<p><strong>ಅಮರಾವತಿ</strong>: ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಾತ್ರೂಮ್ ಸ್ವಚ್ಛ ಮಾಡಲು ಬಳಸುವ ರಾಸಾಯನಿಕದಿಂದ ತಯಾರಿಸಲಾದ ತುಪ್ಪವನ್ನು ಬಳಕೆ ಮಾಡಲಾಗಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. </p><p>ಕರ್ನೂಲ್ ಜಿಲ್ಲೆ ಕಲುಗುಟ್ಲಾದಲ್ಲಿ ಗ್ರಾಮಸಭೆ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ‘ಹಿಂದಿನ ಸರ್ಕಾರವು ತಿರುಪತಿ ವೆಂಕಟೇಶ್ವರ ಸ್ವಾಮಿಯ ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸುವ ಮೂಲಕ ದೇಗುಲದ ಗೌರವಕ್ಕೆ ಧಕ್ಕೆ ತರಲು ಯತ್ನಿಸಿತ್ತು’ ಎಂದು ದೂರಿದ್ದಾರೆ.</p><p>ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಕೆ ಮಾಡಲಾಗುತ್ತಿತ್ತು. ದೇಗುಲದ ಭಕ್ತನಾಗಿ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ರಾಸಾಯನಿಕಗಳಿಂದ ಮಾಡಿದ ಕಲಬೆರಕೆ ತುಪ್ಪವನ್ನು ಐದು ವರ್ಷಗಳ ಕಾಲ ಲಡ್ಡು ತಯಾರಿಸಲು ಬಳಸಲಾಗುತ್ತಿತ್ತು ಎಂದಿದ್ದಾರೆ.</p><p>‘ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗಿತ್ತು ಎಂದು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿದೆ’ ಎಂದೂ ತಿಳಿಸಿದ್ದಾರೆ. </p><p>ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡವು (ಎಸ್ಐಟಿ) ತನಿಖೆಯನ್ನು ಪೂರ್ಣಗೊಳಿಸಿದ್ದು, ಸಸ್ಯಜನ್ಯ (ವನಸ್ಪತಿ) ಎಣ್ಣೆ ಬಳಸಿ ತುಪ್ಪ ತಯಾರಿಸುವ ಮೂಲಕ ₹234 ಕೋಟಿ ಮೊತ್ತದ ವಂಚನೆ ನಡೆದಿರುವುದನ್ನು ಪತ್ತೆ ಮಾಡಿದೆ.</p><p>2019–2024ರ ನಡುವೆ ತಿರುಮಲ ತಿರುಪತಿ ದೇಗುಲಕ್ಕೆ ಪೂರೈಕೆದಾರರು ಹಾಲಿನ ಬದಲು ಸಸ್ಯಜನ್ಯ ಎಣ್ಣೆ ಬಳಸಿ ತುಪ್ಪ ತಯಾರಿಸಿರುವ ಸಂಗತಿ ಬಯಲಾಗಿದೆ. ಜತೆಗೆ, ಪ್ರಾಣಿಗಳ ಕೊಬ್ಬು, ಹಂದಿ ಕೊಬ್ಬು ಅಥವಾ ಮೀನಿನ ಎಣ್ಣೆಯಿಂದ ತುಪ್ಪ ತಯಾರಿಸಿರುವ ಸಾಧ್ಯತೆ ವಿರಳ ಎಂದು ವರದಿಯಲ್ಲಿ ಉಲ್ಲೇಖಿಸಿದೆ. </p><p>ಪ್ರಕರಣದಲ್ಲಿ ತುಪ್ಪ ಪೂರೈಕೆದಾರರು, ಟಿಟಿಡಿಯ ನೌಕರರು ಹಾಗೂ ಇತರರನ್ನು ಆರೋಪಿಗಳು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.</p>.ತಿರುಪತಿ | ತುಪ್ಪದ ಬದಲು ಸಸ್ಯಜನ್ಯ ಎಣ್ಣೆ ಬಳಕೆ: ₹234 ಕೋಟಿ ಮೊತ್ತದ ವಂಚನೆ ಬಯಲು.ತಿರುಪತಿ ಲಡ್ಡು ವಿವಾದ: ಪ್ರಾಣಿಗಳ ಕೊಬ್ಬು ದೃಢ; ಚಂದ್ರಬಾಬು ನಾಯ್ಡು.ತಿರುಪತಿ ಲಡ್ಡು ಪ್ರಸಾದ ತುಪ್ಪದಲ್ಲಿ ಕಲಬೆರಕೆ: ವ್ಯವಸ್ಥೆ ಸುಧಾರಿಸಲು ಸಮಿತಿ.ತಿರುಪತಿ ಕಲಬೆರಕೆ ತುಪ್ಪ: ತನಿಖಾ ಆಯೋಗಕ್ಕೆ ಚಂದ್ರಬಾಬು ನಾಯ್ಡು ಸಂಪುಟ ಒಪ್ಪಿಗೆ.