<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯುವ ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದು, ಭಾರಿ ಜನದಟ್ಟಣೆ ಉಂಟಾಗಿದೆ.</p><p>ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಗಂಗಾನದಿ ಮತ್ತು ಬಂಗಾಳಕೊಲ್ಲಿಯ ಸಂಗಮ ಸ್ಥಾನದಲ್ಲಿ ಲಕ್ಷಾಂತರ ಭಕ್ತರು ಪ್ರವಿತ್ರ ಸ್ನಾನ ಮಾಡಿದರು.</p>.ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ.Sankranti 2026: ಸಂಕ್ರಾಂತಿ ಹಬ್ಬಕ್ಕೆ ಮಾಡುವ ಅಡುಗೆಯಲ್ಲಿದೆ ಆರೋಗ್ಯದ ರಹಸ್ಯ. <p>ಶಾಹಿ ಸ್ನಾನದ ಸಮಯ ಮಧ್ಯಾಹ್ನ ಶುರುವಾಗಲಿದೆ. ಆದರೆ ಈಗಾಗಲೇ ಲಕ್ಷಾಂತರ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p><p>ಪ್ರತಿ ವರ್ಷ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ಕೋಲ್ಕತ್ತದ ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೇಳಿದರು.</p>.ಪ್ರತಿನಿತ್ಯವೂ ಆತ್ಮವಿಶ್ವಾಸದಿಂದಿರಲು ಈ ಸೂತ್ರಗಳನ್ನು ಪಾಲಿಸಿ.ಗಲಭೆ ಪೀಡಿತ ಇರಾನ್ನಲ್ಲಿ ಸ್ಟಾರ್ಲಿಂಕ್ನಿಂದ ಉಚಿತ ಇಂಟರ್ನೆಟ್ ಸೇವೆ. <p>ಮೊದಲ ಬಾರಿಗೆ ರಕ್ಷಣಾ ಡ್ರೋನ್ಗಳನ್ನು ಕಣ್ಗಾವಲುಗಾಗಿ ನಿಯೋಜಿಸಲಾಗಿದೆ. ಈ ಡ್ರೋನ್ಗಳ ಸಹಾಯದಿಂದ ಕಪಿಲ ಮುನಿ ಆಶ್ರಮ ಮತ್ತು ಮುಖ್ಯ ಸ್ನಾನ ಘಟ್ಟಗಳ ಸುತ್ತಲೂ ಮೇಲ್ವಿಚಾರಣೆಯನ್ನು ನಡೆಸಲಾಗುತ್ತದೆ. ಈ ರಕ್ಷಣಾ ಡ್ರೋನ್ಗಳು 100 ಕೆ.ಜಿವರೆಗೆ ಭಾರವನ್ನು ಹೊತ್ತೊಯ್ಯುವ ಮತ್ತು ಸಂಕಷ್ಟದಲ್ಲಿರುವ ಯಾತ್ರಿಕರನ್ನು ತ್ವರಿತವಾಗಿ ಸ್ಥಳಾಂತರಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ದೇಶದ ವಿವಿಧ ರಾಜ್ಯಗಳಿಂದ ಜನರು ಈ ಮೇಳಕ್ಕೆ ಆಗಮಿಸಿದ್ದಾರೆ. ಕುಂಭಮೇಳದ ನಂತರ ಇದೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎನ್ನಲಾಗಿದೆ.</p>.ಕಾಶ್ಮೀರದ ಎಲ್ಒಸಿ ಉದ್ದಕ್ಕೂ ಪಾಕ್ ಡ್ರೋನ್ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ.ಮಕರ ಸಂಕ್ರಾಂತಿ ನಂತರ ಈ 5 ರಾಶಿಯವರಿಗೆ ದೈವಿಕ ಬಲ; ವಿವಾಹ ಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯುವ ಗಂಗಾಸಾಗರ ಮೇಳದಲ್ಲಿ ಲಕ್ಷಾಂತರ ಭಕ್ತರು ಭಾಗಿಯಾಗಿದ್ದು, ಭಾರಿ ಜನದಟ್ಟಣೆ ಉಂಟಾಗಿದೆ.