ಎಲ್ಲರನ್ನೂ ಒಳಗೊಳ್ಳುವ ಭಾರತದ ದೃಷ್ಟಿಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬ ದೇಶಭಕ್ತನ ಕರ್ತವ್ಯ ಎಂದು ಅವರು ಹೇಳಿದ್ದಾರೆ.
‘ಮಹಾತ್ಮ ಗಾಂಧಿ ಹುತಾತ್ಮರಾದ ಈ ದಿನದಂದು, ಘೋರ ಆಕ್ರಮಣಕ್ಕೆ ಒಳಗಾಗುತ್ತಿರುವ ಎಲ್ಲರನ್ನೂ ಒಳಗೊಳ್ಳುವ ಭಾರತದ ದೃಷ್ಟಿಯನ್ನು ಎತ್ತಿಹಿಡಿಯುವುದು ಮತ್ತು ಬಲಪಡಿಸುವುದು ಎಲ್ಲಾ ಭಾರತೀಯ ದೇಶಭಕ್ತರ ಕರ್ತವ್ಯವಾಗಿದೆ. ದೇಶದ ಒಗ್ಗಟ್ಟು ಹಾಗೂ ಜಾತ್ಯತೀತ ತತ್ವದ ಪರವಾಗಿ ನಿಂತಿದ್ದಕ್ಕೆ ಕೋಮುವಾದಿ ಶಕ್ತಿಗಳು ಮಹಾತ್ಮ ಗಾಂಧಿಯವರನ್ನು ಕೊಲೆ ಮಾಡಿದವು’ ಎಂದು ಅವರು ‘ಎಕ್ಸ್‘ ಪೋಸ್ಟ್ನಲ್ಲಿ ತಿಳಿಸಿದ್ದಾರೆ.