ತಿರುಪತಿ ಲಡ್ಡು ಪ್ರಕರಣ: ಎಸ್ಐಟಿಯಿಂದ ತನಿಖೆ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಈ ಹಿಂದಿನ ವೈಎಸ್ಆರ್ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಾತ್ರೂಮ್ ಸ್ವಚ್ಛ ಮಾಡಲು ಬಳಸುವ ರಾಸಾಯನಿಕದಿಂದ ತಯಾರಿಸಲಾದ ತುಪ್ಪವನ್ನು ಬಳಕೆ ಮಾಡಲಾಗಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. </p><p>ಕರ್ನೂಲ್ ಜಿಲ್ಲೆ ಕಲುಗುಟ್ಲಾದಲ್ಲಿ ಗ್ರಾಮಸಭೆ ಉದ್ದೇಶಿಸಿ ಶುಕ್ರವಾರ ಮಾತನಾಡಿದ ಅವರು, ‘ಹಿಂದಿನ ಸರ್ಕಾರವು ತಿರುಪತಿ ವೆಂಕಟೇಶ್ವರ ಸ್ವಾಮಿಯ ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸುವ ಮೂಲಕ ದೇಗುಲದ ಗೌರವಕ್ಕೆ ಧಕ್ಕೆ ತರಲು ಯತ್ನಿಸಿತ್ತು’ ಎಂದು ದೂರಿದ್ದಾರೆ.</p><p>ಕಲಬೆರಕೆ ತುಪ್ಪವನ್ನು ಶ್ರೀಶೈಲಂ ದೇವಸ್ಥಾನಕ್ಕೂ ಪೂರೈಕೆ ಮಾಡಲಾಗುತ್ತಿತ್ತು. ದೇಗುಲದ ಭಕ್ತನಾಗಿ ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ರಾಸಾಯನಿಕಗಳಿಂದ ಮಾಡಿದ ಕಲಬೆರಕೆ ತುಪ್ಪವನ್ನು ಐದು ವರ್ಷಗಳ ಕಾಲ ಲಡ್ಡು ತಯಾರಿಸಲು ಬಳಸಲಾಗುತ್ತಿತ್ತು ಎಂದಿದ್ದಾರೆ.</p><p>‘ಪ್ರಾಣಿಗಳ ಕೊಬ್ಬನ್ನೂ ಬಳಕೆ ಮಾಡಲಾಗಿತ್ತು ಎಂದು ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ವರದಿ ತಿಳಿಸಿದೆ’ ಎಂದೂ ತಿಳಿಸಿದ್ದಾರೆ. </p><p>ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಸಿಬಿಐ ನೇತೃತ್ವದ ವಿಶೇಷ ತನಿಖಾ ತಂಡವು (ಎಸ್ಐಟಿ) ತನಿಖೆಯನ್ನು ಪೂರ್ಣಗೊಳಿಸಿದ್ದು, ಸಸ್ಯಜನ್ಯ (ವನಸ್ಪತಿ) ಎಣ್ಣೆ ಬಳಸಿ ತುಪ್ಪ ತಯಾರಿಸುವ ಮೂಲಕ ₹234 ಕೋಟಿ ಮೊತ್ತದ ವಂಚನೆ ನಡೆದಿರುವುದನ್ನು ಪತ್ತೆ ಮಾಡಿದೆ.</p><p>2019–2024ರ ನಡುವೆ ತಿರುಮಲ ತಿರುಪತಿ ದೇಗುಲಕ್ಕೆ ಪೂರೈಕೆದಾರರು ಹಾಲಿನ ಬದಲು ಸಸ್ಯಜನ್ಯ ಎಣ್ಣೆ ಬಳಸಿ ತುಪ್ಪ ತಯಾರಿಸಿರುವ ಸಂಗತಿ ಬಯಲಾಗಿದೆ. ಜತೆಗೆ, ಪ್ರಾಣಿಗಳ ಕೊಬ್ಬು, ಹಂದಿ ಕೊಬ್ಬು ಅಥವಾ ಮೀನಿನ ಎಣ್ಣೆಯಿಂದ ತುಪ್ಪ ತಯಾರಿಸಿರುವ ಸಾಧ್ಯತೆ ವಿರಳ ಎಂದು ವರದಿಯಲ್ಲಿ ಉಲ್ಲೇಖಿಸಿದೆ. </p><p>ಪ್ರಕರಣದಲ್ಲಿ ತುಪ್ಪ ಪೂರೈಕೆದಾರರು, ಟಿಟಿಡಿಯ ನೌಕರರು ಹಾಗೂ ಇತರರನ್ನು ಆರೋಪಿಗಳು ಎಂದು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದೆ.</p>.ತಿರುಪತಿ | ತುಪ್ಪದ ಬದಲು ಸಸ್ಯಜನ್ಯ ಎಣ್ಣೆ ಬಳಕೆ: ₹234 ಕೋಟಿ ಮೊತ್ತದ ವಂಚನೆ ಬಯಲು.ತಿರುಪತಿ ಲಡ್ಡು ವಿವಾದ: ಪ್ರಾಣಿಗಳ ಕೊಬ್ಬು ದೃಢ; ಚಂದ್ರಬಾಬು ನಾಯ್ಡು.ತಿರುಪತಿ ಲಡ್ಡು ಪ್ರಸಾದ ತುಪ್ಪದಲ್ಲಿ ಕಲಬೆರಕೆ: ವ್ಯವಸ್ಥೆ ಸುಧಾರಿಸಲು ಸಮಿತಿ.ತಿರುಪತಿ ಕಲಬೆರಕೆ ತುಪ್ಪ: ತನಿಖಾ ಆಯೋಗಕ್ಕೆ ಚಂದ್ರಬಾಬು ನಾಯ್ಡು ಸಂಪುಟ ಒಪ್ಪಿಗೆ.ತಿರುಪತಿ ಲಡ್ಡು ಪ್ರಕರಣ: ಎಸ್ಐಟಿಯಿಂದ ತನಿಖೆ ಪೂರ್ಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>