<p><strong>ನವದೆಹಲಿ: </strong>ದೆಹಲಿ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಮೇಲೆ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಗ್ರಂಥಾಲಯ ಕಟ್ಟಿಸಿರುವ ಆರೋಪ ಕೇಳಿ ಬಂದಿದೆ.</p>.<p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 13 ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ನಲ್ಲಿ ಸೂಚಿಸಲಾಗಿದೆ.</p>.<p><strong>ಗಂಭೀರ್ ಮೇಲೆ ಇರುವ ಆರೋಪ ಏನು?</strong><br />ದೆಹಲಿಯ ಕಾರ್ಕಾರ್ದೂಮ ಬಳಿ ಇರುವ, ದೆಹಲಿ ಪಾಲಿಕೆಗೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಗ್ರಂಥಾಲಯ ನಿರ್ಮಾಣ ಮಾಡಿರುವ ಆರೋಪ ಗೌತಮ್ ಗಂಭೀರ್ ಅವರ ಮೇಲಿದೆ.</p>.<p>ಈ ಜಾಗವು ಕಸ ವಿಲೇವಾರಿಗೆಂದು ಮೀಸಲಿಟ್ಟಿದ್ದ ಸ್ಥಳವಾಗಿದ್ದು, ದೆಹಲಿ ಪಾಲಿಕೆಯ ಹಿರಿಯ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಗೌತಮ್ ಗಂಭೀರ್ ಅವರು ಸ್ಥಳವನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಬಳಿಕ ಬಲವಂತದಿಂದ ಅಲ್ಲಿ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ ಎನ್ನಲಾಗಿದೆ.</p>.<p>ಸುಮಾರು 300 ಎಕರೆಯಷ್ಟು ಭೂಮಿಯನ್ನು ಗಂಭೀರ್ ಸ್ವಾಧೀನ ಪಡಿಸಿಕೊಂಡಿದ್ದು. ಇದರ ಮೌಲ್ಯ ನೂರಾರು ಕೋಟಿ ಎಂದು ಅಂದಾಜಿಸಲಾಗಿದೆ.</p>.<p><strong>ಅರ್ಜಿದಾರರ ಬೇಡಿಕೆ ಏನು?</strong><br />ಗೌತಮ್ ಗಂಭೀರ್ ಅವರು ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಕೊಂಡಿರುವ ಸ್ಥಳವನ್ನು ಯಾವುದೇ ಕಾರಣಕ್ಕೂ ಅವರಿಗೆ ಬಳಕೆ ಮಾಡಲು ಅವಕಾಶ ನೀಡಕೂಡದು. ಗಂಭೀರ್ ಅವರ ಈ ಕೃತ್ಯವನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.</p>.<p>ಅರ್ಜಿದಾರರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು, ದೂರಿನ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಗೌತಮ್ ಗಂಭೀರ್ ಹಾಗೂ ದೆಹಲಿ ಪಾಲಿಕೆಗೆ ಸಮನ್ಸ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೆಹಲಿ ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರ ಮೇಲೆ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಗ್ರಂಥಾಲಯ ಕಟ್ಟಿಸಿರುವ ಆರೋಪ ಕೇಳಿ ಬಂದಿದೆ.</p>.<p>ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಬೇಕು ಎಂದು ದೆಹಲಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 13 ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ನಲ್ಲಿ ಸೂಚಿಸಲಾಗಿದೆ.</p>.<p><strong>ಗಂಭೀರ್ ಮೇಲೆ ಇರುವ ಆರೋಪ ಏನು?</strong><br />ದೆಹಲಿಯ ಕಾರ್ಕಾರ್ದೂಮ ಬಳಿ ಇರುವ, ದೆಹಲಿ ಪಾಲಿಕೆಗೆ ಸೇರಿರುವ ಜಾಗದಲ್ಲಿ ಅಕ್ರಮವಾಗಿ ಗ್ರಂಥಾಲಯ ನಿರ್ಮಾಣ ಮಾಡಿರುವ ಆರೋಪ ಗೌತಮ್ ಗಂಭೀರ್ ಅವರ ಮೇಲಿದೆ.</p>.<p>ಈ ಜಾಗವು ಕಸ ವಿಲೇವಾರಿಗೆಂದು ಮೀಸಲಿಟ್ಟಿದ್ದ ಸ್ಥಳವಾಗಿದ್ದು, ದೆಹಲಿ ಪಾಲಿಕೆಯ ಹಿರಿಯ ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಗೌತಮ್ ಗಂಭೀರ್ ಅವರು ಸ್ಥಳವನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ. ಬಳಿಕ ಬಲವಂತದಿಂದ ಅಲ್ಲಿ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ ಎನ್ನಲಾಗಿದೆ.</p>.<p>ಸುಮಾರು 300 ಎಕರೆಯಷ್ಟು ಭೂಮಿಯನ್ನು ಗಂಭೀರ್ ಸ್ವಾಧೀನ ಪಡಿಸಿಕೊಂಡಿದ್ದು. ಇದರ ಮೌಲ್ಯ ನೂರಾರು ಕೋಟಿ ಎಂದು ಅಂದಾಜಿಸಲಾಗಿದೆ.</p>.<p><strong>ಅರ್ಜಿದಾರರ ಬೇಡಿಕೆ ಏನು?</strong><br />ಗೌತಮ್ ಗಂಭೀರ್ ಅವರು ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಕೊಂಡಿರುವ ಸ್ಥಳವನ್ನು ಯಾವುದೇ ಕಾರಣಕ್ಕೂ ಅವರಿಗೆ ಬಳಕೆ ಮಾಡಲು ಅವಕಾಶ ನೀಡಕೂಡದು. ಗಂಭೀರ್ ಅವರ ಈ ಕೃತ್ಯವನ್ನು ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.</p>.<p>ಅರ್ಜಿದಾರರ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು, ದೂರಿನ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಗೌತಮ್ ಗಂಭೀರ್ ಹಾಗೂ ದೆಹಲಿ ಪಾಲಿಕೆಗೆ ಸಮನ್ಸ್ ಜಾರಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>