<p><strong>ನವದೆಹಲಿ:</strong> ‘ಪಕ್ಷದೊಳಗೆ ಯುವಕರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡುತ್ತಿದ್ದು, ಅವರು ಆ ಜವಾಬ್ದಾರಿಗಳನ್ನು ಚೆನ್ನಾಗಿಯೇ ನಿರ್ವಹಿಸುತ್ತಿದ್ದಾರೆ. ರಾತ್ರಿ ಬೆಳಗಾಗುವುದರ ಒಳಗೆ ಬದಲಾವಣೆಗಳು ಸಾಧ್ಯವಿಲ್ಲ. ಆದರೆ, ಪಕ್ಷದಲ್ಲಿ ನಿಧಾನವಾಗಿ ಯುವಕರು ಮುನ್ನಲೆಗೆ ಬರುತ್ತಿದ್ದಾರೆ’ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ತಿಳಿಸಿದರು.</p>.<p>ಏಪ್ರಿಲ್ 9ರಂದು ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಹಿನ್ನೆಲೆಯಲ್ಲಿ ‘ಪಿಟಿಐ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>‘ಪಕ್ಷದೊಳಗಿನ ಎಲ್ಲ ನೇಮಕಾತಿಗಳೂ ಉದಯಪುರದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಅನುಗುಣವಾಗಿಯೇ ನಡೆಯುತ್ತಿವೆ. ಸಂಸತ್ತಿನಲ್ಲಿ, ಸಂಸತ್ತಿನ ಹೊರಗೆ, ರಾಜ್ಯ ಘಟಕಗಳಲ್ಲಿ ಅಥವಾ ಎಐಸಿಸಿಗೆ ನೇಮಕ ಮಾಡುವಾಗ ಹೊಸ ಮುಖಗಳಿಗೆ, ಯುವಕರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ’ ಎಂದರು.</p>.<p>‘2025ರಲ್ಲಿ ಪಕ್ಷದ ಸಾಂಸ್ಥಿಕ ಸ್ವರೂಪವನ್ನು ಮತ್ತಷ್ಟು ಬಲಗೊಳಿಸುವುದರ ಕಡೆಗೆ ಗಮನ ಹರಿಸುತ್ತೇವೆ ಎಂದು 2024ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿಯೇ ನಾವು ಘೋಷಿಸಿದ್ದೇವೆ. ಇದಕ್ಕೆ ಪಕ್ಷ ಬದ್ಧವಾಗಿದ್ದು, ಅದೇ ಹಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<h2>‘2025ರಲ್ಲಿ ಪಕ್ಷವನ್ನು ಕಟ್ಟಿ ನಿಲ್ಲಿಸುತ್ತೇವೆ’</h2>.<ul><li><p> 2025ರಲ್ಲಿ ನಾವು ಪಕ್ಷವನ್ನು ಮತ್ತೊಮ್ಮೆ ಕಟ್ಟಿ ನಿಲ್ಲಿಸುತ್ತೇವೆ. ಪಕ್ಷದ ಸಿದ್ಧಾಂತವನ್ನು ಬಲಗೊಳಿಸುತ್ತೇವೆ. ಮುತುವರ್ಜಿಯಿಂದ ಕೆಲಸ ಮಾಡುವವರಿಗೆ ಹೆಚ್ಚಿನ ಜವಾಬ್ದಾರಿ ನೀಡುತ್ತೇವೆ. ನಿರೀಕ್ಷೆಗೆ ತಕ್ಕಂತೆ ಯಾರು ಕೆಲಸ ಮಾಡುವುದಿಲ್ಲವೊ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಮತ್ತು ಅವರನ್ನು ಕೆಳಗಿಳಿಸಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಲಾಗುತ್ತದೆ </p></li><li><p>ಇತ್ತೀಚೆಗೆ ಇಂದಿರಾ ಭವನದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಾಯಿತು. ಚುನಾವಣೆ ಹಣಕಾಸಿನ ನಿರ್ವಹಣೆ ಮತ್ತು ಅಭ್ಯರ್ಥಿಗಳ ಆಯ್ಕೆ ವಿಚಾರಗಳಲ್ಲಿ ಜಿಲ್ಲಾ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ನಿರ್ಧರಿಸಲಾಯಿತು </p></li><li><p> ರಾಜಕಾರಣದಲ್ಲಿ ಸಿದ್ಧಾಂತ ಬಹಳ ಮುಖ್ಯವಾಗುತ್ತದೆ. ಸಿದ್ಧಾಂತ ಗಟ್ಟಿ ಇರಬೇಕು. ರಾಜಕಾರಣ ಎಂದ ಮೇಲೆ ಒಳ್ಳೆಯ ದಿನಗಳು ಕೆಟ್ಟ ದಿನಗಳು ಇದ್ದೇ ಇರುತ್ತವೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪಕ್ಷದೊಳಗೆ ಯುವಕರಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡುತ್ತಿದ್ದು, ಅವರು ಆ ಜವಾಬ್ದಾರಿಗಳನ್ನು ಚೆನ್ನಾಗಿಯೇ ನಿರ್ವಹಿಸುತ್ತಿದ್ದಾರೆ. ರಾತ್ರಿ ಬೆಳಗಾಗುವುದರ ಒಳಗೆ ಬದಲಾವಣೆಗಳು ಸಾಧ್ಯವಿಲ್ಲ. ಆದರೆ, ಪಕ್ಷದಲ್ಲಿ ನಿಧಾನವಾಗಿ ಯುವಕರು ಮುನ್ನಲೆಗೆ ಬರುತ್ತಿದ್ದಾರೆ’ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ತಿಳಿಸಿದರು.</p>.<p>ಏಪ್ರಿಲ್ 9ರಂದು ಗುಜರಾತ್ನ ಅಹಮದಾಬಾದ್ನಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿವೇಶನದ ಹಿನ್ನೆಲೆಯಲ್ಲಿ ‘ಪಿಟಿಐ’ ನಡೆಸಿದ ಸಂದರ್ಶನದಲ್ಲಿ ಅವರು ಈ ವಿಷಯ ತಿಳಿಸಿದರು.</p>.<p>‘ಪಕ್ಷದೊಳಗಿನ ಎಲ್ಲ ನೇಮಕಾತಿಗಳೂ ಉದಯಪುರದಲ್ಲಿ ತೆಗೆದುಕೊಂಡ ನಿರ್ಣಯಕ್ಕೆ ಅನುಗುಣವಾಗಿಯೇ ನಡೆಯುತ್ತಿವೆ. ಸಂಸತ್ತಿನಲ್ಲಿ, ಸಂಸತ್ತಿನ ಹೊರಗೆ, ರಾಜ್ಯ ಘಟಕಗಳಲ್ಲಿ ಅಥವಾ ಎಐಸಿಸಿಗೆ ನೇಮಕ ಮಾಡುವಾಗ ಹೊಸ ಮುಖಗಳಿಗೆ, ಯುವಕರಿಗೆ ಜವಾಬ್ದಾರಿಗಳನ್ನು ನೀಡಲಾಗುತ್ತಿದೆ’ ಎಂದರು.</p>.<p>‘2025ರಲ್ಲಿ ಪಕ್ಷದ ಸಾಂಸ್ಥಿಕ ಸ್ವರೂಪವನ್ನು ಮತ್ತಷ್ಟು ಬಲಗೊಳಿಸುವುದರ ಕಡೆಗೆ ಗಮನ ಹರಿಸುತ್ತೇವೆ ಎಂದು 2024ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿಯೇ ನಾವು ಘೋಷಿಸಿದ್ದೇವೆ. ಇದಕ್ಕೆ ಪಕ್ಷ ಬದ್ಧವಾಗಿದ್ದು, ಅದೇ ಹಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ’ ಎಂದರು.</p>.<h2>‘2025ರಲ್ಲಿ ಪಕ್ಷವನ್ನು ಕಟ್ಟಿ ನಿಲ್ಲಿಸುತ್ತೇವೆ’</h2>.<ul><li><p> 2025ರಲ್ಲಿ ನಾವು ಪಕ್ಷವನ್ನು ಮತ್ತೊಮ್ಮೆ ಕಟ್ಟಿ ನಿಲ್ಲಿಸುತ್ತೇವೆ. ಪಕ್ಷದ ಸಿದ್ಧಾಂತವನ್ನು ಬಲಗೊಳಿಸುತ್ತೇವೆ. ಮುತುವರ್ಜಿಯಿಂದ ಕೆಲಸ ಮಾಡುವವರಿಗೆ ಹೆಚ್ಚಿನ ಜವಾಬ್ದಾರಿ ನೀಡುತ್ತೇವೆ. ನಿರೀಕ್ಷೆಗೆ ತಕ್ಕಂತೆ ಯಾರು ಕೆಲಸ ಮಾಡುವುದಿಲ್ಲವೊ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಮತ್ತು ಅವರನ್ನು ಕೆಳಗಿಳಿಸಿ ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಲಾಗುತ್ತದೆ </p></li><li><p>ಇತ್ತೀಚೆಗೆ ಇಂದಿರಾ ಭವನದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ಸಭೆ ನಡೆಸಲಾಯಿತು. ಚುನಾವಣೆ ಹಣಕಾಸಿನ ನಿರ್ವಹಣೆ ಮತ್ತು ಅಭ್ಯರ್ಥಿಗಳ ಆಯ್ಕೆ ವಿಚಾರಗಳಲ್ಲಿ ಜಿಲ್ಲಾ ಅಧ್ಯಕ್ಷರಿಗೆ ಹೆಚ್ಚಿನ ಜವಾಬ್ದಾರಿ ನೀಡಬೇಕು ಎಂದು ನಿರ್ಧರಿಸಲಾಯಿತು </p></li><li><p> ರಾಜಕಾರಣದಲ್ಲಿ ಸಿದ್ಧಾಂತ ಬಹಳ ಮುಖ್ಯವಾಗುತ್ತದೆ. ಸಿದ್ಧಾಂತ ಗಟ್ಟಿ ಇರಬೇಕು. ರಾಜಕಾರಣ ಎಂದ ಮೇಲೆ ಒಳ್ಳೆಯ ದಿನಗಳು ಕೆಟ್ಟ ದಿನಗಳು ಇದ್ದೇ ಇರುತ್ತವೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>