</p><p>ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಮೇಳದಲ್ಲಿ ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಗಂಗಾನದಿ ಮತ್ತು ಬಂಗಾಳಕೊಲ್ಲಿಯ ಸಂಗಮ ಸ್ಥಾನದಲ್ಲಿ ಲಕ್ಷಾಂತರ ಭಕ್ತರು ಪ್ರವಿತ್ರ ಸ್ನಾನ ಮಾಡಿದರು.</p>.ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ.Sankranti 2026: ಸಂಕ್ರಾಂತಿ ಹಬ್ಬಕ್ಕೆ ಮಾಡುವ ಅಡುಗೆಯಲ್ಲಿದೆ ಆರೋಗ್ಯದ ರಹಸ್ಯ. <p>ಶಾಹಿ ಸ್ನಾನದ ಸಮಯ ಮಧ್ಯಾಹ್ನ ಶುರುವಾಗಲಿದೆ. ಆದರೆ ಈಗಾಗಲೇ ಲಕ್ಷಾಂತರ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ</p><p>ಪ್ರತಿ ವರ್ಷ ಈ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ಕೋಲ್ಕತ್ತದ ರೈಲ್ವೆ ನಿಲ್ದಾಣಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೇಳಿದರು.</p>.ಪ್ರತಿನಿತ್ಯವೂ ಆತ್ಮವಿಶ್ವಾಸದಿಂದಿರಲು ಈ ಸೂತ್ರಗಳನ್ನು ಪಾಲಿಸಿ.ಗಲಭೆ ಪೀಡಿತ ಇರಾನ್ನಲ್ಲಿ ಸ್ಟಾರ್ಲಿಂಕ್ನಿಂದ ಉಚಿತ ಇಂಟರ್ನೆಟ್ ಸೇವೆ. <p>ಮೊದಲ ಬಾರಿಗೆ ರಕ್ಷಣಾ ಡ್ರೋನ್ಗಳನ್ನು ಕಣ್ಗಾವಲುಗಾಗಿ ನಿಯೋಜಿಸಲಾಗಿದೆ. ಈ ಡ್ರೋನ್ಗಳ ಸಹಾಯದಿಂದ ಕಪಿಲ ಮುನಿ ಆಶ್ರಮ ಮತ್ತು ಮುಖ್ಯ ಸ್ನಾನ ಘಟ್ಟಗಳ ಸುತ್ತಲೂ ಮೇಲ್ವಿಚಾರಣೆಯನ್ನು ನಡೆಸಲಾಗುತ್ತದೆ. ಈ ರಕ್ಷಣಾ ಡ್ರೋನ್ಗಳು 100 ಕೆ.ಜಿವರೆಗೆ ಭಾರವನ್ನು ಹೊತ್ತೊಯ್ಯುವ ಮತ್ತು ಸಂಕಷ್ಟದಲ್ಲಿರುವ ಯಾತ್ರಿಕರನ್ನು ತ್ವರಿತವಾಗಿ ಸ್ಥಳಾಂತರಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ದೇಶದ ವಿವಿಧ ರಾಜ್ಯಗಳಿಂದ ಜನರು ಈ ಮೇಳಕ್ಕೆ ಆಗಮಿಸಿದ್ದಾರೆ. ಕುಂಭಮೇಳದ ನಂತರ ಇದೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಎನ್ನಲಾಗಿದೆ.</p>.ಕಾಶ್ಮೀರದ ಎಲ್ಒಸಿ ಉದ್ದಕ್ಕೂ ಪಾಕ್ ಡ್ರೋನ್ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ.ಮಕರ ಸಂಕ್ರಾಂತಿ ನಂತರ ಈ 5 ರಾಶಿಯವರಿಗೆ ದೈವಿಕ ಬಲ; ವಿವಾಹ ಯೋಗ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>