<p><strong>ಇಂಫಾಲ್:</strong> ಮಣಿಪುರವನ್ನು ಭಾರತದೊಂದಿಗೆ ವಿಲೀನಗೊಳಿಸಿದ್ದರ ವಿರುದ್ಧ ಹಲವು ಉಗ್ರ ಸಂಘಟನೆಗಳು ಭಾನುವಾರ ಬಂದ್ಗೆ ಕರೆ ನೀಡಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p>.<p>ವಾಣಿಜ್ಯ ಮಳಿಗೆಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಲಾಗಿತ್ತು. ಕೆಲ ಖಾಸಗಿ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಂತರ ಜಿಲ್ಲಾ ಸಾರಿಗೆ ಸೇವೆಯನ್ನೂ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುಎನ್ಎಲ್ಎಫ್) ಸೇರಿದಂತೆ ಕನಿಷ್ಠ ಐದು ನಿಷೇಧಿತ ಸಂಘಟನೆಗಳ ಸಮನ್ವಯ ಸಮಿತಿಯು ಬಂದ್ಗೆ ಕರೆ ನೀಡಿತ್ತು.</p>.<p>ಸಮಿತಿಯು, ‘ಜನರು ಭಾನುವಾರ ಯಾವುದೇ ಸಂಭ್ರಮಾಚರಣೆ ನಡೆಸಬಾರದು’ ಎಂದು ಮನವಿ ಮಾಡಿ ಹೇಳಿಕೆ ಬಿಡುಗಡೆ ಮಾಡಿದೆ.</p>.<p>ಮಹಾರಾಜ ಬುಧಚಂದ್ರ ಅವರು 1949 ಸೆಪ್ಟೆಂಬರ್ 21ರಂದು ಮಣಿಪುರವನ್ನು ಭಾರತದೊಂದಿಗೆ ವಿಲೀನ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದೇ ವರ್ಷ ಅಕ್ಟೋಬರ್ 15ರಿಂದ ಒಪ್ಪಂದ ಅನುಷ್ಠಾನಗೊಂಡಿತ್ತು. ಉಗ್ರ ಸಂಘಟನೆಗಳು ಈ ದಿನವನ್ನು ‘ಕರಾಳ ದಿನ’ವಾಗಿ ಆಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ್:</strong> ಮಣಿಪುರವನ್ನು ಭಾರತದೊಂದಿಗೆ ವಿಲೀನಗೊಳಿಸಿದ್ದರ ವಿರುದ್ಧ ಹಲವು ಉಗ್ರ ಸಂಘಟನೆಗಳು ಭಾನುವಾರ ಬಂದ್ಗೆ ಕರೆ ನೀಡಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.</p>.<p>ವಾಣಿಜ್ಯ ಮಳಿಗೆಗಳು ಮತ್ತು ಮಾರುಕಟ್ಟೆಗಳನ್ನು ಮುಚ್ಚಲಾಗಿತ್ತು. ಕೆಲ ಖಾಸಗಿ ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಅಂತರ ಜಿಲ್ಲಾ ಸಾರಿಗೆ ಸೇವೆಯನ್ನೂ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಯುನೈಟೆಡ್ ನ್ಯಾಷನಲ್ ಲಿಬರೇಷನ್ ಫ್ರಂಟ್ (ಯುಎನ್ಎಲ್ಎಫ್) ಸೇರಿದಂತೆ ಕನಿಷ್ಠ ಐದು ನಿಷೇಧಿತ ಸಂಘಟನೆಗಳ ಸಮನ್ವಯ ಸಮಿತಿಯು ಬಂದ್ಗೆ ಕರೆ ನೀಡಿತ್ತು.</p>.<p>ಸಮಿತಿಯು, ‘ಜನರು ಭಾನುವಾರ ಯಾವುದೇ ಸಂಭ್ರಮಾಚರಣೆ ನಡೆಸಬಾರದು’ ಎಂದು ಮನವಿ ಮಾಡಿ ಹೇಳಿಕೆ ಬಿಡುಗಡೆ ಮಾಡಿದೆ.</p>.<p>ಮಹಾರಾಜ ಬುಧಚಂದ್ರ ಅವರು 1949 ಸೆಪ್ಟೆಂಬರ್ 21ರಂದು ಮಣಿಪುರವನ್ನು ಭಾರತದೊಂದಿಗೆ ವಿಲೀನ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದರು. ಅದೇ ವರ್ಷ ಅಕ್ಟೋಬರ್ 15ರಿಂದ ಒಪ್ಪಂದ ಅನುಷ್ಠಾನಗೊಂಡಿತ್ತು. ಉಗ್ರ ಸಂಘಟನೆಗಳು ಈ ದಿನವನ್ನು ‘ಕರಾಳ ದಿನ’ವಾಗಿ ಆಚರಿಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>