<p><strong>ಹರಿದ್ವಾರ(ಉತ್ತರಾಖಂಡ):</strong> ಹರಿದ್ವಾರದ ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ. ಸ್ನಾನಕ್ಕೆ ಸೂಕ್ತ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ(ಯುಕೆಪಿಸಿಬಿ) ಹೇಳಿದೆ.</p><p>ಉತ್ತರ ಪ್ರದೇಶ ಗಡಿಯಲ್ಲಿ ಬರುವ ಗಂಗಾ ನದಿಯಲ್ಲಿ ಪ್ರತಿ ವರ್ಷ 8 ಕಡೆ ನೀರನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತದೆ. </p><p> ಇತ್ತೀಚಿನ ನವೆಂಬರ್ ತಿಂಗಳ ಪರೀಕ್ಷೆಯಲ್ಲಿ ಗಂಗಾ ನದಿಯ ನೀರು 'ಬಿ' ಕೆಟಗರಿ ಎಂದು ಕಂಡುಬಂದಿದೆ. ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ. 'ಎ' ಕೆಟಗರಿ ಕನಿಷ್ಠ ವಿಷಕಾರಿಯಾಗಿದೆ. ಅಂದರೆ ನೀರನ್ನು ಸೋಂಕುನಿವಾರಣೆಗೊಳಿಸಿದ ನಂತರ ಕುಡಿಯಲು ಬಳಸಬಹುದು. 'ಇ' ಕೆಟಗರಿ ಅತ್ಯಂತ ವಿಷಕಾರಿಯಾಗಿದೆ.</p><p>ಎಎನ್ಐ ಜೊತೆ ಮಾತನಾಡಿರುವ ಯುಕೆಪಿಸಿಬಿಯ ಪ್ರಾದೇಶಿಕ ಅಧಿಕಾರಿ ರಾಜೇಂದ್ರ ಸಿಂಗ್, ‘ನಾಲ್ಕು ನಿಯತಾಂಕಗಳ (ಪಿಹೆಚ್, ಕರಗಿದ ಆಮ್ಲಜನಕ, ಜೈವಿಕ ಆಮ್ಲಜನಕ ಮತ್ತು ಒಟ್ಟು ಕೋಲಿಫಾರ್ಮ್ ಬ್ಯಾಕ್ಟೀರಿಯಾ) ಆಧಾರದ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರಿನ ಗುಣಮಟ್ಟವನ್ನು 5 ವರ್ಗಗಳಾಗಿ ವಿಂಗಡಿಸಿದೆ. ಈ ಮೂಲಕ ಗಂಗೆಯ ಗುಣಮಟ್ಟವು 'ಬಿ' ವರ್ಗದಲ್ಲಿದ್ದು, ಈ ನೀರು ಸ್ನಾನಕ್ಕೆ ಸೂಕ್ತವಾಗಿದೆ.</p><p>ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯ ಅರ್ಚಕ ಉಜ್ಡಲ್ ಪಂಡಿತ್ ಸಹ ಕಳವಳ ವ್ಯಕ್ತಪಡಿಸಿದ್ದಾರೆ. ಮಾನವರ ತ್ಯಾಜ್ಯದಿಂದ ಗಂಗೆ ಮಲಿನಗೊಳ್ಳುತ್ತಿದ್ದಾಳೆ ಎಂದಿದ್ದಾರೆ.</p><p>‘ಕೇವಲ ಗಂಗಾಜಲದಿಂದ ಸ್ನಾನ ಮಾಡುವುದರಿಂದ ನಮ್ಮ ದೇಹದ ರೋಗಗಳು ವಾಸಿಯಾಗುತ್ತದೆ. ಅದರಿಂದ ಕ್ಯಾನ್ಸರ್ನಂತಹ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಈಗ ಗಂಗಾಜಲ ಅಶುದ್ಧವಾಗಿರುವುದಕ್ಕೆ ಮಾನವ ತ್ಯಾಜ್ಯದಿಂದ ಆಗಿದ್ದು, ಅದನ್ನು ನಾವು ಬದಲಾಯಿಸಬೇಕಾಗಿದೆ’ಎಂದು ಅವರು ಹೇಳಿದ್ದಾರೆ.</p><p>ದೇಶದ ನದಿಗಳ ಪೈಕಿ ವಿಶೇಷವಾಗಿ ದೆಹಲಿಯ ಯಮುನಾ ನದಿಯಲ್ಲಿ ಮಾಲಿನ್ಯವು ಕಳೆದ ಕೆಲವು ವರ್ಷಗಳಿಂದ ಗಂಭೀರ ಆತಂಕಕ್ಕೆ ಕಾರಣವಾಗಿದೆ.