<p><strong>ಜೌನ್ಪುರ, ಉತ್ತರ ಪ್ರದೇಶ:</strong> ಜೂಜಾಟ ಹಾಗೂ ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನೇ ಜೂಜಿಗಿಟ್ಟಿದ್ದಾನೆ. ಸೋತ ಬಳಿಕ ಆತನ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.</p>.<p>ಉತ್ತರ ಪ್ರದೇಶದ ಜೌನ್ಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ ಕಾರಣ ಸಂತ್ರಸ್ತ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p>ಸಂತ್ರಸ್ತೆಯ ಪತಿಯ ಸ್ನೇಹಿತರಾದ ಅರುಣ್ ಮತ್ತು ಅನಿಲ್ ಎಂಬುವರು ಮದ್ಯಪಾನ ಮಾಡಲು ಮತ್ತು ಜೂಜಾಟಕ್ಕಾಗಿ ಪದೇ ಪದೇ ಇವರ ಮನೆಗೆ ಬರುತ್ತಿದ್ದರು. ಜೂಜಾಟದಲ್ಲಿ ಪತಿ ಸೋತಾಗ ಈ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿರು ವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಅತ್ಯಾಚಾರದ ಬಳಿಕ ಸಂತ್ರಸ್ತೆ ಸಂಬಂಧಿಕರ ಮನೆಗೆ ತೆರೆಳಿದ್ದರು. ಅಲ್ಲಿಗೆ ಹೋದ ಪತಿ ಕ್ಷಮೆ ಕೋರಿ ತನ್ನ ಕಾರಿನಲ್ಲಿ ಆಕೆಯನ್ನು ಕರೆದುಕೊಂಡು ಬಂದಿದ್ದಾನೆ. ಮಾರ್ಗ ಮಧ್ಯೆ ಮತ್ತೊಮ್ಮೆ ಸಾಮೂಹಿಕ ಅತ್ಯಾಚಾರ ನಡೆಸಲು ಸ್ನೇಹಿತರಿಗೆ ಅನುವು ಮಾಡಿಕೊಟ್ಟಿದ್ದಾನೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೌನ್ಪುರ, ಉತ್ತರ ಪ್ರದೇಶ:</strong> ಜೂಜಾಟ ಹಾಗೂ ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನೇ ಜೂಜಿಗಿಟ್ಟಿದ್ದಾನೆ. ಸೋತ ಬಳಿಕ ಆತನ ಸ್ನೇಹಿತರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.</p>.<p>ಉತ್ತರ ಪ್ರದೇಶದ ಜೌನ್ಪುರದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ ಕಾರಣ ಸಂತ್ರಸ್ತ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.</p>.<p>ಸಂತ್ರಸ್ತೆಯ ಪತಿಯ ಸ್ನೇಹಿತರಾದ ಅರುಣ್ ಮತ್ತು ಅನಿಲ್ ಎಂಬುವರು ಮದ್ಯಪಾನ ಮಾಡಲು ಮತ್ತು ಜೂಜಾಟಕ್ಕಾಗಿ ಪದೇ ಪದೇ ಇವರ ಮನೆಗೆ ಬರುತ್ತಿದ್ದರು. ಜೂಜಾಟದಲ್ಲಿ ಪತಿ ಸೋತಾಗ ಈ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ದೂರಿರು ವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಅತ್ಯಾಚಾರದ ಬಳಿಕ ಸಂತ್ರಸ್ತೆ ಸಂಬಂಧಿಕರ ಮನೆಗೆ ತೆರೆಳಿದ್ದರು. ಅಲ್ಲಿಗೆ ಹೋದ ಪತಿ ಕ್ಷಮೆ ಕೋರಿ ತನ್ನ ಕಾರಿನಲ್ಲಿ ಆಕೆಯನ್ನು ಕರೆದುಕೊಂಡು ಬಂದಿದ್ದಾನೆ. ಮಾರ್ಗ ಮಧ್ಯೆ ಮತ್ತೊಮ್ಮೆ ಸಾಮೂಹಿಕ ಅತ್ಯಾಚಾರ ನಡೆಸಲು ಸ್ನೇಹಿತರಿಗೆ ಅನುವು ಮಾಡಿಕೊಟ್ಟಿದ್ದಾನೆ ಎಂದೂ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>