<p><strong>ಚೆನ್ನೈ:</strong> ‘ಮಾನವಸಹಿತ ‘ಗಗನಯಾನ’ ಯೋಜನೆ ಭಾಗವಾಗಿರುವ ಮೂರು ರಾಕೆಟ್ ಪೈಕಿ ಒಂದನ್ನು ಈ ವರ್ಷಾಂತ್ಯದಲ್ಲಿ ಉಡಾವಣೆ ಮಾಡಲಾಗುವುದು’ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಗುರುವಾರ ಇಲ್ಲಿ ಹೇಳಿದ್ದಾರೆ.</p> <p>ತಿರುನ್ವೇಲಿ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಗಗನಯಾನ ಯೋಜನೆ 2027ರ ವೇಳೆಗೆ ನಿಗದಿಯಾಗಲಿದ್ದು, ಗಾಳಿಯ ಗುಣಮಟ್ಟ, ತಾಪಮಾನ ನಿಯಂತ್ರಣ, ತ್ಯಾಜ್ಯ ನಿರ್ವಹಣೆ ಹಾಗೂ ತುರ್ತು ಪ್ರತಿಕ್ರಿಯೆಗಳು ಸೇರಿದಂತೆ 8 ಸಾವಿರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.</p> <p>‘2025 ಕೊನೆಯಲ್ಲಿ ಮಾನವರಹಿತ ರಾಕೆಟ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮತ್ತೆರಡನ್ನು 2026ರಲ್ಲಿ ನಡೆಸಲು ನಿರ್ಧರಿಸಿದ್ದು, ಇದರಲ್ಲಿ ಗಗನಯಾತ್ರಿಗಳು ಇರುವ ಕೋಶ, ಮರುಪ್ರವೇಶ ವ್ಯವಸ್ಥೆಯೂ ಒಳಗೊಂಡಿರಲಿದೆ. ನಮ್ಮದೇ ರಾಕೆಟ್ನಲ್ಲಿ ಭಾರತದ ಗಗನಯಾನಿಯನ್ನು ಕಳುಹಿಸುವ ನಿಟ್ಟಿನಲ್ಲಿ ನಾವು ನಿರಂತರ ಶ್ರಮಿಸುತ್ತಿದ್ದೇವೆ’ ಎಂದು ವಿವರಿಸಿದ್ದಾರೆ.</p> <p>‘ಗಗನಯಾತ್ರಿಗಳು ಕಕ್ಷೆಯಲ್ಲಿರುವಾಗ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರಿಸರ ನಿಯಂತ್ರಣ ಹಾಗೂ ಜೀವ ರಕ್ಷಣಾ ವ್ಯವಸ್ಥೆಯನ್ನು ಯೋಜನೆಯೂ ಒಳಗೊಂಡಿರಲಿದೆ’ ಎಂದು ತಿಳಿಸಿದ್ದಾರೆ.</p> <p>‘ಇದುವರೆಗೂ ನಾವು ನಡೆಸಿದ ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿದೆ. ತಂತ್ರಜ್ಞಾನದ ಪರಿಷ್ಕರಣೆ ನಿಟ್ಟಿನಲ್ಲಿ ನಾವು ಬೆಲೆ ಕಟ್ಟಲಾಗದ ಪಾಠಗಳನ್ನು ಕಲಿತಿದ್ದೇವೆ. ಗಗನಯಾನ ಯೋಜನೆಯೂ ಕೇವಲ ಬಾಹ್ಯಾಕಾಶವನ್ನು ತಲುಪುವುದಷ್ಟೇ ಅಲ್ಲ, ಮುಂದಿನ ತಲೆಮಾರಿನ ವಿಜ್ಞಾನಿಗಳಿಗೂ ಸ್ಫೂರ್ತಿ ನೀಡಲಿದೆ’ ಎಂದು ನಾರಾಯಣನ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ಮಾನವಸಹಿತ ‘ಗಗನಯಾನ’ ಯೋಜನೆ ಭಾಗವಾಗಿರುವ ಮೂರು ರಾಕೆಟ್ ಪೈಕಿ ಒಂದನ್ನು ಈ ವರ್ಷಾಂತ್ಯದಲ್ಲಿ ಉಡಾವಣೆ ಮಾಡಲಾಗುವುದು’ ಎಂದು ಇಸ್ರೊ ಅಧ್ಯಕ್ಷ ವಿ.