೀಠ, ‘ಎನ್ಐಎ ವಿಶೇಷ ನ್ಯಾಯಾಲಯದ ಅನುಮತಿ ಪಡೆಯದೇ, ಆರೋಪಿಯು ಗಡಿಚಿರೋಲಿ ಬಿಟ್ಟುಹೋಗುವಂತಿಲ್ಲ’ ಎಂಬ ಷರತ್ತು ವಿಧಿಸಿದೆ.</p>.<p>ಮುಂಬೈನಲ್ಲಿರುವ ಎನ್ಐಎ ನ್ಯಾಯಾಲಯಕ್ಕೆ ಹಾಜರಾಗಲು ಮಾತ್ರ ಮೂಲ ಸ್ಥಾನವನ್ನು ಬಿಟ್ಟು ತೆರಳಬಹುದು. ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು. ಮೊಬೈಲ್ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಬೇಕು ಎಂಬ ಷರತ್ತುಗಳನ್ನೂ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2019ರಲ್ಲಿ ಗಡಿಚಿರೋಲಿಯಲ್ಲಿ ಪೊಲೀಸ್ ವಾಹನವನ್ನು ಕಚ್ಚಾಬಾಂಬ್ನಿಂದ ಸ್ಫೋಟಿಸಿ 15 ಮಂದಿ ಪೊಲೀಸರ ಸಾವಿಗೆ ಕಾರಣರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕ್ಸಲರ ಕುರಿತು ಸಹಾನೂಭುತಿ ಹೊಂದಿದ ಕೈಲಾಶ್ ರಾಮ್ಚಂದಾನಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.</p>.<p>‘ಆರೋಪಿಯ ಕೈಗಳು ಪೊಲೀಸರ ರಕ್ತದ ಕಲೆಗಳನ್ನು ಹೊಂದಿವೆ’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಸಿದರೂ ಕೂಡ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ವಿವಿಧ ಕಠಿಣ ಷರತ್ತುಗಳನ್ನು ವಿಧಿಸಿ, ಆರೋಪಿಗೆ ಮಧ್ಯಂತರ ಜಾಮೀನು ನೀಡಿದೆ. </p>.<p>2019ರ ಜೂನ್ 29ರಂದು ಕೈಲಾಶ್ ಅವರನ್ನು ಬಂಧಿಸಲಾಗಿತ್ತು. ಆಗಿನಿಂದಲೂ ಆರೋಪಿಯು ಜೈಲಿನಲ್ಲಿರುವ ಕುರಿತು ಉಲ್ಲೇಖಿಸಿದ ನ್ಯಾಯಪೀಠ, ‘ಎನ್ಐಎ ವಿಶೇಷ ನ್ಯಾಯಾಲಯದ ಅನುಮತಿ ಪಡೆಯದೇ, ಆರೋಪಿಯು ಗಡಿಚಿರೋಲಿ ಬಿಟ್ಟುಹೋಗುವಂತಿಲ್ಲ’ ಎಂಬ ಷರತ್ತು ವಿಧಿಸಿದೆ.</p>.<p>ಮುಂಬೈನಲ್ಲಿರುವ ಎನ್ಐಎ ನ್ಯಾಯಾಲಯಕ್ಕೆ ಹಾಜರಾಗಲು ಮಾತ್ರ ಮೂಲ ಸ್ಥಾನವನ್ನು ಬಿಟ್ಟು ತೆರಳಬಹುದು. ವಾರಕ್ಕೊಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು. ಮೊಬೈಲ್ ಅನ್ನು ಪೊಲೀಸರ ವಶಕ್ಕೆ ಒಪ್ಪಿಸಬೇಕು ಎಂಬ ಷರತ್ತುಗಳನ್ನೂ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>