<p><strong>ನವದೆಹಲಿ</strong>: ವಿಪಕ್ಷಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮಾಡುವ ಪ್ರತಿಭಟನೆಗಳನ್ನು ತಡೆಯುವ ಉದ್ದೇಶದಿಂದ ಸಂಸತ್ ಭವನದ ಆವರಣದಿಂದ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಶಿವಾಜಿ ಸೇರಿದಂತೆ ಮಹನೀಯರ ಪ್ರತಿಮೆಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಈ ರೀತಿಯ ಸ್ಟಂಟ್ಗಳು ಪ್ರಧಾನಿ ನರೇಂದ್ರ ಮೋದಿಯವರ ಅಸ್ಥಿರ ಸರ್ಕಾರ ಉರುಳುವುದನ್ನು ತಡೆಯಲಾಗುವುದಿಲ್ಲ ಎಂದಿದೆ.</p><p>ಪ್ರತಿಮೆಗಳ ಸ್ಥಳಾಂತರ ಕುರಿತಂತೆ ಲೋಕಸಭಾ ಕಾರ್ಯಾಲಯ ನೀಡಿರುವ ವಿವರಣೆ ಸಂಪೂರ್ಣ ಬೋಗಸ್ ಆಗಿದ್ದು, ಈ ವಿಚಾರದ ಬಗ್ಗೆ ಯಾವುದೇ ರಾಜಕೀಯ ಪಕ್ಷದ ಜೊತೆ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೂರಿದ್ದಾರೆ.</p><p>ಸಂಸತ್ ಭವನದ ಬೇರೆ ಬೇರೆ ಕಡೆ ಪುತ್ಥಳಿಗಳಿದ್ದ ಕಾರಣ ಸಂಸತ್ತಿಗೆ ಭೇಟಿ ನೀಡುವವರು ಅವುಗಳನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಲೋಕಸಭಾ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು</p><p> 'ಈ ಕಾರಣಕ್ಕಾಗಿ ಎಲ್ಲ ಪ್ರತಿಮೆಗಳನ್ನು ಸಂಸತ್ ಭವನದ ಆವರಣದಲ್ಲಿರುವ ‘ಪ್ರೇರಣಾ ಸ್ಥಳ’ಕ್ಕೆ ಗೌರವಯುತವಾಗಿ ಸ್ಥಳಾಂತರ ಮಾಡಲಾಗಿದೆ. ಸಂಸತ್ತಿನ ಸಂಕೀರ್ಣಕ್ಕೆ ಬರುವ ಸಂದರ್ಶಕರು ಈ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ವೀಕ್ಷಿಸಲು ಮತ್ತು ಅವರ ಜೀವನ ಅನುಭವದಿಂದ ಸ್ಫೂರ್ತಿ ಪಡೆಯುವ ರೀತಿಯಲ್ಲಿ ಅನುಕೂಲವಾಗಲೆಂದು ಈ 'ಪ್ರೇರಣಾ ಸ್ಥಳ'ವನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.</p><p>ಸಂಸತ್ ಭವನದ ಸಂಕೀರ್ಣವು ಲೋಕಸಭಾ ಸ್ಪೀಕರ್ ಅವರ ಅಧೀನದಲ್ಲಿದ್ದು, ಅವರ ಅನುಮತಿ ಪಡೆದೇ ಪ್ರತಿಮೆಗಳ ಸ್ಥಳಾಂತರ ನಡೆದಿದೆ ಎಂದು ಕಾರ್ಯಾಲಯ ತಿಳಿಸಿತ್ತು.