<p><strong>ನವದೆಹಲಿ:</strong> ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ತೆರೆಎಳೆಯುವ ನಿಮಿತ್ತ ಜ.29ರಂದು ಇಲ್ಲಿನ ವಿಜಯ್ಚೌಕ್ನಲ್ಲಿ ನಡೆಸುವ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಿಂದ ‘ಅಬೈಡ್ ವಿತ್ ಮಿ’ ಗೀತೆ ಕೈಬಿಡಲು ಸರ್ಕಾರ ನಿರ್ಧರಿಸಿದೆ.</p>.<p>ಇದು, ಮಹಾತ್ಮಗಾಂಧಿ ಅವರಿಗೆ ಅತ್ಯಂತ ಪ್ರಿಯವಾದ ಗೀತೆಯಾಗಿತ್ತು. ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ಮುಗಿಯುವ ದ್ಯೋತಕವಾಗಿ ನುಡಿಸಲಾಗುತ್ತಿತ್ತು. ಶತಮಾನಗಳಷ್ಟು ಹಳೆಯದಾದ ಸೇನಾ ಸಂಪ್ರದಾಯದಲ್ಲಿ ಇದು ಬಳಕೆಯಲ್ಲಿದೆ.</p>.<p>‘ಶಾಶ್ವತ ಜ್ಯೋತಿ’ಯನ್ನು ಇಂಡಿಯಾ ಗೇಟ್ ಬಳಿಯ ಅಮರ್ ಜವಾನ್ ಜ್ಯೋತಿ ಸ್ಥಳದಿಂದ ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಳಕ್ಕೆ ಸ್ಥಳಾಂತರಿಸಿದ್ದ ತೀರ್ಮಾನದ ಹಿಂದೆಯೇ ಸರ್ಕಾರದ ಈ ನಿರ್ಧಾರವೂ ಹೊರಬಿದ್ದಿದೆ.</p>.<p>ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ‘ಅಬೈಡ್ ವಿತ್ ಮಿ’ ಗೀತೆಯು ‘ಜೀವನಪೂರ್ತಿ, ಸಾವಿನವರೆಗೂ ಜೊತೆಗೇ ಇರು’ ಎಂದು ದೇವರನ್ನು ಕೋರುವ ಪ್ರಾರ್ಥನಾ ಗೀತೆಯಾಗಿದೆ. 1847ರಲ್ಲಿ ಸ್ಕಾಟ್ಲೆಂಡ್ನ ಹೆನ್ರಿ ಫ್ರಾನ್ಸಿಸ್ ಲೈಟ್ ಅವರು ರಚಿಸಿದ್ದರು. ಅವರು ಕ್ಷಯರೋಗದಿಂದ ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ತೆರೆಎಳೆಯುವ ನಿಮಿತ್ತ ಜ.29ರಂದು ಇಲ್ಲಿನ ವಿಜಯ್ಚೌಕ್ನಲ್ಲಿ ನಡೆಸುವ ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮದಿಂದ ‘ಅಬೈಡ್ ವಿತ್ ಮಿ’ ಗೀತೆ ಕೈಬಿಡಲು ಸರ್ಕಾರ ನಿರ್ಧರಿಸಿದೆ.</p>.<p>ಇದು, ಮಹಾತ್ಮಗಾಂಧಿ ಅವರಿಗೆ ಅತ್ಯಂತ ಪ್ರಿಯವಾದ ಗೀತೆಯಾಗಿತ್ತು. ಬೀಟಿಂಗ್ ರಿಟ್ರೀಟ್ ಕಾರ್ಯಕ್ರಮ ಮುಗಿಯುವ ದ್ಯೋತಕವಾಗಿ ನುಡಿಸಲಾಗುತ್ತಿತ್ತು. ಶತಮಾನಗಳಷ್ಟು ಹಳೆಯದಾದ ಸೇನಾ ಸಂಪ್ರದಾಯದಲ್ಲಿ ಇದು ಬಳಕೆಯಲ್ಲಿದೆ.</p>.<p>‘ಶಾಶ್ವತ ಜ್ಯೋತಿ’ಯನ್ನು ಇಂಡಿಯಾ ಗೇಟ್ ಬಳಿಯ ಅಮರ್ ಜವಾನ್ ಜ್ಯೋತಿ ಸ್ಥಳದಿಂದ ರಾಷ್ಟ್ರೀಯ ಯುದ್ಧ ಸ್ಮಾರಕ ಸ್ಥಳಕ್ಕೆ ಸ್ಥಳಾಂತರಿಸಿದ್ದ ತೀರ್ಮಾನದ ಹಿಂದೆಯೇ ಸರ್ಕಾರದ ಈ ನಿರ್ಧಾರವೂ ಹೊರಬಿದ್ದಿದೆ.</p>.<p>ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ‘ಅಬೈಡ್ ವಿತ್ ಮಿ’ ಗೀತೆಯು ‘ಜೀವನಪೂರ್ತಿ, ಸಾವಿನವರೆಗೂ ಜೊತೆಗೇ ಇರು’ ಎಂದು ದೇವರನ್ನು ಕೋರುವ ಪ್ರಾರ್ಥನಾ ಗೀತೆಯಾಗಿದೆ. 1847ರಲ್ಲಿ ಸ್ಕಾಟ್ಲೆಂಡ್ನ ಹೆನ್ರಿ ಫ್ರಾನ್ಸಿಸ್ ಲೈಟ್ ಅವರು ರಚಿಸಿದ್ದರು. ಅವರು ಕ್ಷಯರೋಗದಿಂದ ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>