<p><strong>ಮುಂಬೈ</strong>: 20 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಜಲಗಾಂವ್ನ ಜಿಲ್ಲಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠವು, ವ್ಯಕ್ತಿಗೆ ₹2 ಲಕ್ಷ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಅಲ್ಲದೇ, ಬಂಧನ ಆದೇಶ ಹೊರಡಿಸಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ವೇತನದಲ್ಲಿ ಈ ಪರಿಹಾರ ಮೊತ್ತವನ್ನು ವಸೂಲಿ ಮಾಡುವಂತೆಯೂ ಆದೇಶಿಸಿದೆ.</p>.<p>ತಮ್ಮನ್ನು ಬಂಧಿಸುವಂತೆ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ, ದೀಕ್ಷಾಂತ ಸಪ್ಕಾಲೆ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಹಾಗೂ ಹಿತೇನ್ ವೆನೆಗಾವ್ಕರ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ನನ್ನನ್ನು ಬಂಧಿಸುವ ಕುರಿತು ಕಳೆದ ವರ್ಷ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಆಗ ತಕ್ಷಣವೇ ನನಗೆ ನೀಡಿರಲಿಲ್ಲ. ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿದ್ದ ನಾನು ಜಾಮೀನು ಪಡೆದು ಮೇನಲ್ಲಿ ಹೊರಗೆ ಬಂದಾಗ, ಈ ಬಂಧನ ಆದೇಶವನ್ನು ನನಗೆ ನೀಡಲಾಯಿತಲ್ಲದೇ, ನನ್ನನ್ನು ಮತ್ತೊಮ್ಮೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ದೀಕ್ಷಾಂತ ಅವರು ಮೇಲ್ಮನವಿಯಲ್ಲಿ ವಿವರಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ಬಂಧನ ಆದೇಶವನ್ನು ಹಲವು ತಿಂಗಳು ಕಾಲ ಜಾರಿ ಮಾಡದೇ ಇರಿಸಿ, ವ್ಯಕ್ತಿಯು ಜೈಲಿನಿಂದ ಹೊರಬಂದ ಬಳಿಕ ಆತನಿಗೆ ನೀಡಲಾಗಿದೆ. ಈ ಮೂಲಕ ಅರ್ಜಿದಾರನನ್ನು ಅಕ್ರಮವಾಗಿ ಬಂಧನಕ್ಕೆ ಒಳಪಡಿಸಿದಂತಾಗಿದೆ. ಇದರಿಂದ ಆತನ ಬದುಕುವ ಹಾಗೂ ವೈಯಕ್ತಿಕ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅಕ್ಟೋಬರ್ 1ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 20 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸುವಂತೆ ಜಲಗಾಂವ್ನ ಜಿಲ್ಲಾ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ರದ್ದುಗೊಳಿಸಿರುವ ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠವು, ವ್ಯಕ್ತಿಗೆ ₹2 ಲಕ್ಷ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಅಲ್ಲದೇ, ಬಂಧನ ಆದೇಶ ಹೊರಡಿಸಿದ್ದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ವೇತನದಲ್ಲಿ ಈ ಪರಿಹಾರ ಮೊತ್ತವನ್ನು ವಸೂಲಿ ಮಾಡುವಂತೆಯೂ ಆದೇಶಿಸಿದೆ.</p>.<p>ತಮ್ಮನ್ನು ಬಂಧಿಸುವಂತೆ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ, ದೀಕ್ಷಾಂತ ಸಪ್ಕಾಲೆ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಹಾಗೂ ಹಿತೇನ್ ವೆನೆಗಾವ್ಕರ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ನನ್ನನ್ನು ಬಂಧಿಸುವ ಕುರಿತು ಕಳೆದ ವರ್ಷ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿತ್ತು. ಆ ಆದೇಶವನ್ನು ಆಗ ತಕ್ಷಣವೇ ನನಗೆ ನೀಡಿರಲಿಲ್ಲ. ಬೇರೊಂದು ಪ್ರಕರಣದಲ್ಲಿ ಜೈಲಿನಲ್ಲಿದ್ದ ನಾನು ಜಾಮೀನು ಪಡೆದು ಮೇನಲ್ಲಿ ಹೊರಗೆ ಬಂದಾಗ, ಈ ಬಂಧನ ಆದೇಶವನ್ನು ನನಗೆ ನೀಡಲಾಯಿತಲ್ಲದೇ, ನನ್ನನ್ನು ಮತ್ತೊಮ್ಮೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ದೀಕ್ಷಾಂತ ಅವರು ಮೇಲ್ಮನವಿಯಲ್ಲಿ ವಿವರಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ಬಂಧನ ಆದೇಶವನ್ನು ಹಲವು ತಿಂಗಳು ಕಾಲ ಜಾರಿ ಮಾಡದೇ ಇರಿಸಿ, ವ್ಯಕ್ತಿಯು ಜೈಲಿನಿಂದ ಹೊರಬಂದ ಬಳಿಕ ಆತನಿಗೆ ನೀಡಲಾಗಿದೆ. ಈ ಮೂಲಕ ಅರ್ಜಿದಾರನನ್ನು ಅಕ್ರಮವಾಗಿ ಬಂಧನಕ್ಕೆ ಒಳಪಡಿಸಿದಂತಾಗಿದೆ. ಇದರಿಂದ ಆತನ ಬದುಕುವ ಹಾಗೂ ವೈಯಕ್ತಿಕ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಅಕ್ಟೋಬರ್ 1ರಂದು ಹೊರಡಿಸಿರುವ ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>