</p><p>‘ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ಮೋದಿ ಸರ್ಕಾರವು ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳನ್ನು ಸಂಸತ್ ಭವನದ ಎದುರಿನ ಪ್ರಮುಖ ಸ್ಥಳದಿಂದ ಹೇಗೆ ಸ್ಥಳಾಂತರ ಮಾಡುತ್ತಿವೆ ಎಂಬುದನ್ನು ನಾನು ಹೈಲೆಟ್ ಮಾಡಿದ್ದೆ’ ಎಂದು ರಮೇಶ್ ಹೇಳಿದ್ದಾರೆ.</p><p>ನಿನ್ನೆ ರಾತ್ರಿ ಪ್ರತಿಮೆಗಳ ಸ್ಥಳಾಂತರಕ್ಕೆ ಲೋಕಸಭೆ ಕಾರ್ಯಾಲಯ ನೀಡಿರುವ ಕಾರಣ ಬೋಗಸ್. ಈಗ ಅದರ ಕಾರಣ ತಿಳಿದುಬಂದಿದೆ. ಮೋದಿ ಆಡಳಿತದ ಈ 10 ವರ್ಷಗಳಲ್ಲಿ ಪುತ್ಥಳಿಗಳ ಎದುರು ಟಿಡಿಪಿ, ಜೆಡಿಯು ಸೇರಿದಂತೆ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಅಂತಹ ಪ್ರತಿಭಟನೆಗಳಿಗೆ ತಡೆ ಹಾಕಲು ಮೋದಿ ಸರ್ಕಾರ ಈ ಕೆಲಸ ಮಾಡಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p><p>ಈ ಮೂಲಕ ಪ್ರಧಾನಿ ಮೋದಿ ವಿರೋಧ ಪಕ್ಷಗಳು ಸಂವಿಧಾನಬದ್ಧವಾಗಿ ಪ್ರತಿಭಟನೆ ನಡೆಸಲು ಸ್ಥಳಾವಕಾಶ ಇಲ್ಲದಂತೆ ಮಾಡಿದ್ದಾರೆ ಎಂದು ಜೈರಾಮ್ ದೂರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಪಕ್ಷಗಳು ಪ್ರಜಾಸತ್ತಾತ್ಮಕ ರೀತಿಯಲ್ಲಿ ಮಾಡುವ ಪ್ರತಿಭಟನೆಗಳನ್ನು ತಡೆಯುವ ಉದ್ದೇಶದಿಂದ ಸಂಸತ್ ಭವನದ ಆವರಣದಿಂದ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ಶಿವಾಜಿ ಸೇರಿದಂತೆ ಮಹನೀಯರ ಪ್ರತಿಮೆಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಈ ರೀತಿಯ ಸ್ಟಂಟ್ಗಳು ಪ್ರಧಾನಿ ನರೇಂದ್ರ ಮೋದಿಯವರ ಅಸ್ಥಿರ ಸರ್ಕಾರ ಉರುಳುವುದನ್ನು ತಡೆಯಲಾಗುವುದಿಲ್ಲ ಎಂದಿದೆ.</p><p>ಪ್ರತಿಮೆಗಳ ಸ್ಥಳಾಂತರ ಕುರಿತಂತೆ ಲೋಕಸಭಾ ಕಾರ್ಯಾಲಯ ನೀಡಿರುವ ವಿವರಣೆ ಸಂಪೂರ್ಣ ಬೋಗಸ್ ಆಗಿದ್ದು, ಈ ವಿಚಾರದ ಬಗ್ಗೆ ಯಾವುದೇ ರಾಜಕೀಯ ಪಕ್ಷದ ಜೊತೆ ಚರ್ಚೆ ನಡೆಸಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ದೂರಿದ್ದಾರೆ.