<p><strong>ಗಾಜಿಯಾಬಾದ್ (ಉತ್ತರಪ್ರದೇಶ):</strong> ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡು ಅಸುನೀಗಿದ ಪತ್ರಕರ್ತ ವಿಕ್ರಂ ಜೋಶಿ ಅವರ ಕುಟುಂಬದವರಿಗೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.</p>.<p>‘ಕೃತ್ಯವೆಸಗಿದ ಒಂಬತ್ತು ಹಲ್ಲೆಕೋರರನ್ನು ಬಂಧಿಸಲಾಗಿದೆ. ಸಹೋದರ ಸೊಸೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ವಿಕ್ರಂ ಜೋಶಿ ಅವರು ಜು.16 ರಂದು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸದೆ ನಿರ್ಲಕ್ಷ್ಯ ತೋರಿದ ಪ್ರತಾಪ ವಿಹಾರ್ ಠಾಣೆಯ ಪೊಲೀಸ್ ಅಧಿಕಾರಿ ರಾಘವೇಂದ್ರ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ತಿಳಿಸಿದರು.</p>.<p>ವಿಕ್ರಂ ಜೋಶಿ ಹತ್ಯೆಗೆ ಸಂಬಂಧಿಸಿದಂತೆ ಅವರ ಸಹೋದರ ಪ್ರಕರಣ ದಾಖಲಿಸಿದ್ದು, ದೂರಿನಲ್ಲಿ ವಿಕ್ರಂಗೆ ಜೀವ ಬೆದರಿಕೆ ಕೂಡ ಬಂದಿತ್ತು ಎಂದು ಹೇಳಿದ್ದಾರೆ. ಇದರಲ್ಲಿ ಶಂಕಿತ ಆರೋಪಿಗಳಾದ ರವಿ ಶಹನೂರ್ ಅಲಿಯಾಸ್ ಚೋಟು, ಆಕಾಶ್ ಮತ್ತು ಅನಾಮದೇಯ ವ್ಯಕ್ತಿಯ ಬಗ್ಗೆ ಪ್ರಸ್ತಾಪಿಸಲಾಗಿದೆ.</p>.<p><strong>ಇದನ್ನೂ ಓದಿ:</strong> <a href="https://cms.prajavani.net/stories/india-news/ghaziabad-journalist-vikram-joshi-passed-away-heading-home-with-2-daughters-shot-in-head-747073.html" itemprop="url">ಗುಂಡಿನ ದಾಳಿಗೆ ಒಳಗಾಗಿದ್ದ ಘಾಜಿಯಾಬಾದ್ನ ಪತ್ರಕರ್ತ ವಿಕ್ರಮ್; ಬದುಕಿ ಬರಲಿಲ್ಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್ (ಉತ್ತರಪ್ರದೇಶ):</strong> ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡು ಅಸುನೀಗಿದ ಪತ್ರಕರ್ತ ವಿಕ್ರಂ ಜೋಶಿ ಅವರ ಕುಟುಂಬದವರಿಗೆಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.</p>.<p>‘ಕೃತ್ಯವೆಸಗಿದ ಒಂಬತ್ತು ಹಲ್ಲೆಕೋರರನ್ನು ಬಂಧಿಸಲಾಗಿದೆ. ಸಹೋದರ ಸೊಸೆ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಕುರಿತು ವಿಕ್ರಂ ಜೋಶಿ ಅವರು ಜು.16 ರಂದು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸದೆ ನಿರ್ಲಕ್ಷ್ಯ ತೋರಿದ ಪ್ರತಾಪ ವಿಹಾರ್ ಠಾಣೆಯ ಪೊಲೀಸ್ ಅಧಿಕಾರಿ ರಾಘವೇಂದ್ರ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ತಿಳಿಸಿದರು.</p>.<p>ವಿಕ್ರಂ ಜೋಶಿ ಹತ್ಯೆಗೆ ಸಂಬಂಧಿಸಿದಂತೆ ಅವರ ಸಹೋದರ ಪ್ರಕರಣ ದಾಖಲಿಸಿದ್ದು, ದೂರಿನಲ್ಲಿ ವಿಕ್ರಂಗೆ ಜೀವ ಬೆದರಿಕೆ ಕೂಡ ಬಂದಿತ್ತು ಎಂದು ಹೇಳಿದ್ದಾರೆ. ಇದರಲ್ಲಿ ಶಂಕಿತ ಆರೋಪಿಗಳಾದ ರವಿ ಶಹನೂರ್ ಅಲಿಯಾಸ್ ಚೋಟು, ಆಕಾಶ್ ಮತ್ತು ಅನಾಮದೇಯ ವ್ಯಕ್ತಿಯ ಬಗ್ಗೆ ಪ್ರಸ್ತಾಪಿಸಲಾಗಿದೆ.</p>.<p><strong>ಇದನ್ನೂ ಓದಿ:</strong> <a href="https://cms.prajavani.net/stories/india-news/ghaziabad-journalist-vikram-joshi-passed-away-heading-home-with-2-daughters-shot-in-head-747073.html" itemprop="url">ಗುಂಡಿನ ದಾಳಿಗೆ ಒಳಗಾಗಿದ್ದ ಘಾಜಿಯಾಬಾದ್ನ ಪತ್ರಕರ್ತ ವಿಕ್ರಮ್; ಬದುಕಿ ಬರಲಿಲ್ಲ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>