<p><strong>ಹೈದರಾಬಾದ್:</strong> ರಾಜ್ಯದಲ್ಲಿ 'ಗಾಂಧಿ ಸರೋವರ ಯೋಜನೆ'ಯನ್ನು ಅನುಷ್ಠಾನ ಮಾಡಲು 98.20 ಎಕರೆ ರಕ್ಷಣಾ ಭೂಮಿಯನ್ನು ಕೋರಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. </p><p>ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿಯಾದ ರೆಡ್ಡಿ ಅವರು ಹೈದರಾಬಾದ್ನಲ್ಲಿರುವ ಮೂಸಿ ಹಾಗೂ ಎಸಿ ನದಿಗಳ ಸಂಗಮದಲ್ಲಿ ಗಾಂಧಿ ಸರ್ಕಲ್ ಆಫ್ ಯೂನಿಟಿಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆಯನ್ನು ಹಾಕಿಕೊಂಡಿದೆ. ಈ ಯೋಜನೆಯು ದೇಶದ ಏಕತೆಯ ಲಾಂಛನವಾಗಲಿದೆ. ಮಹಾತ್ಮ ಗಾಂಧಿಯವರ ಕಾಲಾತೀತ ಆದರ್ಶಗಳಿಗೆ ಇದು ಮಾದರಿಯಾಗಲಿದೆ ಎಂದು ಹೇಳಿದ್ದಾರೆ. </p><p>ಗಾಂಧಿ ಸರೋವರ ಯೋಜನೆಯಲ್ಲಿ ಗಾಂಧೀಜಿಯವರ ಸ್ಮಾರಕದ ಜೊತೆಗೆ, ಧ್ಯಾನ ಮಂದಿರ ಹಾಗೂ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ. </p><p>ರಾಜ್ಯದಲ್ಲಿ ಯಂಗ್ ಇಂಡಿಯಾ ಇಂಟಿಗ್ರೇಟೆಡ್ ರೆಸಿಡೆನ್ಶಿಯಲ್ ಸ್ಕೂಲ್ಸ್ ನಿರ್ಮಾಣಕ್ಕೆ ಹಣವನ್ನು ಸಂಗ್ರಹಿಸಲು ವಿಶೇಷ ನಿಗಮವನ್ನು ಸ್ಥಾಪಿಸಲು ನಿರ್ಮಲಾ ಸೀತಾರಾಮನ್ ಅವರಿಗೆ ಬೇಡಿಕೆಯಿಟ್ಟಿದ್ದಾರೆ. ಹೈದರಾಬಾದ್ನಿಂದ ಮಚಲಿಪಟ್ನಂ ಬಂದರಿಗೆ 12 ಪಥಗಳ ಹಸಿರು ರಸ್ತೆಯನ್ನು ಮಂಜೂರು ಮಾಡುವಂತೆ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ರಾಜ್ಯದಲ್ಲಿ 'ಗಾಂಧಿ ಸರೋವರ ಯೋಜನೆ'ಯನ್ನು ಅನುಷ್ಠಾನ ಮಾಡಲು 98.20 ಎಕರೆ ರಕ್ಷಣಾ ಭೂಮಿಯನ್ನು ಕೋರಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ. </p><p>ದೆಹಲಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿಯಾದ ರೆಡ್ಡಿ ಅವರು ಹೈದರಾಬಾದ್ನಲ್ಲಿರುವ ಮೂಸಿ ಹಾಗೂ ಎಸಿ ನದಿಗಳ ಸಂಗಮದಲ್ಲಿ ಗಾಂಧಿ ಸರ್ಕಲ್ ಆಫ್ ಯೂನಿಟಿಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆಯನ್ನು ಹಾಕಿಕೊಂಡಿದೆ. ಈ ಯೋಜನೆಯು ದೇಶದ ಏಕತೆಯ ಲಾಂಛನವಾಗಲಿದೆ. ಮಹಾತ್ಮ ಗಾಂಧಿಯವರ ಕಾಲಾತೀತ ಆದರ್ಶಗಳಿಗೆ ಇದು ಮಾದರಿಯಾಗಲಿದೆ ಎಂದು ಹೇಳಿದ್ದಾರೆ. </p><p>ಗಾಂಧಿ ಸರೋವರ ಯೋಜನೆಯಲ್ಲಿ ಗಾಂಧೀಜಿಯವರ ಸ್ಮಾರಕದ ಜೊತೆಗೆ, ಧ್ಯಾನ ಮಂದಿರ ಹಾಗೂ ವಸ್ತುಸಂಗ್ರಹಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ. </p><p>ರಾಜ್ಯದಲ್ಲಿ ಯಂಗ್ ಇಂಡಿಯಾ ಇಂಟಿಗ್ರೇಟೆಡ್ ರೆಸಿಡೆನ್ಶಿಯಲ್ ಸ್ಕೂಲ್ಸ್ ನಿರ್ಮಾಣಕ್ಕೆ ಹಣವನ್ನು ಸಂಗ್ರಹಿಸಲು ವಿಶೇಷ ನಿಗಮವನ್ನು ಸ್ಥಾಪಿಸಲು ನಿರ್ಮಲಾ ಸೀತಾರಾಮನ್ ಅವರಿಗೆ ಬೇಡಿಕೆಯಿಟ್ಟಿದ್ದಾರೆ. ಹೈದರಾಬಾದ್ನಿಂದ ಮಚಲಿಪಟ್ನಂ ಬಂದರಿಗೆ 12 ಪಥಗಳ ಹಸಿರು ರಸ್ತೆಯನ್ನು ಮಂಜೂರು ಮಾಡುವಂತೆ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>