</p><p>ಡಿಸೆಂಬರ್ 1ರಂದು, ಯಮುನಾ ನದಿಯ ಮೇಲ್ಮೈಯಲ್ಲಿ ವಿಷಕಾರಿ ನೊರೆಯಂತಹ ದಟ್ಟವಾದ ಪದರವು ತೇಲುತ್ತಿರುವುದು ಕಂಡುಬಂದಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿದ್ವಾರ(ಉತ್ತರಾಖಂಡ):</strong> ಹರಿದ್ವಾರದ ಗಂಗಾನದಿಯ ನೀರು ಕುಡಿಯಲು ಯೋಗ್ಯವಲ್ಲ. ಸ್ನಾನಕ್ಕೆ ಸೂಕ್ತ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ(ಯುಕೆಪಿಸಿಬಿ) ಹೇಳಿದೆ.</p><p>ಉತ್ತರ ಪ್ರದೇಶ ಗಡಿಯಲ್ಲಿ ಬರುವ ಗಂಗಾ ನದಿಯಲ್ಲಿ ಪ್ರತಿ ವರ್ಷ 8 ಕಡೆ ನೀರನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತದೆ. </p><p> ಇತ್ತೀಚಿನ ನವೆಂಬರ್ ತಿಂಗಳ ಪರೀಕ್ಷೆಯಲ್ಲಿ ಗಂಗಾ ನದಿಯ ನೀರು 'ಬಿ' ಕೆಟಗರಿ ಎಂದು ಕಂಡುಬಂದಿದೆ. ನದಿಯ ನೀರನ್ನು ಐದು ವರ್ಗಗಳಾಗಿ ವಿಂಗಡಿಸಲಾಗಿದೆ. 'ಎ' ಕೆಟಗರಿ ಕನಿಷ್ಠ ವಿಷಕಾರಿಯಾಗಿದೆ. ಅಂದರೆ ನೀರನ್ನು ಸೋಂಕುನಿವಾರಣೆಗೊಳಿಸಿದ ನಂತರ ಕುಡಿಯಲು ಬಳಸಬಹುದು. 'ಇ' ಕೆಟಗರಿ ಅತ್ಯಂತ ವಿಷಕಾರಿಯಾಗಿದೆ.</p><p>ಎಎನ್ಐ ಜೊತೆ ಮಾತನಾಡಿರುವ ಯುಕೆಪಿಸಿಬಿಯ ಪ್ರಾದೇಶಿಕ ಅಧಿಕಾರಿ ರಾಜೇಂದ್ರ ಸಿಂಗ್, ‘ನಾಲ್ಕು ನಿಯತಾಂಕಗಳ (ಪಿಹೆಚ್, ಕರಗಿದ ಆಮ್ಲಜನಕ, ಜೈವಿಕ ಆಮ್ಲಜನಕ ಮತ್ತು ಒಟ್ಟು ಕೋಲಿಫಾರ್ಮ್ ಬ್ಯಾಕ್ಟೀರಿಯಾ) ಆಧಾರದ ಮೇಲೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರಿನ ಗುಣಮಟ್ಟವನ್ನು 5 ವರ್ಗಗಳಾಗಿ ವಿಂಗಡಿಸಿದೆ. ಈ ಮೂಲಕ ಗಂಗೆಯ ಗುಣಮಟ್ಟವು 'ಬಿ' ವರ್ಗದಲ್ಲಿದ್ದು, ಈ ನೀರು ಸ್ನಾನಕ್ಕೆ ಸೂಕ್ತವಾಗಿದೆ.</p><p>ಮಾಲಿನ್ಯ ಹೆಚ್ಚಾಗುತ್ತಿರುವ ಬಗ್ಗೆ ಸ್ಥಳೀಯ ಅರ್ಚಕ ಉಜ್ಡಲ್ ಪಂಡಿತ್ ಸಹ ಕಳವಳ ವ್ಯಕ್ತಪಡಿಸಿದ್ದಾರೆ. ಮಾನವರ ತ್ಯಾಜ್ಯದಿಂದ ಗಂಗೆ ಮಲಿನಗೊಳ್ಳುತ್ತಿದ್ದಾಳೆ ಎಂದಿದ್ದಾರೆ.</p><p>‘ಕೇವಲ ಗಂಗಾಜಲದಿಂದ ಸ್ನಾನ ಮಾಡುವುದರಿಂದ ನಮ್ಮ ದೇಹದ ರೋಗಗಳು ವಾಸಿಯಾಗುತ್ತದೆ. ಅದರಿಂದ ಕ್ಯಾನ್ಸರ್ನಂತಹ ರೋಗಗಳು ವಾಸಿಯಾಗುತ್ತವೆ ಎಂಬ ನಂಬಿಕೆ ಇದೆ. ಈಗ ಗಂಗಾಜಲ ಅಶುದ್ಧವಾಗಿರುವುದಕ್ಕೆ ಮಾನವ ತ್ಯಾಜ್ಯದಿಂದ ಆಗಿದ್ದು, ಅದನ್ನು ನಾವು ಬದಲಾಯಿಸಬೇಕಾಗಿದೆ’ಎಂದು ಅವರು ಹೇಳಿದ್ದಾರೆ.</p><p>ದೇಶದ ನದಿಗಳ ಪೈಕಿ ವಿಶೇಷವಾಗಿ ದೆಹಲಿಯ ಯಮುನಾ ನದಿಯಲ್ಲಿ ಮಾಲಿನ್ಯವು ಕಳೆದ ಕೆಲವು ವರ್ಷಗಳಿಂದ ಗಂಭೀರ ಆತಂಕಕ್ಕೆ ಕಾರಣವಾಗಿದೆ.</p><p>ಡಿಸೆಂಬರ್ 1ರಂದು, ಯಮುನಾ ನದಿಯ ಮೇಲ್ಮೈಯಲ್ಲಿ ವಿಷಕಾರಿ ನೊರೆಯಂತಹ ದಟ್ಟವಾದ ಪದರವು ತೇಲುತ್ತಿರುವುದು ಕಂಡುಬಂದಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>