<p><strong>ನವದೆಹಲಿ:</strong> ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಪಾತಕಿ ಜೋಗಿಂದರ್ ಗ್ಯೋಂಗ್ನನ್ನು ಫಿಲಿಪ್ಪೀನ್ಸ್ನಿಂದ ಕರೆತರಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜೋಗಿಂದರ್ನನ್ನು ಸದ್ಯ ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ. ಈತನ ವಿರುದ್ಧ ದರೋಡೆ, ಕೊಲೆ ಯತ್ನ, ಸುಲಿಗೆಗಾಗಿ ಅಪಹರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಜೋಗಿಂದರ್ನನ್ನು ಭಾರತಕ್ಕೆ ವಾಪಸು ಕರೆತರಲು ಕಳೆದ ವರ್ಷ ಅಕ್ಟೋಬರ್ 25ರಂದು ‘ರೆಡ್ ಕಾರ್ನರ್’ ನೋಟಿಸ್ ಹೊರಡಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಫಿಲಿಪ್ಪೀನ್ಸ್ನ ‘ವಲಸೆ ಅಧಿಕಾರಿ’ಗಳು ಈತನನ್ನು ಬಂಧಿಸಿ, ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ’ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈತ ಕ್ರಿಮಿನಲ್ ಸಂಚು ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರಿಯಾಣ ಹಾಗೂ ದೆಹಲಿ ಪೊಲೀಸರಿಗೆ ಬೇಕಾಗಿದ್ದ.</p>.<p>ಶಸ್ತ್ರಾಸ್ತ್ರಗಳ ಅಕ್ರಮ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜೋಗಿಂದರ್, 2017ರ ಡಿಸೆಂಬರ್ನಲ್ಲಿ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ವೇಳೆ ಕೊಲೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಿವಿಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಪಾತಕಿ ಜೋಗಿಂದರ್ ಗ್ಯೋಂಗ್ನನ್ನು ಫಿಲಿಪ್ಪೀನ್ಸ್ನಿಂದ ಕರೆತರಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜೋಗಿಂದರ್ನನ್ನು ಸದ್ಯ ದೆಹಲಿ ಪೊಲೀಸರ ವಶಕ್ಕೆ ನೀಡಲಾಗಿದೆ. ಈತನ ವಿರುದ್ಧ ದರೋಡೆ, ಕೊಲೆ ಯತ್ನ, ಸುಲಿಗೆಗಾಗಿ ಅಪಹರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಸಿಬಿಐ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಜೋಗಿಂದರ್ನನ್ನು ಭಾರತಕ್ಕೆ ವಾಪಸು ಕರೆತರಲು ಕಳೆದ ವರ್ಷ ಅಕ್ಟೋಬರ್ 25ರಂದು ‘ರೆಡ್ ಕಾರ್ನರ್’ ನೋಟಿಸ್ ಹೊರಡಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿದ ಫಿಲಿಪ್ಪೀನ್ಸ್ನ ‘ವಲಸೆ ಅಧಿಕಾರಿ’ಗಳು ಈತನನ್ನು ಬಂಧಿಸಿ, ಭಾರತಕ್ಕೆ ಹಸ್ತಾಂತರ ಮಾಡಿದ್ದಾರೆ’ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈತ ಕ್ರಿಮಿನಲ್ ಸಂಚು ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರಿಯಾಣ ಹಾಗೂ ದೆಹಲಿ ಪೊಲೀಸರಿಗೆ ಬೇಕಾಗಿದ್ದ.</p>.<p>ಶಸ್ತ್ರಾಸ್ತ್ರಗಳ ಅಕ್ರಮ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಜೋಗಿಂದರ್, 2017ರ ಡಿಸೆಂಬರ್ನಲ್ಲಿ ಪೆರೋಲ್ ಮೇಲೆ ಜೈಲಿನಿಂದ ಹೊರಬಂದಿದ್ದ ವೇಳೆ ಕೊಲೆ ಮಾಡಿ ವಿದೇಶಕ್ಕೆ ಪರಾರಿಯಾಗಿದ್ದ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>