<p><strong>ನಾಗಪುರ:</strong> ಪ್ರೀತಿಸುತ್ತಿದ್ದ ಹುಡುಗಿಯನ್ನು ಮದುವೆಯಾಗು ಎಂದು ಬಲವಂತ ಮಾಡಿದ ಯುವಕನನ್ನು, ಪ್ರಿಯತಮೆಯೇ ಕೊಲೆ ಮಾಡಿರುವ ಘಟನೆಯು ನಾಗಪುರದಲ್ಲಿ ಜರುಗಿದೆ. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ರತಿ ಸಾಹೇಬ್ರಾವ್ ದೇಶಮುಖ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. </p><p>ನಾಲ್ಕನೇ ವರ್ಷದ ಬಿಎಎಂಎಸ್ ವಿದ್ಯಾರ್ಥಿಯಾಗಿದ್ದ ರತಿ ಹಾಗೂ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬಾಲಾಜಿ ವಿನಾಯಕ ಕಲ್ಯಾಣ್(28) ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಈ ಸಂಬಂಧವನ್ನು ಆರೋಪಿಯ ತಂದೆ ವಿರೋಧಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p><p>ಗುರುವಾರ ಬಾಲಾಜಿಯು ತನ್ನ ಗೆಳತಿಗೆ ಮದುವೆಯಾಗುವಂತೆ ದುಂಬಾಲು ಬಿದ್ದಿದ್ದಾನೆ. ಈ ವೇಳೆ ಆರೋಪಿಯು, ಪ್ರಿಯತಮನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. </p><p>ಪ್ರಾಥಮಿಕ ತನಿಖೆಯ ವೇಳೆ ಆರೋಪಿಯು ಭಿನ್ನ ರೀತಿಯ ಹೇಳಿಕೆಗಳನ್ನು ನೀಡಿದ್ದರಿಂದ ಅವಳನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.ಮದುವೆಗೆ ಹೋಗಲು ವಿಧಾನಸಭೆಗೆ ಚಕ್ಕರ್: ಈ ಋತುವಿನಲ್ಲಿ ಕಲಾಪವೇ ಬೇಡ ಎಂದ ಸಚಿವ..!.ತನ್ನದೇ ಆರತಕ್ಷತೆಗೆ ವಿಡಿಯೊ ಕಾನ್ಪರೆನ್ಸ್ನಲ್ಲಿ ಭಾಗಿಯಾದ ಹುಬ್ಬಳ್ಳಿ ಯುವತಿ.ವಾರ್ನರ್ ಬ್ರೋ ಸ್ಟುಡಿಯೊ ನೆಟ್ಫ್ಲಿಕ್ಸ್ ತೆಕ್ಕೆಗೆ: OTT ಬಳಕೆದಾರರಿಗೆ ಲಾಭವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ:</strong> ಪ್ರೀತಿಸುತ್ತಿದ್ದ ಹುಡುಗಿಯನ್ನು ಮದುವೆಯಾಗು ಎಂದು ಬಲವಂತ ಮಾಡಿದ ಯುವಕನನ್ನು, ಪ್ರಿಯತಮೆಯೇ ಕೊಲೆ ಮಾಡಿರುವ ಘಟನೆಯು ನಾಗಪುರದಲ್ಲಿ ಜರುಗಿದೆ. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ 25 ವರ್ಷದ ಯುವತಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ರತಿ ಸಾಹೇಬ್ರಾವ್ ದೇಶಮುಖ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. </p><p>ನಾಲ್ಕನೇ ವರ್ಷದ ಬಿಎಎಂಎಸ್ ವಿದ್ಯಾರ್ಥಿಯಾಗಿದ್ದ ರತಿ ಹಾಗೂ ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಬಾಲಾಜಿ ವಿನಾಯಕ ಕಲ್ಯಾಣ್(28) ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಈ ಸಂಬಂಧವನ್ನು ಆರೋಪಿಯ ತಂದೆ ವಿರೋಧಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p><p>ಗುರುವಾರ ಬಾಲಾಜಿಯು ತನ್ನ ಗೆಳತಿಗೆ ಮದುವೆಯಾಗುವಂತೆ ದುಂಬಾಲು ಬಿದ್ದಿದ್ದಾನೆ. ಈ ವೇಳೆ ಆರೋಪಿಯು, ಪ್ರಿಯತಮನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ. </p><p>ಪ್ರಾಥಮಿಕ ತನಿಖೆಯ ವೇಳೆ ಆರೋಪಿಯು ಭಿನ್ನ ರೀತಿಯ ಹೇಳಿಕೆಗಳನ್ನು ನೀಡಿದ್ದರಿಂದ ಅವಳನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.ಮದುವೆಗೆ ಹೋಗಲು ವಿಧಾನಸಭೆಗೆ ಚಕ್ಕರ್: ಈ ಋತುವಿನಲ್ಲಿ ಕಲಾಪವೇ ಬೇಡ ಎಂದ ಸಚಿವ..!.ತನ್ನದೇ ಆರತಕ್ಷತೆಗೆ ವಿಡಿಯೊ ಕಾನ್ಪರೆನ್ಸ್ನಲ್ಲಿ ಭಾಗಿಯಾದ ಹುಬ್ಬಳ್ಳಿ ಯುವತಿ.ವಾರ್ನರ್ ಬ್ರೋ ಸ್ಟುಡಿಯೊ ನೆಟ್ಫ್ಲಿಕ್ಸ್ ತೆಕ್ಕೆಗೆ: OTT ಬಳಕೆದಾರರಿಗೆ ಲಾಭವೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>