<p><strong>ಲಖನೌ:</strong> ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿರುವ ಖಾಸಗಿ ಪೆಟ್ರೋಲ್ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು 6 ಮಂದಿ ಸಾವಿಗೀಡಾಗಿದ್ದಾರೆ.8 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.<br />ಈ ಘಟನೆಯಲ್ಲಿ ಮೂರು ಮಂದಿ ನಾಪತ್ತೆಯಾಗಿದ್ದಾರೆ.<br /><br />ಇಲ್ಲಿನ ಕೋತ್ವಾಲಿ ನಗರದ ನಗೀನಾ ರಸ್ತೆಯಲ್ಲಿರುವ ಮೋಹಿತ್ ಪೆಟ್ರೋ ಕೆಮಿಕಲ್ ಕಾರ್ಖಾನೆಯಲ್ಲಿ ಕಾರ್ಮಿಕರು ಮಿಥೇನ್ ಗ್ಯಾಸ್ ಟ್ಯಾಂಕ್ ದುರಸ್ತಿ ಮಾಡಿಕೊಳ್ಳುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ.<br /></p>.<p>6 ಮಂದಿ ಕಾರ್ಮಿಕರು ಘಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮೃತ ಕಾರ್ಮಿಕರನ್ನು ಕಮಲ್ವೀರ್, ಲೋಕೇಂದ್ರ, ರವಿ, ಚೆತ್ರಾಮ್, ವಿಕ್ರಾಂತ್ ಮತ್ತು ಬಲ್ ಗೋವಿಂದ್ ಎಂದು ಗುರುತಿಸಲಾಗಿದೆ,.</p>.<p>ಕಪಿಲ್, ಪರ್ವೇಜ್ ಮತ್ತು ಅಭಯ್ ರಾಮ್ ಎಂಬವರು ನಾಪತ್ತೆಯಾಗಿದ್ದಾರೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಕಾರ್ಮಿಕರ ಮೃತದೇಹ ಮೀಟರ್ನಷ್ಟು ದೂರ ಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.<br />ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿರುವ ಖಾಸಗಿ ಪೆಟ್ರೋಲ್ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು 6 ಮಂದಿ ಸಾವಿಗೀಡಾಗಿದ್ದಾರೆ.8 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.<br />ಈ ಘಟನೆಯಲ್ಲಿ ಮೂರು ಮಂದಿ ನಾಪತ್ತೆಯಾಗಿದ್ದಾರೆ.<br /><br />ಇಲ್ಲಿನ ಕೋತ್ವಾಲಿ ನಗರದ ನಗೀನಾ ರಸ್ತೆಯಲ್ಲಿರುವ ಮೋಹಿತ್ ಪೆಟ್ರೋ ಕೆಮಿಕಲ್ ಕಾರ್ಖಾನೆಯಲ್ಲಿ ಕಾರ್ಮಿಕರು ಮಿಥೇನ್ ಗ್ಯಾಸ್ ಟ್ಯಾಂಕ್ ದುರಸ್ತಿ ಮಾಡಿಕೊಳ್ಳುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ.<br /></p>.<p>6 ಮಂದಿ ಕಾರ್ಮಿಕರು ಘಟನಾ ಸ್ಥಳದಲ್ಲಿ ಮೃತಪಟ್ಟಿದ್ದಾರೆ, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಮೃತ ಕಾರ್ಮಿಕರನ್ನು ಕಮಲ್ವೀರ್, ಲೋಕೇಂದ್ರ, ರವಿ, ಚೆತ್ರಾಮ್, ವಿಕ್ರಾಂತ್ ಮತ್ತು ಬಲ್ ಗೋವಿಂದ್ ಎಂದು ಗುರುತಿಸಲಾಗಿದೆ,.</p>.<p>ಕಪಿಲ್, ಪರ್ವೇಜ್ ಮತ್ತು ಅಭಯ್ ರಾಮ್ ಎಂಬವರು ನಾಪತ್ತೆಯಾಗಿದ್ದಾರೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಕಾರ್ಮಿಕರ ಮೃತದೇಹ ಮೀಟರ್ನಷ್ಟು ದೂರ ಬಿದ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.<br />ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಘಟನಾ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>