<p><strong>ಗಾಜಿಯಾಬಾದ್</strong>: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರು, ಕೊರಿಯಾ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದರೆಂದು ಅವರ ತಂದೆ ಮೊಬೈಲ್ ಫೋನ್ ಅನ್ನು ಕಸಿದುಕೊಂಡಿದ್ದರು. ಇದರಿಂದ ಮೂವರೂ ಖಿನ್ನತೆಗೆ ಒಳಗಾಗಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.</p>.<p>ಮೊಬೈಲ್ ಫೋನ್ ಕಸಿದುಕೊಂಡಿದ್ದರಿಂದ ಬಾಲಕಿಯರಿಗೆ ಆನ್ಲೈನ್ ಗೇಮ್ ಆಡಲು ಮತ್ತು ಕೊರಿಯಾ ಸ್ನೇಹಿತರ ಜೊತೆ ಮಾತನಾಡಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಸಿದುಕೊಂಡಿದ್ದ ಮೊಬೈಲ್ ಅನ್ನು ಅವರ ತಂದೆ ಮಾರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಆತ್ಮಹತ್ಯೆಗೂ ಮುನ್ನ ಬಾಲಕಿಯರು ತಾಯಿಯ ಫೋನ್ ತೆಗೆದುಕೊಂಡಿದ್ದರು. ಆದರೆ, ಅದರಲ್ಲಿ ಕೊರಿಯಾ ಆ್ಯಪ್ ಬಳಕೆಗೆ ಅವಕಾಶವಿರಲಿಲ್ಲ. ಇದರಿಂದ ನೊಂದಿದ್ದರು ಎಂದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಘಟನಾ ಸ್ಥಳಕ್ಕೆ ತೆರಳಿದ್ದ ವಿಧಿವಿಜ್ಞಾನ ತಂಡವು ಬೆರಳಚ್ಚು, ಮರಣಪತ್ರವನ್ನು ಪ್ರಯೋಗಾಲಕ್ಕೆ ಕೊಂಡೊಯ್ದಿದೆ. ಈ ಕುರಿತ ವರದಿಯು ಇನ್ನಷ್ಟೇ ಬರಬೇಕಿದೆ’ ಎಂದು ಡಿಸಿಪಿ ನಿಮಿಷಾ ಪಾಟೀಲ್ ತಿಳಿಸಿದ್ದಾರೆ.</p>.<p>‘ಬಾಲಕಿಯರ ತಂದೆಯಿಂದ ಮೊಬೈಲ್ ಖರೀದಿ ಮಾಡಿದವರಿಗಾಗಿ ಸೈಬರ್ ಅಪರಾಧ ತನಿಖಾ ತಂಡವು ಶೋಧ ನಡೆಸುತ್ತಿದೆ’ ಎಂದು ಪಾಟೀಲ್ ತಿಳಿಸಿದ್ದಾರೆ.</p>.<p>ನಿಶಿಕಾ (16), ಪ್ರಾಚಿ (14) ಮತ್ತು ಪಾಖಿ (12) ಇತ್ತೀಚೆಗೆ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಿಯಾಬಾದ್</strong>: ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ವಯಸ್ಸಿನ ಮೂವರು ಸಹೋದರಿಯರು, ಕೊರಿಯಾ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿದ್ದರೆಂದು ಅವರ ತಂದೆ ಮೊಬೈಲ್ ಫೋನ್ ಅನ್ನು ಕಸಿದುಕೊಂಡಿದ್ದರು. ಇದರಿಂದ ಮೂವರೂ ಖಿನ್ನತೆಗೆ ಒಳಗಾಗಿದ್ದರು ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.</p>.<p>ಮೊಬೈಲ್ ಫೋನ್ ಕಸಿದುಕೊಂಡಿದ್ದರಿಂದ ಬಾಲಕಿಯರಿಗೆ ಆನ್ಲೈನ್ ಗೇಮ್ ಆಡಲು ಮತ್ತು ಕೊರಿಯಾ ಸ್ನೇಹಿತರ ಜೊತೆ ಮಾತನಾಡಲು ಸಾಧ್ಯವಾಗಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕಸಿದುಕೊಂಡಿದ್ದ ಮೊಬೈಲ್ ಅನ್ನು ಅವರ ತಂದೆ ಮಾರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.</p>.<p>ಆತ್ಮಹತ್ಯೆಗೂ ಮುನ್ನ ಬಾಲಕಿಯರು ತಾಯಿಯ ಫೋನ್ ತೆಗೆದುಕೊಂಡಿದ್ದರು. ಆದರೆ, ಅದರಲ್ಲಿ ಕೊರಿಯಾ ಆ್ಯಪ್ ಬಳಕೆಗೆ ಅವಕಾಶವಿರಲಿಲ್ಲ. ಇದರಿಂದ ನೊಂದಿದ್ದರು ಎಂದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.</p>.<p>‘ಘಟನಾ ಸ್ಥಳಕ್ಕೆ ತೆರಳಿದ್ದ ವಿಧಿವಿಜ್ಞಾನ ತಂಡವು ಬೆರಳಚ್ಚು, ಮರಣಪತ್ರವನ್ನು ಪ್ರಯೋಗಾಲಕ್ಕೆ ಕೊಂಡೊಯ್ದಿದೆ. ಈ ಕುರಿತ ವರದಿಯು ಇನ್ನಷ್ಟೇ ಬರಬೇಕಿದೆ’ ಎಂದು ಡಿಸಿಪಿ ನಿಮಿಷಾ ಪಾಟೀಲ್ ತಿಳಿಸಿದ್ದಾರೆ.</p>.<p>‘ಬಾಲಕಿಯರ ತಂದೆಯಿಂದ ಮೊಬೈಲ್ ಖರೀದಿ ಮಾಡಿದವರಿಗಾಗಿ ಸೈಬರ್ ಅಪರಾಧ ತನಿಖಾ ತಂಡವು ಶೋಧ ನಡೆಸುತ್ತಿದೆ’ ಎಂದು ಪಾಟೀಲ್ ತಿಳಿಸಿದ್ದಾರೆ.</p>.<p>ನಿಶಿಕಾ (16), ಪ್ರಾಚಿ (14) ಮತ್ತು ಪಾಖಿ (12) ಇತ್ತೀಚೆಗೆ ಒಂಬತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>