<p><strong>ನವದೆಹಲಿ (ಪಿಟಿಐ): </strong>ಇದೇ 5ರಂದು ನಿಗದಿಯಾಗಿರುವ ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆಯನ್ನು (ಗೇಟ್) ಮುಂದೂಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p>.<p>ಕೋವಿಡ್ ಪಿಡುಗಿನ ಸಂಬಂಧ ದೇಶದ ವಿವಿಧೆಡೆ ನಿರ್ಬಂಧ ಜಾರಿಯಲ್ಲಿರುವ ಕಾರಣ ಪರೀಕ್ಷೆಯನ್ನು ಮುಂದೂಡುವಂತೆ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯ<br />ಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರ ಪೀಠ ವಿಚಾರಣೆ ನಡೆಸಿತು.</p>.<p>ಪರೀಕ್ಷೆಗೆ 48 ಗಂಟೆಗಳ ಮೊದಲು ಅದನ್ನು ಮುಂದೂಡುವುದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣ<br />ವಾಗುತ್ತದೆ. ಪರೀಕ್ಷೆಗಾಗಿ ತಯಾರಿ ನಡೆಸಿರುವ ವಿದ್ಯಾರ್ಥಿಗಳ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬುದು ಶೈಕ್ಷಣಿಕ ನೀತಿಯ ವಿಷಯವಾಗಿದ್ದು, ನ್ಯಾಯಾಲಯ ಅದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿತು.</p>.<p>ಪರೀಕ್ಷೆಗೆ 9 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 20,000 ವಿದ್ಯಾರ್ಥಿಗಳು ಪರೀಕ್ಷೆ<br />ಯನ್ನು ಮುಂದೂಡುವಂತೆ ಆನ್ಲೈನ್ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಇದೇ 5ರಂದು ನಿಗದಿಯಾಗಿರುವ ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆಯನ್ನು (ಗೇಟ್) ಮುಂದೂಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.</p>.<p>ಕೋವಿಡ್ ಪಿಡುಗಿನ ಸಂಬಂಧ ದೇಶದ ವಿವಿಧೆಡೆ ನಿರ್ಬಂಧ ಜಾರಿಯಲ್ಲಿರುವ ಕಾರಣ ಪರೀಕ್ಷೆಯನ್ನು ಮುಂದೂಡುವಂತೆ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯ<br />ಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಸೂರ್ಯ ಕಾಂತ್ ಮತ್ತು ವಿಕ್ರಮ್ ನಾಥ್ ಅವರ ಪೀಠ ವಿಚಾರಣೆ ನಡೆಸಿತು.</p>.<p>ಪರೀಕ್ಷೆಗೆ 48 ಗಂಟೆಗಳ ಮೊದಲು ಅದನ್ನು ಮುಂದೂಡುವುದು ಅವ್ಯವಸ್ಥೆ ಮತ್ತು ಅನಿಶ್ಚಿತತೆಗೆ ಕಾರಣ<br />ವಾಗುತ್ತದೆ. ಪರೀಕ್ಷೆಗಾಗಿ ತಯಾರಿ ನಡೆಸಿರುವ ವಿದ್ಯಾರ್ಥಿಗಳ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<p>ಪರೀಕ್ಷೆಯನ್ನು ಯಾವಾಗ ನಡೆಸಬೇಕು ಎಂಬುದು ಶೈಕ್ಷಣಿಕ ನೀತಿಯ ವಿಷಯವಾಗಿದ್ದು, ನ್ಯಾಯಾಲಯ ಅದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿತು.</p>.<p>ಪರೀಕ್ಷೆಗೆ 9 ಲಕ್ಷ ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಇದರಲ್ಲಿ 20,000 ವಿದ್ಯಾರ್ಥಿಗಳು ಪರೀಕ್ಷೆ<br />ಯನ್ನು ಮುಂದೂಡುವಂತೆ ಆನ್ಲೈನ್ ಮೂಲಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>