<p class="title"><strong>ನವದೆಹಲಿ </strong>(ಪಿಟಿಐ): ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸುವ ‘ಇಒಎಸ್–03’ ಉಪಗ್ರಹವನ್ನು 2021ನೇ ಮೂರನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡಲಾಗುತ್ತದೆ.</p>.<p class="title">ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದು, ಇಒಎಸ್–03 ಉಪಗ್ರಹವು ದೇಶದ ಭೌಗೋಳಿಕ ವ್ಯಾಪ್ತಿಯನ್ನು ದೈನಿಕ 4–5 ಬಾರಿ ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದರು.</p>.<p class="title">ಪ್ರಾಕೃತಿಕ ವಿಕೋಪಗಳನ್ನು ಹೊರತುಪಡಿಸಿ ಉಪಗ್ರಹವು ಜಲಮೂಲಗಳು, ಬೆಳೆ, ಅರಣ್ಯ ಪ್ರದೇಶಗಳ ನಾಶ, ಬೆಳವಣಿಗೆಗಳನ್ನು ಗಮನಿಸಿ, ಮಾಹಿತಿಗಳನ್ನು ಕಲೆಹಾಕಲಿದೆ ಎಂದು ತಿಳಿಸಿದರು.</p>.<p class="title">ಜತೆಗೆ ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಸಣ್ಣ ಉಪಗ್ರಹ ಉಡಾವಣಾ ವಾಹಕದ (ಎಸ್ಎಸ್ಎಲ್ವಿ) ಪ್ರಯೋಗ 2021ರ ನಾಲ್ಕನೇ ತ್ರೈಮಾಸಿಕದಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಡೆಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ </strong>(ಪಿಟಿಐ): ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲು ಭೂಚಲನೆಯ ಗತಿ ಅವಲೋಕಿಸುವ ‘ಇಒಎಸ್–03’ ಉಪಗ್ರಹವನ್ನು 2021ನೇ ಮೂರನೇ ತ್ರೈಮಾಸಿಕದಲ್ಲಿ ಉಡಾವಣೆ ಮಾಡಲಾಗುತ್ತದೆ.</p>.<p class="title">ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಗುರುವಾರ ರಾಜ್ಯಸಭೆಯಲ್ಲಿ ಈ ಮಾಹಿತಿ ನೀಡಿದ್ದು, ಇಒಎಸ್–03 ಉಪಗ್ರಹವು ದೇಶದ ಭೌಗೋಳಿಕ ವ್ಯಾಪ್ತಿಯನ್ನು ದೈನಿಕ 4–5 ಬಾರಿ ಸೆರೆಹಿಡಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದರು.</p>.<p class="title">ಪ್ರಾಕೃತಿಕ ವಿಕೋಪಗಳನ್ನು ಹೊರತುಪಡಿಸಿ ಉಪಗ್ರಹವು ಜಲಮೂಲಗಳು, ಬೆಳೆ, ಅರಣ್ಯ ಪ್ರದೇಶಗಳ ನಾಶ, ಬೆಳವಣಿಗೆಗಳನ್ನು ಗಮನಿಸಿ, ಮಾಹಿತಿಗಳನ್ನು ಕಲೆಹಾಕಲಿದೆ ಎಂದು ತಿಳಿಸಿದರು.</p>.<p class="title">ಜತೆಗೆ ದೇಶಿಯವಾಗಿ ಅಭಿವೃದ್ಧಿಪಡಿಸಲಾದ ಸಣ್ಣ ಉಪಗ್ರಹ ಉಡಾವಣಾ ವಾಹಕದ (ಎಸ್ಎಸ್ಎಲ್ವಿ) ಪ್ರಯೋಗ 2021ರ ನಾಲ್ಕನೇ ತ್ರೈಮಾಸಿಕದಲ್ಲಿ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಡೆಯಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>