<p><strong>ಲಖನೌ</strong>: ಗಾಜಿಪುರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗಾಜಿಯಾಬಾದ್ ಪೊಲೀಸರು ಮನವಿ ಮಾಡಿದ್ದಾರೆ.</p><p>ಪ್ರಕರಣ ಸಂಬಂಧ ತನಿಖೆಗೆ ಆಗ್ರಹಿಸಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ರಾಹುಲ್ ಗಾಂಧಿ, ಬಾಲಕಿ ಸಾವಿನ ಬಗ್ಗೆ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು ಎಂದು ಆರೋಪಿಸಿದ್ದರು. ಪ್ರಕರಣ ದಾಖಲಿಸಲು ಪೊಲೀಸರ ಮುಂದೆ ಪೋಷಕರು ಮಂಡಿಯೂರಬೇಕಾದ ಪರಿಸ್ಥಿತಿ ಇದೆ ಎಂದೂ ಹೇಳಿದ್ದರು.</p><p>ಈ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಪೊಲೀಸರು, ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.</p>.<p>‘2026ರ ಏಪ್ರಿಲ್ 15ರಂದು ಬೆಳಿಗ್ಗೆ 5:44ಕ್ಕೆ ಪೊಲೀಸ್ ಸಹಾಯವಾಣಿ 112ಕ್ಕೆ ಬಾಲಕಿ ತಂದೆ ಕರೆ ಮಾಡಿದ್ದರು. ಮಗಳು ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ಸಂತ್ರಸ್ತೆಯ ತಂದೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ದಾಖಲಾದ ಎಫ್ಐಆರ್ನಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯಲ್ಲೂ ಅತ್ಯಾಚಾರಕ್ಕೆ ಸಂಬಂಧಿಸಿದ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ತಿಳಿಸಿದ್ದಾರೆ.</p>.ಗಾಜಿಪುರ ಅತ್ಯಾಚಾರ ಪ್ರಕರಣದಲ್ಲಿ ದಲಿತ, ಬಡ ಹೆಣ್ಣುಮಕ್ಕಳೇ ಬಲಿಪಶು: ರಾಹುಲ್ .<p>‘ಸಮಾಜದ ಶಾಂತಿಗೆ ಚ್ಯುತಿ ತರುವಂತಹ ಯಾವುದೇ ದೃಢೀಕರಿಸದ, ಸತ್ಯಕ್ಕೆ ದೂರವಾದ ಮತ್ತು ದಾರಿತಪ್ಪಿಸುವ ವದಂತಿಗಳನ್ನು ದಯವಿಟ್ಟು ಹರಡಬೇಡಿ. ಪ್ರಕರಣ ಸಂಬಂಧ ಗಾಜಿಪುರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಇತರ 10 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.</p><p>ಏಪ್ರಿಲ್ 15ರಂದು ಗಾಜಿಪುರ ಜಿಲ್ಲೆಯ ಕರಂಡಾ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಗಾಜಿಪುರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗಾಜಿಯಾಬಾದ್ ಪೊಲೀಸರು ಮನವಿ ಮಾಡಿದ್ದಾರೆ.</p><p>ಪ್ರಕರಣ ಸಂಬಂಧ ತನಿಖೆಗೆ ಆಗ್ರಹಿಸಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ರಾಹುಲ್ ಗಾಂಧಿ, ಬಾಲಕಿ ಸಾವಿನ ಬಗ್ಗೆ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು ಎಂದು ಆರೋಪಿಸಿದ್ದರು. ಪ್ರಕರಣ ದಾಖಲಿಸಲು ಪೊಲೀಸರ ಮುಂದೆ ಪೋಷಕರು ಮಂಡಿಯೂರಬೇಕಾದ ಪರಿಸ್ಥಿತಿ ಇದೆ ಎಂದೂ ಹೇಳಿದ್ದರು.</p><p>ಈ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಗಾಜಿಯಾಬಾದ್ ಪೊಲೀಸರು, ಶಾಂತಿ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.</p>.<p>‘2026ರ ಏಪ್ರಿಲ್ 15ರಂದು ಬೆಳಿಗ್ಗೆ 5:44ಕ್ಕೆ ಪೊಲೀಸ್ ಸಹಾಯವಾಣಿ 112ಕ್ಕೆ ಬಾಲಕಿ ತಂದೆ ಕರೆ ಮಾಡಿದ್ದರು. ಮಗಳು ಸೇತುವೆಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದರು. ಈ ಪ್ರಕರಣದಲ್ಲಿ ಸಂತ್ರಸ್ತೆಯ ತಂದೆ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ದಾಖಲಾದ ಎಫ್ಐಆರ್ನಲ್ಲಿ ಅತ್ಯಾಚಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯಲ್ಲೂ ಅತ್ಯಾಚಾರಕ್ಕೆ ಸಂಬಂಧಿಸಿದ ಯಾವುದೇ ಅಂಶಗಳು ಕಂಡುಬಂದಿಲ್ಲ’ ಎಂದು ತಿಳಿಸಿದ್ದಾರೆ.</p>.ಗಾಜಿಪುರ ಅತ್ಯಾಚಾರ ಪ್ರಕರಣದಲ್ಲಿ ದಲಿತ, ಬಡ ಹೆಣ್ಣುಮಕ್ಕಳೇ ಬಲಿಪಶು: ರಾಹುಲ್ .<p>‘ಸಮಾಜದ ಶಾಂತಿಗೆ ಚ್ಯುತಿ ತರುವಂತಹ ಯಾವುದೇ ದೃಢೀಕರಿಸದ, ಸತ್ಯಕ್ಕೆ ದೂರವಾದ ಮತ್ತು ದಾರಿತಪ್ಪಿಸುವ ವದಂತಿಗಳನ್ನು ದಯವಿಟ್ಟು ಹರಡಬೇಡಿ. ಪ್ರಕರಣ ಸಂಬಂಧ ಗಾಜಿಪುರ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಲ್ಲು ತೂರಾಟ ನಡೆಸಿದ ಇತರ 10 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಹೇಳಿದ್ದಾರೆ.</p><p>ಏಪ್ರಿಲ್ 15ರಂದು ಗಾಜಿಪುರ ಜಿಲ್ಲೆಯ ಕರಂಡಾ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>