<p><strong>ಶ್ರೀನಗರ: </strong>ಕಾಶ್ಮೀರ ಜನತೆ ಶುಕ್ರವಾರ ಮುಷ್ಕರ ನಡೆಸಬೇಕು ಎಂದು ನೀಡಿದ್ದ ಕರೆಗೆ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಅಲಿ ಗಿಲಾನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಇದರಿಂದ, ಅಬ್ದುಲ್ಲಾ ಗಿಲಾನಿ ನೇತೃತ್ವದ ಪಾಕಿಸ್ತಾನ ಮೂಲದ ಹುರಿಯತ್ ಸಂಘಟನೆಗೆ ಮುಜುಗರವಾಗಿದೆ. ಈ ಮುಷ್ಕರಕ್ಕೂ ತಮಗೂ ಸಂಬಂಧ ಇಲ್ಲ ಎಂದು ಸಯ್ಯದ್ ಅಲಿ ಗಿಲಾನಿ ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಎನ್ಕೌಂಟರ್ಗಳಲ್ಲಿ ನಡೆದ ಹತ್ಯೆಯನ್ನು ಖಂಡಿಸಿ ಶುಕ್ರವಾರ ಮುಷ್ಕರಕ್ಕೆ ಕರೆ ನೀಡಲಾಗಿತ್ತು.</p>.<p>ಮುಷ್ಕರಕ್ಕೆ ಸಂಬಂಧಿಸಿದಂತೆ ಗಿಲಾನಿ ಅವರ ಹೆಸರಿನಲ್ಲಿ ಬರೆದಿರುವ ಪತ್ರವು ನಕಲಿಯಾಗಿದೆ. ಅಂತಹ ಯಾವುದೇ ಪತ್ರ ಬರೆದಿಲ್ಲ ಎಂದು ಗಿಲಾನಿ ಕುಟುಂಬ ತಿಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>‘ಮುಷ್ಕರದ ಬಗ್ಗೆ ಗಿಲಾನಿ ಅವರು ಯಾವುದೇ ಟ್ವೀಟ್ ಸಹ ಮಾಡಿಲ್ಲ. ಈ ಬಗ್ಗೆ ಅವರ ಕುಟುಂಬದ ಸದಸ್ಯರ ಜತೆ ಮಾತನಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಳೆದ ವರ್ಷ ಜೂನ್ನಲ್ಲಿ ಹುರಿಯತ್ ಕಾನ್ಫೆರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಗಿಲಾನಿ ಅವರು ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಕಾಶ್ಮೀರ ಜನತೆ ಶುಕ್ರವಾರ ಮುಷ್ಕರ ನಡೆಸಬೇಕು ಎಂದು ನೀಡಿದ್ದ ಕರೆಗೆ ಪ್ರತ್ಯೇಕತಾವಾದಿ ನಾಯಕ ಸಯ್ಯದ್ ಅಲಿ ಗಿಲಾನಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಇದರಿಂದ, ಅಬ್ದುಲ್ಲಾ ಗಿಲಾನಿ ನೇತೃತ್ವದ ಪಾಕಿಸ್ತಾನ ಮೂಲದ ಹುರಿಯತ್ ಸಂಘಟನೆಗೆ ಮುಜುಗರವಾಗಿದೆ. ಈ ಮುಷ್ಕರಕ್ಕೂ ತಮಗೂ ಸಂಬಂಧ ಇಲ್ಲ ಎಂದು ಸಯ್ಯದ್ ಅಲಿ ಗಿಲಾನಿ ತಿಳಿಸಿದ್ದಾರೆ.</p>.<p>ಇತ್ತೀಚೆಗೆ ಎನ್ಕೌಂಟರ್ಗಳಲ್ಲಿ ನಡೆದ ಹತ್ಯೆಯನ್ನು ಖಂಡಿಸಿ ಶುಕ್ರವಾರ ಮುಷ್ಕರಕ್ಕೆ ಕರೆ ನೀಡಲಾಗಿತ್ತು.</p>.<p>ಮುಷ್ಕರಕ್ಕೆ ಸಂಬಂಧಿಸಿದಂತೆ ಗಿಲಾನಿ ಅವರ ಹೆಸರಿನಲ್ಲಿ ಬರೆದಿರುವ ಪತ್ರವು ನಕಲಿಯಾಗಿದೆ. ಅಂತಹ ಯಾವುದೇ ಪತ್ರ ಬರೆದಿಲ್ಲ ಎಂದು ಗಿಲಾನಿ ಕುಟುಂಬ ತಿಳಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.</p>.<p>‘ಮುಷ್ಕರದ ಬಗ್ಗೆ ಗಿಲಾನಿ ಅವರು ಯಾವುದೇ ಟ್ವೀಟ್ ಸಹ ಮಾಡಿಲ್ಲ. ಈ ಬಗ್ಗೆ ಅವರ ಕುಟುಂಬದ ಸದಸ್ಯರ ಜತೆ ಮಾತನಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಳೆದ ವರ್ಷ ಜೂನ್ನಲ್ಲಿ ಹುರಿಯತ್ ಕಾನ್ಫೆರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಗಿಲಾನಿ ಅವರು ರಾಜೀನಾಮೆ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>