<p><strong>ಭಾಗ್ಪತ್(ಉತ್ತರ ಪ್ರದೇಶ): </strong>ಹೆಣ್ಣು ಮಕ್ಕಳ ಮದುವೆಗೆ ಚಿನ್ನ, ಬೆಳ್ಳಿ ಆಭರಣಗಳ ಬದಲಿಗೆ ಆಯುಧಗಳನ್ನು ಉಡುಗೊರೆಯಾಗಿ ನೀಡುವಂತೆ ಅಖಿಲ ಭಾರತ ಕ್ಷತ್ರಿಯ ಮಹಾಸಭಾ ಅಧ್ಯಕ್ಷ ಅಜಯ್ ಪ್ರತಾಪ್ ಸಿಂಗ್ ಹೇಳಿದ್ದಾರೆ.</p><p>ಗೌರಿಪುರ ಮಿಟ್ಲಿ ಗ್ರಾಮದಲ್ಲಿ ಭಾನುವಾರ ಠಾಕೂರ್ ಸಮುದಾಯದ ‘ಕೇಸರಿಯಾ ಮಹಾಪಂಚಾಯತ್’ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಆತ್ಮರಕ್ಷಣೆಗಾಗಿ ಹೆಣ್ಣು ಮಕ್ಕಳಿಗೆ ಆಯುಧವನ್ನು ಒದಗಿಸುವುದು ಆಭರಣಗಳನ್ನು ಉಡುಗೊರೆಯಾಗಿ ನೀಡುವುದಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ’ ಎಂದು ಹೇಳಿದ್ದಾರೆ.</p><p>ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>‘ಮದುವೆ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಚಿನ್ನ ಮತ್ತು ಬೆಳ್ಳಿಯ ಬದಲು ಕತ್ತಿ, ಕಠಾರಿ ಅಥವಾ ರಿವಾಲ್ವರ್ಗಳನ್ನು ಉಡುಗೊರೆಯಾಗಿ ನೀಡಬೇಕು. ರಿವಾಲ್ವರ್ ಖರೀದಿಸುವುದು ದುಬಾರಿಯಾಗಿದ್ದರೆ, ದೇಶಿ ನಿರ್ಮಿತ ಪಿಸ್ತೂಲ್ ಅನ್ನು ಕೊಡಬಹುದು’ ಎಂದಿದ್ದಾರೆ.</p><p>‘ಆಭರಣಗಳನ್ನು ಧರಿಸುವುದರಿಂದ ಅಪಾಯವೇ ಹೆಚ್ಚು. ಆದರೆ, ಶಸ್ತ್ರಾಸ್ತ್ರಗಳು ಮಹಿಳೆಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತವೆ’ ಎಂದು ಹೇಳಿದ್ದಾರೆ.</p><p>‘ಹೆಣ್ಣು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಕುಟುಂಬಗಳ ಪ್ರಾಥಮಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಮಾಜವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p><p>ಅಜಯ್ ಪ್ರತಾಪ್ ಸಿಂಗ್ ಅವರ ಹೇಳಿಕೆಯನ್ನು ಮಹಾಪಂಚಾಯತ್ನ ಉಳಿದ ಸದಸ್ಯರು ಬೆಂಬಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಗ್ಪತ್(ಉತ್ತರ ಪ್ರದೇಶ): </strong>ಹೆಣ್ಣು ಮಕ್ಕಳ ಮದುವೆಗೆ ಚಿನ್ನ, ಬೆಳ್ಳಿ ಆಭರಣಗಳ ಬದಲಿಗೆ ಆಯುಧಗಳನ್ನು ಉಡುಗೊರೆಯಾಗಿ ನೀಡುವಂತೆ ಅಖಿಲ ಭಾರತ ಕ್ಷತ್ರಿಯ ಮಹಾಸಭಾ ಅಧ್ಯಕ್ಷ ಅಜಯ್ ಪ್ರತಾಪ್ ಸಿಂಗ್ ಹೇಳಿದ್ದಾರೆ.</p><p>ಗೌರಿಪುರ ಮಿಟ್ಲಿ ಗ್ರಾಮದಲ್ಲಿ ಭಾನುವಾರ ಠಾಕೂರ್ ಸಮುದಾಯದ ‘ಕೇಸರಿಯಾ ಮಹಾಪಂಚಾಯತ್’ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಆತ್ಮರಕ್ಷಣೆಗಾಗಿ ಹೆಣ್ಣು ಮಕ್ಕಳಿಗೆ ಆಯುಧವನ್ನು ಒದಗಿಸುವುದು ಆಭರಣಗಳನ್ನು ಉಡುಗೊರೆಯಾಗಿ ನೀಡುವುದಕ್ಕಿಂತ ಹೆಚ್ಚು ಮೌಲ್ಯಯುತವಾಗಿದೆ’ ಎಂದು ಹೇಳಿದ್ದಾರೆ.</p><p>ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.</p><p>‘ಮದುವೆ ಸಂದರ್ಭದಲ್ಲಿ ಹೆಣ್ಣು ಮಕ್ಕಳಿಗೆ ಚಿನ್ನ ಮತ್ತು ಬೆಳ್ಳಿಯ ಬದಲು ಕತ್ತಿ, ಕಠಾರಿ ಅಥವಾ ರಿವಾಲ್ವರ್ಗಳನ್ನು ಉಡುಗೊರೆಯಾಗಿ ನೀಡಬೇಕು. ರಿವಾಲ್ವರ್ ಖರೀದಿಸುವುದು ದುಬಾರಿಯಾಗಿದ್ದರೆ, ದೇಶಿ ನಿರ್ಮಿತ ಪಿಸ್ತೂಲ್ ಅನ್ನು ಕೊಡಬಹುದು’ ಎಂದಿದ್ದಾರೆ.</p><p>‘ಆಭರಣಗಳನ್ನು ಧರಿಸುವುದರಿಂದ ಅಪಾಯವೇ ಹೆಚ್ಚು. ಆದರೆ, ಶಸ್ತ್ರಾಸ್ತ್ರಗಳು ಮಹಿಳೆಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತವೆ’ ಎಂದು ಹೇಳಿದ್ದಾರೆ.</p><p>‘ಹೆಣ್ಣು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ಕುಟುಂಬಗಳ ಪ್ರಾಥಮಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸಮಾಜವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p><p>ಅಜಯ್ ಪ್ರತಾಪ್ ಸಿಂಗ್ ಅವರ ಹೇಳಿಕೆಯನ್ನು ಮಹಾಪಂಚಾಯತ್ನ ಉಳಿದ ಸದಸ್ಯರು ಬೆಂಬಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>