ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಲಾಂ ನಬಿ ಆಜಾದ್‌ ಈಗ ಸ್ವತಂತ್ರರು: ಸ್ಮೃತಿ ಇರಾನಿ

Last Updated 28 ಆಗಸ್ಟ್ 2022, 6:25 IST
ಅಕ್ಷರ ಗಾತ್ರ

ಅಮೇಥಿ: ಕಾಂಗ್ರೆಸ್ ತೊರೆದಿರುವ ಗುಲಾಂ ನಬಿ ಆಜಾದ್ ಈಗ ಸ್ವತಂತ್ರರು (ಆಜಾದ್) ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಆದರೆ ಅಮೇಥಿ ಬಹಳ ಹಿಂದೆಯೇ ಸ್ವತಂತ್ರವಾಯಿತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವ್ಯಂಗ್ಯ ಮಾಡಿದ್ದಾರೆ.

ಕಾಂಗ್ರೆಸ್ ಜೊತೆಗಿನ ಸುಮಾರು ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದ್ದ ಗುಲಾಂ ನಬಿ ಆಜಾದ್, ರಾಜೀನಾಮೆ ಸಲ್ಲಿಸಿದ್ದರು.

ಕಾಂಗ್ರೆಸ್‌ನ 'ಭಾರತ ಒಗ್ಗೂಡಿಸಿ ಯಾತ್ರೆ' ಬಗ್ಗೆ ಪ್ರತಿಕ್ರಿಯಿಸಿದ ಇರಾನಿ, ಕಾಂಗ್ರೆಸ್‌ನ ಸ್ವಂತ ನಾಯಕತ್ವವೇ ವಿಶೇಷವಾಗಿ ಗಾಂಧಿ ಕುಟುಂಬದ ಬಗ್ಗೆ ಪ್ರತಿಕ್ರಿಯಿಸುತ್ತಿದೆ. ಹಾಗಾಗಿ ನಾವೇನು ಹೆಚ್ಚೇನು ಹೇಳುವ ಅಗತ್ಯವಿಲ್ಲ. ಗುಲಾಂ ನಬಿ ಆಜಾದ್ ಸ್ವತಂತ್ರರಾಗಿದ್ದಾರೆ. ಆದರೆ ಬಹಳ ಹಿಂದೆಯೇ ಅಮೇಥಿ ಸ್ವತಂತ್ರವಾಯಿತು ಎಂದು ಹೇಳಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸ್ಮೃತಿ ಇರಾನಿ ಸೋಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT