<p><strong>ಜೈಪುರ</strong>: ರಾಹುಲ್ ಗಾಂಧಿಗೆ ಗುಂಡಿಕ್ಕಲಾಗುವುದು ಎಂಬ ಬಿಜೆಪಿ ವಕ್ತಾರರೊಬ್ಬರ ಬೆದರಿಕೆಯನ್ನು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸೋಮವಾರ ಖಂಡಿಸಿದ್ದಾರೆ. ಇದು ಆಡಳಿತ ಪಕ್ಷದ ಮನಸ್ಥಿತಿಯ ಅಪಾಯಕಾರಿ ಪ್ರತಿಬಿಂಬವಾಗಿದೆ ಎಂದಿದ್ದಾರೆ.</p><p>‘ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಗುಂಡಿಕ್ಕಿ ಕೊಂದಿರುವುದನ್ನು ದೇಶ ಕಂಡಿದೆ. ಅವರು ರಾಷ್ಟ್ರವನ್ನು ಒಗ್ಗಟ್ಟಿನಲ್ಲಿಡಲು ಬದ್ಧರಾಗಿದ್ದರು. ಈಗ ಬಿಜೆಪಿ ವಕ್ತಾರರು ರಾಹುಲ್ ಗಾಂಧಿಯವರ ಎದೆಗೆ ಗುಂಡು ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ’ಎಂದು ಗೆಹಲೋತ್ ವಿಡಿಯೊ ಸಂದೇಶದಲ್ಲಿ ಖಂಡಿಸಿದ್ದಾರೆ.</p><p>ಈ ವಿಷಯದ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೌನದ ಬಗ್ಗೆ ಗೆಹಲೋತ್ ಕಳವಳ ವ್ಯಕ್ತಪಡಿಸಿದ್ದಾರೆ.</p><p>‘ಟಿವಿ ಕಾರ್ಯಕ್ರಮವೊಂದರ ಚರ್ಚೆಯಲ್ಲಿ ವಕ್ತಾರರು ಬಹಿರಂಗವಾಗಿ ಇಂತಹ ಹೇಳಿಕೆ ನೀಡಿದ್ದು, ಪಕ್ಷದ ಅಧ್ಯಕ್ಷರು ಈ ಬಗ್ಗೆ ಪ್ರತಿಕ್ರಿಯಿಸದಿದ್ದರೆ, ಅದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ದೇಶವು ಈ ಬಗ್ಗೆ ಚಿಂತಿಸಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.</p><p>ಕೇರಳದ ಎಬಿವಿಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಪ್ರಿಂಟು ಮಹಾದೇವ್ ಅವರು, ಮಲಯಾಳಂ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲಿ, ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಕ್ಕಲಾಗುತ್ತದೆ ಎಂದಿದ್ದರು.</p><p>ಇದೇವೇಳೆ, ರಾಹುಲ್ ಗಾಂಧಿಯವರ ಸಾರ್ವಜನಿಕ ಪ್ರವಾಸದ ಕುರಿತಾದ ಮಾಹಿತಿಯನ್ನು ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಬಗ್ಗೆಯೂ ಪ್ರಶ್ನಿಸಿದ್ದಾರೆ.</p><p>ರಾಹುಲ್ ಗಾಂಧಿ ದೇಶದಾದ್ಯಂತ ಕೈಗೊಳ್ಳುವ ಪ್ರವಾಸ, ವಿದೇಶಿ ಭೇಟಿಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಇದು ಭದ್ರತಾಲೋಪವಲ್ಲವೇ? ಎಂದೂ ಪ್ರಶ್ನಿಸಿದ್ದಾರೆ.</p><p>ಈ ಸಂಬಂಧ ಬಿಜೆಪಿ ದೇಶದ ಜನರ ಕ್ಷಮೆಯಾಚನೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಒತ್ತಾಯಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಹುಲ್ ಗಾಂಧಿಗೆ ಗುಂಡಿಕ್ಕಲಾಗುವುದು ಎಂಬ ಬಿಜೆಪಿ ವಕ್ತಾರರೊಬ್ಬರ ಬೆದರಿಕೆಯನ್ನು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಸೋಮವಾರ ಖಂಡಿಸಿದ್ದಾರೆ. ಇದು ಆಡಳಿತ ಪಕ್ಷದ ಮನಸ್ಥಿತಿಯ ಅಪಾಯಕಾರಿ ಪ್ರತಿಬಿಂಬವಾಗಿದೆ ಎಂದಿದ್ದಾರೆ.</p><p>‘ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯನ್ನು ಗುಂಡಿಕ್ಕಿ ಕೊಂದಿರುವುದನ್ನು ದೇಶ ಕಂಡಿದೆ. ಅವರು ರಾಷ್ಟ್ರವನ್ನು ಒಗ್ಗಟ್ಟಿನಲ್ಲಿಡಲು ಬದ್ಧರಾಗಿದ್ದರು. ಈಗ ಬಿಜೆಪಿ ವಕ್ತಾರರು ರಾಹುಲ್ ಗಾಂಧಿಯವರ ಎದೆಗೆ ಗುಂಡು ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ’ಎಂದು ಗೆಹಲೋತ್ ವಿಡಿಯೊ ಸಂದೇಶದಲ್ಲಿ ಖಂಡಿಸಿದ್ದಾರೆ.</p><p>ಈ ವಿಷಯದ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮೌನದ ಬಗ್ಗೆ ಗೆಹಲೋತ್ ಕಳವಳ ವ್ಯಕ್ತಪಡಿಸಿದ್ದಾರೆ.</p><p>‘ಟಿವಿ ಕಾರ್ಯಕ್ರಮವೊಂದರ ಚರ್ಚೆಯಲ್ಲಿ ವಕ್ತಾರರು ಬಹಿರಂಗವಾಗಿ ಇಂತಹ ಹೇಳಿಕೆ ನೀಡಿದ್ದು, ಪಕ್ಷದ ಅಧ್ಯಕ್ಷರು ಈ ಬಗ್ಗೆ ಪ್ರತಿಕ್ರಿಯಿಸದಿದ್ದರೆ, ಅದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ದೇಶವು ಈ ಬಗ್ಗೆ ಚಿಂತಿಸಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.</p><p>ಕೇರಳದ ಎಬಿವಿಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಪ್ರಿಂಟು ಮಹಾದೇವ್ ಅವರು, ಮಲಯಾಳಂ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲಿ, ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಕ್ಕಲಾಗುತ್ತದೆ ಎಂದಿದ್ದರು.</p><p>ಇದೇವೇಳೆ, ರಾಹುಲ್ ಗಾಂಧಿಯವರ ಸಾರ್ವಜನಿಕ ಪ್ರವಾಸದ ಕುರಿತಾದ ಮಾಹಿತಿಯನ್ನು ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಬಗ್ಗೆಯೂ ಪ್ರಶ್ನಿಸಿದ್ದಾರೆ.</p><p>ರಾಹುಲ್ ಗಾಂಧಿ ದೇಶದಾದ್ಯಂತ ಕೈಗೊಳ್ಳುವ ಪ್ರವಾಸ, ವಿದೇಶಿ ಭೇಟಿಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಇದು ಭದ್ರತಾಲೋಪವಲ್ಲವೇ? ಎಂದೂ ಪ್ರಶ್ನಿಸಿದ್ದಾರೆ.</p><p>ಈ ಸಂಬಂಧ ಬಿಜೆಪಿ ದೇಶದ ಜನರ ಕ್ಷಮೆಯಾಚನೆ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಒತ್ತಾಯಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>