ಜೈಪುರ: ‘ರಾಜಸ್ಥಾನ ರಾಜಕೀಯದಲ್ಲಿ ಅಶೋಕ್ ಗೆಹಲೋತ್ ಒಬ್ಬ ರಾವಣ. ಆದ್ದರಿಂದ ರಾಜ್ಯದಲ್ಲಿ ರಾಮರಾಜ್ಯ ಸ್ಥಾಪನೆ ಮಾಡಬೇಕು ಎಂಬ ನಿರ್ಧಾರವನ್ನು ನೀವು ಕೈಗೊಳ್ಳಬೇಕು’ ಎಂದು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಶನಿವಾರ ಎಫ್ಐಆರ್ ದಾಖಲಾಗಿದೆ.