</p><p>ಸಂಸತ್ ಭವನದ ಬೇರೆ ಬೇರೆ ಕಡೆ ಪುತ್ಥಳಿಗಳಿದ್ದ ಕಾರಣ ಸಂಸತ್ತಿಗೆ ಭೇಟಿ ನೀಡುವವರು ಅವುಗಳನ್ನು ನೋಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಲೋಕಸಭಾ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿತ್ತು</p><p> 'ಈ ಕಾರಣಕ್ಕಾಗಿ ಎಲ್ಲ ಪ್ರತಿಮೆಗಳನ್ನು ಸಂಸತ್ ಭವನದ ಆವರಣದಲ್ಲಿರುವ ‘ಪ್ರೇರಣಾ ಸ್ಥಳ’ಕ್ಕೆ ಗೌರವಯುತವಾಗಿ ಸ್ಥಳಾಂತರ ಮಾಡಲಾಗಿದೆ. ಸಂಸತ್ತಿನ ಸಂಕೀರ್ಣಕ್ಕೆ ಬರುವ ಸಂದರ್ಶಕರು ಈ ಮಹಾನ್ ವ್ಯಕ್ತಿಗಳ ಪ್ರತಿಮೆಗಳನ್ನು ವೀಕ್ಷಿಸಲು ಮತ್ತು ಅವರ ಜೀವನ ಅನುಭವದಿಂದ ಸ್ಫೂರ್ತಿ ಪಡೆಯುವ ರೀತಿಯಲ್ಲಿ ಅನುಕೂಲವಾಗಲೆಂದು ಈ 'ಪ್ರೇರಣಾ ಸ್ಥಳ'ವನ್ನು ಅಭಿವೃದ್ಧಿಪಡಿಸಲಾಗುತ್ತಿದೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.</p><p>ಸಂಸತ್ ಭವನದ ಸಂಕೀರ್ಣವು ಲೋಕಸಭಾ ಸ್ಪೀಕರ್ ಅವರ ಅಧೀನದಲ್ಲಿದ್ದು, ಅವರ ಅನುಮತಿ ಪಡೆದೇ ಪ್ರತಿಮೆಗಳ ಸ್ಥಳಾಂತರ ನಡೆದಿದೆ ಎಂದು ಕಾರ್ಯಾಲಯ ತಿಳಿಸಿತ್ತು.</p><p>‘ನಿನ್ನೆ ಮಧ್ಯಾಹ್ನ 2.30ರ ಸುಮಾರಿಗೆ ಮೋದಿ ಸರ್ಕಾರವು ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳನ್ನು ಸಂಸತ್ ಭವನದ ಎದುರಿನ ಪ್ರಮುಖ ಸ್ಥಳದಿಂದ ಹೇಗೆ ಸ್ಥಳಾಂತರ ಮಾಡುತ್ತಿವೆ ಎಂಬುದನ್ನು ನಾನು ಹೈಲೆಟ್ ಮಾಡಿದ್ದೆ’ ಎಂದು ರಮೇಶ್ ಹೇಳಿದ್ದಾರೆ.</p><p>ನಿನ್ನೆ ರಾತ್ರಿ ಪ್ರತಿಮೆಗಳ ಸ್ಥಳಾಂತರಕ್ಕೆ ಲೋಕಸಭೆ ಕಾರ್ಯಾಲಯ ನೀಡಿರುವ ಕಾರಣ ಬೋಗಸ್. ಈಗ ಅದರ ಕಾರಣ ತಿಳಿದುಬಂದಿದೆ. ಮೋದಿ ಆಡಳಿತದ ಈ 10 ವರ್ಷಗಳಲ್ಲಿ ಪುತ್ಥಳಿಗಳ ಎದುರು ಟಿಡಿಪಿ, ಜೆಡಿಯು ಸೇರಿದಂತೆ ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು. ಅಂತಹ ಪ್ರತಿಭಟನೆಗಳಿಗೆ ತಡೆ ಹಾಕಲು ಮೋದಿ ಸರ್ಕಾರ ಈ ಕೆಲಸ ಮಾಡಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ.</p><p>ಈ ಮೂಲಕ ಪ್ರಧಾನಿ ಮೋದಿ ವಿರೋಧ ಪಕ್ಷಗಳು ಸಂವಿಧಾನಬದ್ಧವಾಗಿ ಪ್ರತಿಭಟನೆ ನಡೆಸಲು ಸ್ಥಳಾವಕಾಶ ಇಲ್ಲದಂತೆ ಮಾಡಿದ್ದಾರೆ ಎಂದು ಜೈರಾಮ್ ದೂರಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>