<p><strong>ಜೈಪುರ:</strong> ಕರ್ನಾಟಕವು ಸೇರಿದಂತೆ ದೇಶದ ವಿವಿಧೆಡೆ ₹2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಸೈಬರ್ ವಂಚನೆಯಲ್ಲಿ ಭಾಗಿಯಾಗಿದ್ದ ಗ್ಯಾಂಗ್ನ ಮುಖ್ಯಸ್ಥನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳು ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ 2022ರಲ್ಲಿ 'ಟೆಕ್ಬಲ್ ಟೆಕ್' ಎಂಬ ಕಂಪನಿ ಆರಂಭಿಸಿ, ಜನರಿಗೆ ಸೈಬರ್ ತರಬೇತಿ ನೀಡಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.</p>.<p>ಕರ್ನಾಟಕದ ಕಾಂತಪ್ಪ ಬಾಬು ಚವ್ಹಾಣ ಎಂಬುವರು ಮಂಗಳವಾರ ನೀಡಿದ ದೂರಿನ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಶ್ರೀಗಂಗಾನಗರ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಯಾದವ್ ತಿಳಿಸಿದ್ದಾರೆ.</p>.<p>ಅಜಯ್ ಆರ್ಯ ಎಂಬಾತನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, ₹10 ಲಕ್ಷ ನಗದು, ಮೂರು ಸಿಪಿಯು, ಆರು ಮೊಬೈಲ್ ಫೋನ್, ಎಂಟು ಎಟಿಎಂ ಕಾರ್ಡ್, ಮೂರು ಪ್ಯಾನ್ ಕಾರ್ಡ್, ಅಂದಾಜು ₹85 ಲಕ್ಷ ಮೌಲ್ಯದ ಐಷಾರಾಮಿ ಕಾರು ಮತ್ತು ಸೈಬರ್ ವಂಚನೆಗೆ ಸಂಬಂಧಿಸಿದ ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಅಜಯ್ ಆರ್ಯ, ದೀಪಕ್ ಆರ್ಯ, ಲಜಪತ್ ಆರ್ಯ, ಸೌರಭ್ ಚಾವ್ಲಾ, ಈತನ ಪತ್ನಿ ಸಲೋನಿ ಚಾವ್ಲಾ, ಕರಮ್ಜಿತ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ರಾಜೇಂದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.</p>.<p>‘ಅಜಯ್ ಆರ್ಯ ಮತ್ತು ಆತನ ಸಹಚರರು ಕರ್ನಾಟಕದಲ್ಲಿ ಸಹಸ್ರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು, ₹2 ಸಾವಿರ ಕೋಟಿ ಮೊತ್ತದೊಂದಿಗೆ ಪರಾರಿಯಾಗಿ ಶ್ರೀಗಂಗಾನಗರಕ್ಕೆ ಬಂದಿದ್ದರು’ ಎಂದು ಕಾಂತಪ್ಪ ಪುರಾಣಿ ಆಬಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕರ್ನಾಟಕವು ಸೇರಿದಂತೆ ದೇಶದ ವಿವಿಧೆಡೆ ₹2 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಸೈಬರ್ ವಂಚನೆಯಲ್ಲಿ ಭಾಗಿಯಾಗಿದ್ದ ಗ್ಯಾಂಗ್ನ ಮುಖ್ಯಸ್ಥನನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳು ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ 2022ರಲ್ಲಿ 'ಟೆಕ್ಬಲ್ ಟೆಕ್' ಎಂಬ ಕಂಪನಿ ಆರಂಭಿಸಿ, ಜನರಿಗೆ ಸೈಬರ್ ತರಬೇತಿ ನೀಡಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.</p>.<p>ಕರ್ನಾಟಕದ ಕಾಂತಪ್ಪ ಬಾಬು ಚವ್ಹಾಣ ಎಂಬುವರು ಮಂಗಳವಾರ ನೀಡಿದ ದೂರಿನ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಶ್ರೀಗಂಗಾನಗರ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಯಾದವ್ ತಿಳಿಸಿದ್ದಾರೆ.</p>.<p>ಅಜಯ್ ಆರ್ಯ ಎಂಬಾತನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, ₹10 ಲಕ್ಷ ನಗದು, ಮೂರು ಸಿಪಿಯು, ಆರು ಮೊಬೈಲ್ ಫೋನ್, ಎಂಟು ಎಟಿಎಂ ಕಾರ್ಡ್, ಮೂರು ಪ್ಯಾನ್ ಕಾರ್ಡ್, ಅಂದಾಜು ₹85 ಲಕ್ಷ ಮೌಲ್ಯದ ಐಷಾರಾಮಿ ಕಾರು ಮತ್ತು ಸೈಬರ್ ವಂಚನೆಗೆ ಸಂಬಂಧಿಸಿದ ಇತರ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಅಜಯ್ ಆರ್ಯ, ದೀಪಕ್ ಆರ್ಯ, ಲಜಪತ್ ಆರ್ಯ, ಸೌರಭ್ ಚಾವ್ಲಾ, ಈತನ ಪತ್ನಿ ಸಲೋನಿ ಚಾವ್ಲಾ, ಕರಮ್ಜಿತ್ ಸಿಂಗ್, ಬಲ್ಜಿತ್ ಸಿಂಗ್ ಹಾಗೂ ರಾಜೇಂದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.</p>.<p>‘ಅಜಯ್ ಆರ್ಯ ಮತ್ತು ಆತನ ಸಹಚರರು ಕರ್ನಾಟಕದಲ್ಲಿ ಸಹಸ್ರಾರು ಜನರಿಂದ ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು, ₹2 ಸಾವಿರ ಕೋಟಿ ಮೊತ್ತದೊಂದಿಗೆ ಪರಾರಿಯಾಗಿ ಶ್ರೀಗಂಗಾನಗರಕ್ಕೆ ಬಂದಿದ್ದರು’ ಎಂದು ಕಾಂತಪ್ಪ ಪುರಾಣಿ ಆಬಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>