<p><strong>ನವದೆಹಲಿ:</strong>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಗಾಗಿ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಕರ್ನಾಟಕದಲ್ಲಿ ಶುಕ್ರವಾರ ಚಾಲನೆ ನೀಡಲಾಗುವುದು ಎಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಹೇಳಿದ್ದಾರೆ.</p>.<p>ವಿಧಾನಸಭೆಗೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ರೈತರು ಬಿಜೆಪಿಯ ವಿರುದ್ಧ ಪ್ರಚಾರ ನಡೆಸಲಿದ್ದಾರೆ. ಇದೇ 12ರಂದು ಕೋಲ್ಕತ್ತದಲ್ಲಿ ನಡೆಯಲಿರುವ ರೈತರ ರ್ಯಾಲಿ ಮೂಲಕ ಈ ಪ್ರಚಾರ ಆರಂಭವಾಗಲಿದೆ ಎಂದು ರೈತ ನಾಯಕ ಬಲಬೀರ್ ಸಿಂಗ್ ರಾಜೇವಾಲ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಎಂಎಸ್ಪಿ ಅಭಿಯಾನವು ಕರ್ನಾಟಕದ ಬಳಿಕ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯಲಿದೆ. ಕ್ರಮೇಣ ಇದು ಇಡೀ ದೇಶವನ್ನು ಆವರಿಸಲಿದೆ ಎಂದು ತಿಳಿಸಿದ್ದಾರೆ.</p>.<p><strong>ಗಾಜಿಪುರ ಗಡಿ ಮತ್ತೆ ಬಂದ್:</strong>ಗಾಜಿಪುರ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಕೆಲವೇಗಂಟೆಗಳಲ್ಲಿ ಪೊಲೀಸರು ಗಡಿಯನ್ನು ಪುನಃ ಮುಚ್ಚಿದರು. ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು.</p>.<p><strong>6ರಂದು ಕರಾಳ ದಿನ:</strong>ರೈತರ ಪ್ರತಿಭಟನೆ ಆರಂಭವಾಗಿ ಶನಿವಾರಕ್ಕೆ (ಮಾರ್ಚ್ 6) ನೂರು ದಿನಗಳಾಗಲಿವೆ. ಅಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಕುಂಡಲಿ–ಮನೇಸರ್–ಪಲ್ವಾಲ್ ಎಕ್ಸ್ಪ್ರೆಸ್ವೇಯನ್ನು ಬಂದ್ ಮಾಡಲಾಗುವುದು. ಆ ದಿನವನ್ನು ಕರಾಳ ದಿನ ಎಂದು ಆಚರಿಸಲಾಗುವುದು. ದೇಶದಾ<br />ದ್ಯಂತ ರೈತರು ಕಪ್ಪು ಧ್ವಜ ಹಾರಿಸಲಿದ್ದಾರೆ, ಕಪ್ಪು ಪಟ್ಟಿ ಮತ್ತು ಕಪ್ಪು ಬಟ್ಟೆ ಧರಿಸಲಿದ್ದಾರೆ. ಇದೇ 8ರಂದು ಮಹಿಳಾ ಕೃಷಿ ದಿನ ಆಚರಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿಗಾಗಿ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಕರ್ನಾಟಕದಲ್ಲಿ ಶುಕ್ರವಾರ ಚಾಲನೆ ನೀಡಲಾಗುವುದು ಎಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಹೇಳಿದ್ದಾರೆ.</p>.<p>ವಿಧಾನಸಭೆಗೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ರೈತರು ಬಿಜೆಪಿಯ ವಿರುದ್ಧ ಪ್ರಚಾರ ನಡೆಸಲಿದ್ದಾರೆ. ಇದೇ 12ರಂದು ಕೋಲ್ಕತ್ತದಲ್ಲಿ ನಡೆಯಲಿರುವ ರೈತರ ರ್ಯಾಲಿ ಮೂಲಕ ಈ ಪ್ರಚಾರ ಆರಂಭವಾಗಲಿದೆ ಎಂದು ರೈತ ನಾಯಕ ಬಲಬೀರ್ ಸಿಂಗ್ ರಾಜೇವಾಲ್ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>ಎಂಎಸ್ಪಿ ಅಭಿಯಾನವು ಕರ್ನಾಟಕದ ಬಳಿಕ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯಲಿದೆ. ಕ್ರಮೇಣ ಇದು ಇಡೀ ದೇಶವನ್ನು ಆವರಿಸಲಿದೆ ಎಂದು ತಿಳಿಸಿದ್ದಾರೆ.</p>.<p><strong>ಗಾಜಿಪುರ ಗಡಿ ಮತ್ತೆ ಬಂದ್:</strong>ಗಾಜಿಪುರ ಗಡಿಯಲ್ಲಿ ಮಂಗಳವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಕೆಲವೇಗಂಟೆಗಳಲ್ಲಿ ಪೊಲೀಸರು ಗಡಿಯನ್ನು ಪುನಃ ಮುಚ್ಚಿದರು. ಗಣರಾಜ್ಯೋತ್ಸವದ ದಿನ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು.</p>.<p><strong>6ರಂದು ಕರಾಳ ದಿನ:</strong>ರೈತರ ಪ್ರತಿಭಟನೆ ಆರಂಭವಾಗಿ ಶನಿವಾರಕ್ಕೆ (ಮಾರ್ಚ್ 6) ನೂರು ದಿನಗಳಾಗಲಿವೆ. ಅಂದು ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಕುಂಡಲಿ–ಮನೇಸರ್–ಪಲ್ವಾಲ್ ಎಕ್ಸ್ಪ್ರೆಸ್ವೇಯನ್ನು ಬಂದ್ ಮಾಡಲಾಗುವುದು. ಆ ದಿನವನ್ನು ಕರಾಳ ದಿನ ಎಂದು ಆಚರಿಸಲಾಗುವುದು. ದೇಶದಾ<br />ದ್ಯಂತ ರೈತರು ಕಪ್ಪು ಧ್ವಜ ಹಾರಿಸಲಿದ್ದಾರೆ, ಕಪ್ಪು ಪಟ್ಟಿ ಮತ್ತು ಕಪ್ಪು ಬಟ್ಟೆ ಧರಿಸಲಿದ್ದಾರೆ. ಇದೇ 8ರಂದು ಮಹಿಳಾ ಕೃಷಿ ದಿನ ಆಚರಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>