ನಾರಾಯಣನ್ ಗುರುವಾರ ಇಲ್ಲಿ ಹೇಳಿದ್ದಾರೆ.</p> <p>ತಿರುನ್ವೇಲಿ ಜಿಲ್ಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಗಗನಯಾನ ಯೋಜನೆ 2027ರ ವೇಳೆಗೆ ನಿಗದಿಯಾಗಲಿದ್ದು, ಗಾಳಿಯ ಗುಣಮಟ್ಟ, ತಾಪಮಾನ ನಿಯಂತ್ರಣ, ತ್ಯಾಜ್ಯ ನಿರ್ವಹಣೆ ಹಾಗೂ ತುರ್ತು ಪ್ರತಿಕ್ರಿಯೆಗಳು ಸೇರಿದಂತೆ 8 ಸಾವಿರ ಪರೀಕ್ಷೆಗಳನ್ನು ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.</p> <p>‘2025 ಕೊನೆಯಲ್ಲಿ ಮಾನವರಹಿತ ರಾಕೆಟ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಮತ್ತೆರಡನ್ನು 2026ರಲ್ಲಿ ನಡೆಸಲು ನಿರ್ಧರಿಸಿದ್ದು, ಇದರಲ್ಲಿ ಗಗನಯಾತ್ರಿಗಳು ಇರುವ ಕೋಶ, ಮರುಪ್ರವೇಶ ವ್ಯವಸ್ಥೆಯೂ ಒಳಗೊಂಡಿರಲಿದೆ. ನಮ್ಮದೇ ರಾಕೆಟ್ನಲ್ಲಿ ಭಾರತದ ಗಗನಯಾನಿಯನ್ನು ಕಳುಹಿಸುವ ನಿಟ್ಟಿನಲ್ಲಿ ನಾವು ನಿರಂತರ ಶ್ರಮಿಸುತ್ತಿದ್ದೇವೆ’ ಎಂದು ವಿವರಿಸಿದ್ದಾರೆ.</p> <p>‘ಗಗನಯಾತ್ರಿಗಳು ಕಕ್ಷೆಯಲ್ಲಿರುವಾಗ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರಿಸರ ನಿಯಂತ್ರಣ ಹಾಗೂ ಜೀವ ರಕ್ಷಣಾ ವ್ಯವಸ್ಥೆಯನ್ನು ಯೋಜನೆಯೂ ಒಳಗೊಂಡಿರಲಿದೆ’ ಎಂದು ತಿಳಿಸಿದ್ದಾರೆ.</p> <p>‘ಇದುವರೆಗೂ ನಾವು ನಡೆಸಿದ ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿದೆ. ತಂತ್ರಜ್ಞಾನದ ಪರಿಷ್ಕರಣೆ ನಿಟ್ಟಿನಲ್ಲಿ ನಾವು ಬೆಲೆ ಕಟ್ಟಲಾಗದ ಪಾಠಗಳನ್ನು ಕಲಿತಿದ್ದೇವೆ. ಗಗನಯಾನ ಯೋಜನೆಯೂ ಕೇವಲ ಬಾಹ್ಯಾಕಾಶವನ್ನು ತಲುಪುವುದಷ್ಟೇ ಅಲ್ಲ, ಮುಂದಿನ ತಲೆಮಾರಿನ ವಿಜ್ಞಾನಿಗಳಿಗೂ ಸ್ಫೂರ್ತಿ ನೀಡಲಿದೆ’ ಎಂದು ನಾರಾಯಣನ್ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>